Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾನದ ವೇಳೆ ಮತದಾರರ ವಿಶ್ವಾಸ...

ಮತದಾನದ ವೇಳೆ ಮತದಾರರ ವಿಶ್ವಾಸ ಹೆಚ್ಚಿಸುವ ವಿವಿಪ್ಯಾಟ್

ವಾರ್ತಾಭಾರತಿವಾರ್ತಾಭಾರತಿ2 April 2019 7:27 PM IST
share
ಮತದಾನದ ವೇಳೆ ಮತದಾರರ ವಿಶ್ವಾಸ ಹೆಚ್ಚಿಸುವ ವಿವಿಪ್ಯಾಟ್

ಉಡುಪಿ, ಎ.2: ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವೇ ಮತದಾನ. ಯಾವುದೇ ಧರ್ಮ, ಅಂತಸ್ತು, ಲಿಂಗಬೇಧವಿಲ್ಲದೇ ಪ್ರತಿಯೊಬ್ಬ ನಾಗರಿಕನೂ ಸಮಾನವಾಗಿ ಪಡೆದಿರುವ ಮತದಾನದ ಹಕ್ಕು, ತಮ್ಮ ಆಯ್ಕೆಯ ಯೋಗ್ಯ ಪ್ರತಿನಿಧಿಯನ್ನು ಆರಿಸಲು ದೊರೆತಿರುವ ಅವಕಾಶ ಮತ್ತು ಮುಕ್ತ ಸ್ವಾತಂತ್ರ.

ಈ ಮತದಾನ ಪ್ರಕ್ರಿಯೆಯಲ್ಲಿ ಮತದಾರ ತನ್ನ ಆಯ್ಕೆಯ ಅಭ್ಯರ್ಥಿಗೆ ಗೌಪ್ಯವಾಗಿ ಚಲಾಯಿಸುವ ಮತ, ತಾನು ಆಯ್ಕೆ ಮಾಡಿದ ವ್ಯಕ್ತಿಗೇ ದೊರೆತಿದೆ ಎಂಬುದನ್ನು ಖಾತರಿ ಪಡಿಸಲು ಚುನಾವಣಾ ಆಯೋಗ ಒದಗಿಸಿರುವ ವಿವಿ ಪ್ಯಾಟ್‌ಯಂತ್ರ (Voter Verifiable Paper Audit Trail-VVPAT) ಇದು ಮತದಾನದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ವಿಶ್ವಾಸಾರ್ಹತೆಯನ್ನು ಮೂಡಿಸುತ್ತದೆ.

ಹಿಂದೆ ಮತದಾನ ಸಂದರ್ದಲ್ಲಿ ಮತಪತ್ರಗಳನ್ನು ಬಳಸಲಾಗುತ್ತಿತ್ತು. ಇದರಿಂದ ಚುನಾವಣಾ ಪ್ರಕ್ರಿಯೆ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿತ್ತು. ಇದನ್ನು ಸರಿಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆಯನ್ನು ಜಾರಿಗೆ ತಂದಿತು. ಇದರಿಂದ ಶೀಘ್ರದಲ್ಲಿ ಮತದಾನ ಮುಗಿದು, ಅತ್ಯಂತ ನಿಖರವಾಗಿ ಹಾಗೂ ತ್ವರಿತಗತಿಯಲ್ಲಿ ಅ್ಯರ್ಥಿ ಯ ಆಯ್ಕೆ ಘೋಷಣೆ ನಡೆಯಲು ಸಾದ್ಯವಾಗುವಂತಾಗಿದೆ.

ಆದರೆ ಎಲೆಕ್ಟ್ರಾನಿಕ್ ಮತಯಂತ್ರಗಳ ಕುರಿತಂತೆ ನಡೆದಿರುವ ಅಪಪ್ರಚಾರ ಹಾಗೂ ಕೇಳಿಬರುತ್ತಿರುವ ಆರೋಪಗಳಿಂದ ಸಾಮಾನ್ಯ ಮತದಾರ ಗೊಂದಲ ಕ್ಕೊಳಗಾಗುವಂತಾಗಿದೆ. ಇಂಥ ಸಂದರ್ಭದಲ್ಲಿ, ಮತದಾರರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಮತಯಂತ್ರ(ಇವಿಎಂ)ಗಳಿಗೆ ವಿವಿ ಪ್ಯಾಟ್ ಯಂತ್ರಗಳನ್ನು ಚುನಾವಣಾ ಆಯೋಗ ಅಳವಡಿಸಲು ಪ್ರಾರಂಭಿಸಿದೆ.

