Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕನ್ನಡಿಯೊಳಗೆ ಹಿಡಿದಿಟ್ಟ ಕಾವ್ಯಾನಂದ

ಕನ್ನಡಿಯೊಳಗೆ ಹಿಡಿದಿಟ್ಟ ಕಾವ್ಯಾನಂದ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ2 April 2019 12:12 AM IST
share
ಕನ್ನಡಿಯೊಳಗೆ ಹಿಡಿದಿಟ್ಟ ಕಾವ್ಯಾನಂದ

ಕನ್ನಡದ ಹೊಸ ತಲೆಮಾರಿಗೆ ಹಿರಿಯ ಕವಿಗಳನ್ನು ಪರಿಚಯಿಸುವ ಅಗತ್ಯ ಹಿಂದೆಂದಿಗಿಂತ ಹೆಚ್ಚಿದೆ. ಸಾಧಾರಣವಾಗಿ ಕುವೆಂಪು, ಮಾಸ್ತಿ, ಬೇಂದ್ರೆಯಂತಹ ಕವಿಗಳ ಕುರಿತಂತೆ ಯುವ ಸಾಹಿತ್ಯಾಭಿಮಾನಿಗಳು ಸಾಮಾನ್ಯ ಜ್ಞಾನವನ್ನು ಹೊಂದಿರುತ್ತಾರೆ. ಆದರೆ ಅವರಿಗಿಂತ ಎರಡನೆಯ ಹಂತದಲ್ಲಿರುವ ಹಿರಿಯ ಕವಿಗಳನ್ನು ಬಹುತೇಕ ಮರೆತೇ ಬಿಟ್ಟಿದ್ದಾರೆ. ಅಂತಹ ಕವಿಗಳಲ್ಲಿ ಕಾವ್ಯಾನಂದ ಕೂಡ ಒಬ್ಬರು. ಕಾವ್ಯನಂದ ಎನ್ನುವುದು ಸಿದ್ದಯ್ಯ ಪುರಾಣಿಕರ ಕಾವ್ಯನಾಮ. ಇವರ ವಿಶೇಷತೆಯೆಂದರೆ ವೃತ್ತಿಯಲ್ಲಿ ಇವರು ಐಎಎಸ್ ಅಧಿಕಾರಿ.ರಾಜ್ಯ ಸರಕಾರದ ವಿವಿಧ ಹುದ್ದೆಗಳಲ್ಲಿ ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಿದ ಡಾ. ಪುರಾಣಿಕರು ಅದ ಜೊತೆ ಜೊತೆಗೇ ಸಾಹಿತ್ಯ ಕೃಷಿಯನ್ನು ಕೂಡ ನಿರಂತರವಾಗಿ ಮಾಡಿಕೊಂಡು ಬಂದರು. ಅವರ ಬದುಕು ಮತ್ತು ಬರಹಗಳ ಮೇಲೆ ಬೆಳಕು ಚೆಲ್ಲುವ ಕೃತಿ ಪ್ರಕಾಶ ಗಿರಿಮಲ್ಲನವರ ‘‘ಕಾವ್ಯಾನಂದರ ಬದುಕು ಮತ್ತು ಕಾವ್ಯ’’. ಕೃತಿಯನ್ನು ಎರಡು ಭಾಗವಾಗಿ ವಿಂಗಡಿಸಲಾಗಿದೆ. ಮೊದಲನೆಯ ಭಾಗದಲ್ಲಿ ಅವರ ಬದುಕಿಗೆ ಆದ್ಯತೆಯನ್ನು ನೀಡಿದ್ದಾರೆ. ಜನನ, ಬಾಲ್ಯ, ವಿದ್ಯಾಭ್ಯಾಸ, ಸೇವಾಜೀವನ, ಕನ್ನಡ ಕಟ್ಟುವ ಕೆಲಸ ಇವುಗಳನ್ನು ಇಲ್ಲಿ ವಿವರಿಸ ಲಾಗಿದೆ. ಎರಡನೆಯ ಭಾಗದಲ್ಲಿ ಕಾವ್ಯಾನಂದರ ಕಾವ್ಯ ಸಮೀಕ್ಷೆಯನ್ನು ಮಾಡಲಾಗಿದೆ.
ಒಬ್ಬ ಉನ್ನತ ಅಧಿಕಾರಿಯಾಗಿ ಸಿದ್ದಯ್ಯ ಪುರಾಣಿಕರು ಜನರಿಂದ ಅಂತರ ಕಾಪಾಡಿ ಕೊಂಡು ಬದುಕಲಿಲ್ಲ. ಜನಸಾಮಾನ್ಯರ ಕಷ್ಟ ಸುಖಗಳ ಜೊತೆಗೆ ಬೆರೆಯಲು ಆ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡಿ ರುವ ವಿವರಗಳನ್ನು ಈ ಕೃತಿಯಲ್ಲಿ ನೀಡಲಾ ಗಿದೆ. ಕವಿ ಮನಸ್ಸಿನ ಅಧಿಕಾರಿಯೊಬ್ಬ ಮಾಡಬಹುದಾದ, ಏರಬಹುದಾದ ಎತ್ತರವನ್ನು ಇದು ತಿಳಿಸುತ್ತದೆ. ಸರಕಾರಿ ಸೇವೆಯಿಂದ ನಿವೃತ್ತಿಯಾದರೂ ಸಾರ್ವಜನಿಕ ಸೇವೆಯಿಂದ ಡಾ. ಪುರಾಣಿಕರು ನಿವೃತ್ತಿಯಾಗಲಿಲ್ಲ. ಪ್ರವೃತ್ತಿ ಮಾರ್ಗ ಹಿಡಿದರು. ಬಸವ ಸಮಿತಿಯ ಸಂಶೋಧನಾ ಪ್ರಕಟನಾ ವಿಭಾಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಬಸವ ಪಥ ಮತ್ತು ಬಸವ ಜರ್ನಲ್‌ಗಳ ಪ್ರಧಾನ ಸಂಪಾದಕರಾಗಿ ಒಂಬತ್ತು ವರ್ಷಗಳ ಕಾಲ ದುಡಿದರು ಎಂದು ಕೃತಿ ಹೇಳುತ್ತದೆ. ಸಿದ್ದಯ್ಯ ಪುರಾಣಿಕರ ಕಾವ್ಯವನ್ನು ವಿಶ್ಲೇಷಿಸುತ್ತಾ ಎಷ್ಟು ಹೇಳಿದರೂ ಮುಗಿಯದು ಎನ್ನುವುದಕ್ಕೆ ಕಾವ್ಯಾನಂದರ ಸಾಲುಗಳನ್ನೇ ಉದಾಹರಣೆಯಾಗಿ ನೀಡುತ್ತಾರೆ
‘‘ಅನ್ನಬಹುದೇನಯ್ಯ ಹಾಡು ಮುಗಿಯಿತ್ತೆಂದು
ಜನ್ನದಾಕಾಶದಲ್ಲದರ ಬೇರು
ಕನ್ನಡಿಯೊಳೆಷ್ಟು ಹಿಡಿಸೀತು ಕನಕಾಚಲವು
ಕೊಡಕೆ ಹಿಡಿಸೀತೆಷ್ಟು ಕಡಲ ನೀರು....’’
ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 100. ಮುಖಬೆಲೆ 100 ರೂಪಾಯಿ.
-ಕಾರುಣ್ಯಾ

share
-ಕಾರುಣ್ಯಾ
-ಕಾರುಣ್ಯಾ
Next Story
X