Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಉತ್ತರ ಕ್ಷೇತ್ರ: ಸದಾನಂದಗೌಡ...

ಬೆಂಗಳೂರು ಉತ್ತರ ಕ್ಷೇತ್ರ: ಸದಾನಂದಗೌಡ ಬಿರುಸಿನ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ1 April 2019 9:56 PM IST
share
ಬೆಂಗಳೂರು ಉತ್ತರ ಕ್ಷೇತ್ರ: ಸದಾನಂದಗೌಡ ಬಿರುಸಿನ ಪ್ರಚಾರ

ಬೆಂಗಳೂರು,ಎ.1: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೋಮವಾರ ಬೆಳಗ್ಗೆ ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಬೆಳಿಗ್ಗೆ ನಂದಿನಿ ಬಡಾವಣೆಯಲ್ಲಿರುವ ಸರ್ಕ್ಯುಲರ್ ಪಾರ್ಕ್‍ನಲ್ಲಿ ಸಂಚರಿಸಿ ವಾಯುವಿಹಾರಕ್ಕೆ ಆಗಮಿಸಿದ ನಾಗರಿಕರ ಬಳಿ ಮತ ಯಾಚಿಸಿದರು.
ನಂತರ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಮತದಾರರನ್ನು ಭೇಟಿ ಮಾಡಿ ಕೇಂದ್ರ ಸರಕಾರದ ಸಾಧನೆಗಳು, ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ತಾವು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿ ಈ ಬಾರಿಯೂ ತಮಗೆ ಮತ ನೀಡಿ ಪುನರಾಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ತರಾಕಾರಿ ಮಾರುಕಟ್ಟೆ ಸಂಘದ ಪದಾಧಿಕಾರಿಗಳು ಮುಖಂಡ ಗೋವಿಂದಪ್ಪ ಅವರ ನೇತೃತ್ವದಲ್ಲಿ ಮತಯಾಚನೆಗೆ ಸಾಥ್ ನೀಡಿದರು. ಇದೇ ಸಂದರ್ಭದಲ್ಲಿ ವ್ಯಾಪಾರಿಗಳು, ಮಾರುಕಟ್ಟೆ ಸಂಘದವರು ಸದಾನಂದಗೌಡ ಅವರನ್ನು ಸನ್ಮಾನಿಸಿದರು.

ಮುಖಂಡರಾದ ನರೇಂದ್ರ ಬಾಬು, ಹರೀಶ್, ಶಂಕರಪ್ಪ, ರಾಜಣ್ಣ, ಪ್ರಸನ್ನ, ಎಂ.ಶ್ರೀನಿವಾಸ್, ರಾಜೇಂದ್ರ ಕುಮಾರ್, ಶಿವಾನಂದಮೂರ್ತಿ, ಗಂಗಹನುಮಯ್ಯ, ವೆಂಕಟೇಶ್ ಮೂರ್ತಿ, ಜಯಸಿಂಹ, ನಾಗೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ನಂದಿನಿ ಬಡಾವಣೆಯ ಕಂಠೀರವ ಟೆಂಟ್‍ನಿಂದ ಮಾರಪ್ಪನ ಪಾಳ್ಯ ಸರ್ವೀಸ್ ರಸ್ತೆ ಮೂಲಕ ರಾಮಕೃಷ್ಣ ನಗರಕ್ಕೆ ತೆರೆದ ಜೀಪ್‍ನಲ್ಲಿ ಸಂಚರಿಸಿದ ಸದಾನಂದಗೌಡರು ಮತ ಯಾಚಿಸಿದರು.

ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಸದಾನಂದಗೌಡರು, ಬಾಲಾಕೋಟ್ ದಾಳಿಗೆ ನಿಮಗೆ ಪ್ರೇರಣೆಯೇನು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾನುವಾರ ನಡೆದ 'ನಾನೂ ಚೌಕಿದಾರ' ಕಾರ್ಯಕ್ರಮದಲ್ಲಿ ರಾಜಸ್ತಾನದ ಯುವಕನೊಬ್ಬ ಪ್ರಶ್ನಿಸಿದ. ಇದಕ್ಕೆ ಮೋದಿಯವರು ಸ್ಥಿರ ಸರಕಾರವೇ ಕಾರಣ ಎಂದು ಹೇಳಿದ್ದನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.

ಮಿಲಿಟರಿ ಮೇಲೆ ನಂಬಿಕೆಯಿರಲಿಲ್ಲ
ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ ಸರಕಾರಗಳಿಗೆ ಮಿಲಿಟರಿಯ ಮೇಲೆ ನಂಬಿಕೆಯಿರಲಿಲ್ಲ. ಆದರೆ ಮೋದಿಯವರು ಮಿಲಿಟರಿಗೆ ಸ್ವಾತಂತ್ರ್ಯ ನೀಡಿ ಪ್ರೋತ್ಸಾಹ ನೀಡಿದ್ದರಿಂದ ಪಾಕಿಸ್ತಾನದ ನೆಲಕ್ಕೇ ನುಗ್ಗಿ ದಾಳಿ ಮಾಡಲಾಯಿತು ಎಂದು ಹೇಳಿದರು.

ಪುಲ್ವಾಮಾ ದಾಳಿಯ ನಂತರ ದೇಶದ 130 ಕೋಟಿ ಜನತೆ ಸರಕಾರದ ಬೆನ್ನಿಗೆ ನಿಂತರು. ಪ್ರಾಣತ್ಯಾಗ ಮಾಡಲು ಯೋಧರು ಸಿದ್ಧರಿದ್ದರು. ಈ ಅಂಶಗಳೇ ಮೋದಿಯವರಿಗೆ ಉಗ್ರರನ್ನು ಮಟ್ಟ ಹಾಕಲು ಪ್ರೇರಣೆ ನೀಡಿದವು ಎಂದು ವಿವರಿಸಿದರು.

ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಸರಣಿ ರಜೆಗಳಿವೆ ಎಂದು ಪ್ರವಾಸಕ್ಕೆ ಅಥವಾ ಹುಟ್ಟೂರಿಗೆ ತೆರಳಬೇಡಿ. ಮತದಾನ ಮಾಡಿದ ನಂತರ ನಿಮ್ಮ ಕಾರ್ಯಕ್ರಮಗಳನ್ನು ಹಾಕಿಕೊಳ್ಳಿ. ದೇಶದಲ್ಲಿ ಮತ್ತೊಮ್ಮೆ ಮೋದಿ ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದ್ದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ. ನನ್ನನ್ನು ಪುನಃ ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X