ಏನಿದು ವಿವಿ ಪ್ಯಾಟ್: ವೋಟರ್ ವೆರಿಫಯೇಬಲ್ ಪೇಪರ್ ಆಡಿಟ್ ಟ್ರಯಲ್ (VVPAT)  ಹೆಸರೇ ಸೂಚಿಸುವಂತೆ, ಮತದಾರ ತಾನು ಹಾಕಿದ ಅಮೂಲ್ಯ ಮತ ತನ್ನ ಆಯ್ಕೆಯ ಅಭ್ಯರ್ಥಿಗೆ ಬಿದ್ದಿದೆ ಎಂಬುದನ್ನು ಮತದಾರ ನಿಗೆ ಆ ಕ್ಷಣದಲ್ಲಿ ತೋರಿಸುವ ಪೇಪರ್ ಮುದ್ರಿತ ಯಂತ್ರ ಇದು.

ಮತಗಟ್ಟೆಯಲ್ಲಿ ಮತ ಚಲಾಯಿಸುವ ಎಲೆಕ್ಟ್ರಾನಿಕ್ ಮತಯಂತ್ರದ ಪಕ್ಕದಲ್ಲಿ ಮತ್ತೊಂದು ಯಂತ್ರ ಇರುತ್ತದೆ. ಮತಯಂತ್ರದಲ್ಲಿ ನೀವು ನಿಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಚಲಾಯಿಸಿದಾಗ, ವಿವಿಪ್ಯಾಟ್ ಯಂತ್ರದಲ್ಲಿ ನೀವು ಚಲಾಯಿಸದ ಮತ, ನೀವು ಮತಯಂತ್ರದಲ್ಲಿ ಆಯ್ಕೆ ಮಾಡಿದ ಅಭ್ಯರ್ಥಿಗೆ  ಚಲಾವಣೆಯಾಗಿರುವ ಕುರಿತ, ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಮತ್ತು ಚಿಹ್ನೆಯನ್ನು ಒಳಗೊಂಡು ಚೀಟಿಯ ಮುದ್ರಿತ ವಿವರಗಳನ್ನು 7 ಸೆಕೆಂಡ್‌ಗಳ ಕಾಲ ವೀಕ್ಷಿಸಲು ವಿವಿಪ್ಯಾಟ್‌ನಿಂದ ಸಾದ್ಯವಾಗುತ್ತದೆ.

ಅನಂತರ ಆ ಎಲ್ಲಾ ವಿವರದ ಚೀಟಿ, ವಿವಿಪ್ಯಾಟ್ ಯಂತ್ರದಲ್ಲಿ ಅಳವಡಿಸಿ ರುವ ಪೆಟ್ಟಿಗೆಯಲ್ಲಿ ಮುದ್ರಿತವಾಗಿ ಬೀಳುತ್ತದೆ. ಈ ಮುದ್ರಿತ ಪ್ರತಿಯನ್ನು ಯಾರಿಗೂ ನೀಡುವುದಿಲ್ಲ. ವಿವಿ ಪ್ಯಾಟ್‌ನಲ್ಲಿ ಸೀಲ್ ಮಾಡಿದ ಬಾಕ್ಸ್‌ನಲ್ಲಿ ಈ ಪ್ರತಿ ಇರಲಿದೆ. ಇದರಿಂದ ಯಾವುದೇ ಗೊಂದಲ, ಅನುಮಾನಗಳಿಗೆ ಅವಕಾಶವಿಲ್ಲದಂತೆ, ತನ್ನ ಅಮೂಲ್ಯ ಮತ ತನ್ನ ಆಯ್ಕೆಯ ಅ್ಯರ್ಥಿಗೆ ಚಲಾವಣೆಯಾಗಿದೆ ಎಂಬುದನ್ನು ಸ್ವತಹ ಮತದಾರರೇ ಖಾತ್ರಿ ಪಡಿಸಿಕೊಳ್ಳ ಬಹುದಾಗಿದೆ.

