Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪ್ಪ ರೈತರ ಬಾಯಿಗೆ ಮಣ್ಣುಹಾಕಿದರೆ, ಮಗ...

ಅಪ್ಪ ರೈತರ ಬಾಯಿಗೆ ಮಣ್ಣುಹಾಕಿದರೆ, ಮಗ ಬಂಡೆ ಎಳೆದ: ಆರ್‍ಟಿಐ ಕಾರ್ಯಕರ್ತ ಅಬ್ರಹಾಂ

ವಾರ್ತಾಭಾರತಿವಾರ್ತಾಭಾರತಿ1 April 2019 10:07 PM IST
share
ಅಪ್ಪ ರೈತರ ಬಾಯಿಗೆ ಮಣ್ಣುಹಾಕಿದರೆ, ಮಗ ಬಂಡೆ ಎಳೆದ: ಆರ್‍ಟಿಐ ಕಾರ್ಯಕರ್ತ ಅಬ್ರಹಾಂ

ಮಂಡ್ಯ, ಎ.1: ಅಶೋಕ್ ಖೇಣಿ ಮಾಲಕತ್ವದ ನೈಸ್ ಕಂಪನಿಗೆ ಮಂಡ್ಯ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ಬಿಟ್ಟುಕೊಡಲು ಕಾರಣರಾದ ದೇವೇಗೌಡರ ಕುಟುಂಬದ ಸದಸ್ಯರಿಗೆ ಜಿಲ್ಲೆಯ ರೈತರು ಮತ ಹಾಕಬಾರದು ಎಂದು ಆರ್‍ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲಹೆ ನೀಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೈಸ್ ರಸ್ತೆ ಮತ್ತು ಟೌನ್‍ಶಿಪ್‍ಗೆ ಜಮೀನನ್ನು ಬಿಟ್ಟುಕೊಟ್ಟು ಅಪ್ಪ ದೇವೇಗೌಡರು ರೈತರ ಬಾಯಿಗೆ ಮಣ್ಣು ಹಾಕಿದರೆ, ಮಗ ಕುಮಾರಸ್ವಾಮಿ ಅವರ ಬದುಕಿನ ಮೇಲೆ ಬಂಡೆ ಎಳೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನೈಸ್ ರಸ್ತೆಯ 1, 2, 4, 5 ಟೌನ್‍ಶಿಪ್‍ಗೆ ಇಲಾಖೆ ಅನುಮೋದನೆ ಪ್ರಕಾರ ರೈತರ ಸಾವಿರಾರು ಎಕರೆ ಜಮೀನು ಬಿಟ್ಟುಕೊಡಲಾಗಿತ್ತು. ಈ ನಡುವೆ ದೇವೇಗೌಡರು 7ನೇ ಟೌನ್‍ಶಿಪ್‍ಗೆ ಶ್ರೀರಂಗಪಟ್ಟಣ ಭಾಗದ 4,285 ಎಕರೆ  ಜಮೀನನ್ನು ನೀಡಿದರು. ಇದು ಬೋಗಸ್, ಇದು ಮಹಾಮೋಸ ಎಂದು ಅವರು ಆರೋಪಿಸಿದರು.

ನಂತರ ನೈಸ್ ಕಂಪನಿ ವಿರುದ್ಧ ದೇವೇಗೌಡರು ಬಂಡೆದ್ದರು. ಖೇಣಿ ಈ ರೀತಿ ಮೋಸ ಮಾಡುತ್ತಾರೆಂದು ಗೊತ್ತಿರಲಿಲ್ಲವೆಂದು ಜನರೆದುರು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ತಮ್ಮ ಮಗ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಅಡ್ವೋಕೇಟ್ ಜನರಲ್ ಮೂಲಕ ಖೇಣಿ ವಾದ ಸಮರ್ಥಿಸಿ ಅಫಿದಾವಿತ್ ಸಲ್ಲಿಸಲಾಗಿದೆ. ಇದು ರೈತರ ಪರ ಎನ್ನಬಹುದೆ ಎಂದು ಅವರು ಪ್ರಶ್ನಿಸಿದರು.