ಈ ವಿವಿ ಪ್ಯಾಟ್‌ಯಂತ್ರಗಳನ್ನು ಭಾರತ ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ಸರಕಾರಿ ಸ್ವಾಮ್ಯದ ಬಿಇಎಲ್ ಕಂಪೆನಿ ಅಭಿವೃದ್ದಿಪಡಿಸಿದೆ. ಚುನಾವಣಾ ಸಮಯದಲ್ಲಿ ಸಾರ್ವಜನಿಕರಲ್ಲಿ ಮತದಾನ ಪ್ರಕ್ರಿಯೆ ಕುರಿತು ಇನ್ನಿಲ್ಲದ ಗೊಂದಲ ಮೂಡಿಸುವ ಕಿಡಿಗೇಡಿಗಳಿಗೆ ಈಗ ಶಿಕ್ಷೆಯೂ ಆಗಲಿದೆ. ಏಕೆಂದರೆ ವಿವಿಪ್ಯಾಟ್ ಯಂತ್ರದ ವಿರುದ್ದ ತಪ್ಪು ಆರೋಪಗಳನ್ನು ಮಾಡುವ ಕಿಡಿಗೇಡಿಗಳಿಗೆ ಕಾರಾಗೃಹವಾಸದ ಶಿಕ್ಷೆಯೂ ಆಗುವ ಸಾಧ್ಯತೆ ಇದೆ.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸಹ ಈ ವಿವಿ ಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದ್ದು, ಈ ಯಂತ್ರದ ಕಾರ್ಯ ವೈಖರಿ ಕುರಿತಂತೆ ಪ್ರತಿಯೊಬ್ಬ ಸಾರ್ವಜನಿಕರಿಗೂ (ಮತದಾರ) ಜಿಲ್ಲಾ ಸ್ವೀಪ್ ಸಮಿತಿಗಳ ವತಿಯಿಂದ ಸಾರ್ವಜನಿಕ ಸ್ಥಳದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಮತದಾರರಿಗೆ ತಮ್ಮ ಮತ ಚಲಾವಣೆಯ ಬಗ್ಗೆ ಖಾತ್ರಿ ಮೂಡಿಸಲಾಗುತ್ತಿದೆ.

ಆದ್ದರಿಂದ ಜಿಲ್ಲೆಯಲ್ಲಿ ಎ.18 ಮತ್ತು 23ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಯಾವುದೇ ಅನುಮಾನ, ಗೊಂದಲಗಳಿಗೆ ಒಳಗಾಗದೇ,ವಿವೇಚನೆ ಬಳಸಿ ನಿಮ್ಮ ಆಯ್ಕೆಯ ಅ್ಯರ್ಥಿಗೆ ಮತ ಚಲಾಯಿಸಿ. ನಿಮ್ಮ ಮತ ಸರಿಯಾದ ವ್ಯಕ್ತಿಗೆ ಹಾಕಿರುವ ಕುರಿತು ವಿವಿ ಪ್ಯಾಟ್‌ನಿಂದ ಖಾತರಿಪಡಿಸಿಕೊಳ್ಳಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ 1111 ಮತಗಟ್ಟೆಗಳ ವ್ಯಾಪ್ತಿಯ ಒಂದು ಲಕ್ಷಕ್ಕೂ ಅಧಿಕ ಮತದಾರರಿಗೆ ವಿವಿಪ್ಯಾಟ್ ಕುರಿತು ಅರಿವು ಮೂಡಿಸ ಲಾಗಿದೆ. ಚುನಾವಣೆಯಲ್ಲಿ ಎಲ್ಲರೂ ಭಾಗವಹಿಸಬೇಕೆಂಬ ಉದ್ದೇಶದಿಂದ, ವಿಕಲಚೇತನರು, ಲಿಂಗತ್ವ ಅಲ್ಪಸಂಖ್ಯಾತರು, ಮೂಲನಿವಾಸಿಗಳು, ಮಹಿಳೆ ಯರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಮತದಾರರಿಗೆ ವಿವಿ ಪ್ಯಾಟ್‌ನ ಪ್ರಾತ್ಯಕ್ಷಿಕೆ ನೀಡಲಾಗಿದೆ. ಜಿಲ್ಲಾ ಸ್ವೀಪ್ ವತಿಯಿಂದ ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳ ವತಿಯಿಂದ ಪ್ರತಿದಿನ ನಡೆಯುತ್ತಿರುವ ಸ್ವೀಪ್ ಕಾರ್ಯಕ್ರಮಗಳಲ್ಲಿ ಸಹ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ.

- ಸಿಂಧೂ ಬಿ.ರೂಪೇಶ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X