ಇಂದು ಸರಕಾರವೇ ಮೈಸೂರು-ಬೆಂಗಳೂರು ಹೆದ್ದಾರಿ ವಿಸ್ತರಣೆ ಮಾಡುತ್ತಿದ್ದು, ನೈಸ್ ರಸ್ತೆಯ ಅವಶ್ಯವಿಲ್ಲ. ನೈಸ್ ಯೋಜನೆ ರದ್ದಾಗಿದೆ. ನಿಖಿಲ್‍ಗೆ ರೈತರ ಓಟು ಬೇಕಾದರೆ, ಸ್ವಾಧೀನಪಡಿಸಿಕೊಂಡಿರುವ ಜಮೀನನ್ನು ರೈತರಿಗೆ ಬಿಟ್ಟುಕೊಡುವಂತೆ ಅಪ್ಪ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅಶೋಕ್ ಖೇಣಿ ಅವರನ್ನು ಕೇಳಲಿ ಎಂದು ಅವರು ತಾಕೀತು ಮಾಡಿದರು.

ತಮ್ಮ ರಾಜಕೀಯಕ್ಕೆ ಬೆಂಬಲವಾಗಿ ನಿಂತ ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು ರೈತರು ತಮ್ಮ ಸಾವಿರಾರು ಎಕರೆ ಜಮೀನು ಕಳೆದುಕೊಳ್ಳುವಂತೆ ದೇವೇಗೌಡರ ಕುಟುಂಬ ಮಾಡಿದೆ. ಇವರಿಗೆ ತಮ್ಮ ಕುಟುಂಬದ ಸದಸ್ಯರ ಪರವಾಗಿ ಮತ ಕೇಳುವ ನೈತಿಕತೆ ಇಲ್ಲ ಎಂದು ಅಬ್ರಹಾಂ ಪ್ರತಿಪಾದಿಸಿದರು.

ದೇವೇಗೌಡರ ಕುಟುಂಬ ನಾಟಕವಾಡಿಕೊಂಡೇ ಬಂದಿದ್ದು, ಮುಂದುವರಿಸಲು ಸಾಧ್ಯವಿಲ್ಲ. ಜಿಲ್ಲೆಯ ರೈತರು ನಿಖಿಲ್‍ಗೆ ಓಟು ಹಾಕಿದರೆ ತಾವೇ ಆತ್ಮಹತ್ಯೆ ಮಾಡಿಕೊಂಡಂತೆ. ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಅವರು ಮನವಿ ಮಾಡಿದರು.

ನಿಖಿಲ್ ಸಲ್ಲಿಸಿರುವ ನಾಮಪತ್ರದಲ್ಲಿ ಕೆಲವು ಸುಳ್ಳು ಮಾಹಿತಿಗಳನ್ನು ನೀಡಲಾಗಿದೆ ಎಂದು ಆರೋಪಿಸಿದ ಅವರು, ಮಿರಿಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್‍ಗೆ 50 ಲಕ್ಷ ರೂ. ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಆ ಕಂಪನಿ  ಅಸ್ತಿತ್ವದಲ್ಲೇ ಇಲ್ಲ. ಇದು ಶೆಲ್ ಕಂಪನಿ ಎಂದು ಆರೋಪಿಸಿದರು.

ಫಿಜ್ಜಾ ಡೆವಲಪರ್ಸ್‍ಗೆ ಜಮೀನು ನೀಡಿ 11,52,12,120 ರೂ. ಮುಂಗಡ ತೆಗೆದುಕೊಂಡಿರುವುದಾಗಿಯೂ ನಿಖಿಲ್ ಅಫಿದಾವಿತ್‍ನಲ್ಲಿ ಹೇಳಿದ್ದು, ಕೃಷಿ ಜಮೀನನ್ನು ನೀಡುವ ಹಾಗಿಲ್ಲ. ಅಲ್ಲದೆ, ಈ ಫಿಜ್ಜಾ ಡೆವಲಪರ್ಸ್ ಬಳಿ ಅನುಮತಿ ಬದ್ದ ಇರುವ ಬಂಡವಾಳ ಕೇವಲ 10 ಕೋಟಿ ರೂ. ಹಾಗಿದ್ದರೆ ಸುಮಾರು 12 ಕೋಟಿ ರೂ. ಮುಂಗಡ ಹಣ ಹೇಗೆ ಪಡೆಯಲಾಗಿದೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.

ರೈತಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್ ಹಾಗೂ ಗೋಪಾಲಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X