Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟಿಪ್ಪು ಜಯಂತಿ ವಿರುದ್ಧ ಹೇಳಿಕೆಯೂ ಪಕ್ಷ...

ಟಿಪ್ಪು ಜಯಂತಿ ವಿರುದ್ಧ ಹೇಳಿಕೆಯೂ ಪಕ್ಷ ವಿರೋಧಿ ಚಟುವಟಿಕೆ: ಅಮೃತ್ ಶೆಣೈ

ವಾರ್ತಾಭಾರತಿವಾರ್ತಾಭಾರತಿ2 April 2019 10:03 PM IST
share
ಟಿಪ್ಪು ಜಯಂತಿ ವಿರುದ್ಧ ಹೇಳಿಕೆಯೂ ಪಕ್ಷ ವಿರೋಧಿ ಚಟುವಟಿಕೆ: ಅಮೃತ್ ಶೆಣೈ

ಉಡುಪಿ, ಎ. 2: ಮಂತ್ರಿಯಾಗಿದ್ದ ಪ್ರಮೋದ್ ಮಧ್ವರಾಜ್ ರಾಜ್ಯ ಸರಕಾರ ಆಚರಿಸಿದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳದೆ, ನಂತರ ಟಿಪ್ಪು ಜಯಂತಿ ವಿರುದ್ದ ಹೇಳಿಕೆ ನೀಡಿರುವುದು ಕೂಡ ಪಕ್ಷ ವಿರೋಧಿ ಚಟುವಟಿಕೆಯೇ ಆಗು ತ್ತದೆ. ನನ್ನದು ಪಕ್ಷ ವಿರೋಧಿ ಚಟುವಟಿಕೆಯಾದರೆ ಈ ವಿಚಾರ ಕೂಡ ಚರ್ಚೆಗೆ ಬರಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅಮೃತ್ ಶೆಣೈ ಹೇಳಿದ್ದಾರೆ.

ಉಡುಪಿ ಪಿಪಿಸಿ ರಸ್ತೆಯಲ್ಲಿರುವ ತನ್ನ ಚುನಾವಣಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಛಿಯಲ್ಲಿ ಮಾತನಾಡಿದ ಅವರು, ಅದೇ ರೀತಿ ಬಿಜೆಪಿಗೆ ಹೋಗುವು ದಾಗಿ ಹೇಳುವುದು ಕೂಡ ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಹೀಗೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಕಾಂಗ್ರೆಸ್ ಈವರೆಗೆ ನೋಟೀಸ್ ಕೂಡ ನೀಡಿಲ್ಲ, ಉಚ್ಛಾಟನೆಯೂ ಮಾಡಿಲ್ಲ ಎಂದು ಟೀಕಿಸಿದರು.

ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತು ಈವರೆಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ನಾನು ಗೊಂದಲದಲ್ಲಿದ್ದೇನೆ. ನಾನು ಸ್ಪರ್ಧೆ ಮಾಡುತ್ತಿರುವುದು ಜೆಡಿಎಸ್ ಅಭ್ಯರ್ಥಿಯ ವಿರುದ್ಧವೇ ಹೊರತು ಕಾಂಗ್ರೆಸ್ ವಿರುದ್ಧ ಅಲ್ಲ. ಹೀಗಾಗಿ ನನ್ನದ್ದು ಪಕ್ಷ ವಿರೋಧಿ ಚಟುವಟಿಕೆ ಎಂದು ನಾನು ಒಪ್ಪಲ್ಲ. ಒಂದು ವೇಳೆ ನನ್ನ ಮನಸ್ಸಿಗೆ ಹಾಗೆ ಅನಿಸಿದರೆ ಅದೇ ದಿನ ನಾನು ರಾಜೀನಾಮೆ ನೀಡುತ್ತೇನೆ ಎಂದರು.

ಮತದಾರರಿಗೆ ಗೊಂದಲ ಉಂಟಾಗುವುದರಿಂದ ಎಐಸಿಸಿಗೆ ರಾಜೀನಾಮೆ ನೀಡುವ ಬಗ್ಗೆ ಸದ್ಯವೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದ ಅವರು, ಮುಂದೆ ಕಾಂಗ್ರೆಸ್ ಸೇರಬೇಕೆ ಬೇಡವೇ ಎಂಬುದನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಜನರ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಗೆದ್ದು ಸಂಸದನಾದರೆ ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಶಕ್ತಿಗಳ ವಿರುದ್ಧ ಉಗ್ರ ಹೋರಾಟ ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಜೊತೆ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತೇನೆ. ತಿಂಗಳಿಗೊಮ್ಮೆ ಎರಡು ಜಿಲ್ಲೆಗಳ ಸಮಸ್ತ ಸಮುದಾಯಗಳ, ಉದ್ಯಮಿಗಳ, ಛೇಂಬರ್ ಆಫ್ ಕಾಮರ್ಸ್, ಬಿಲ್ಡರ್ಸ್‌, ವಿದ್ಯಾರ್ಥಿಗಳ ಸಭೆ ಕರೆದು ಸಂಸತ್ತಿನಲ್ಲಿ ಕೇಳುವ ಪ್ರಶ್ನೆಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಪ್ರತಿಯೊಂದು ನಿರ್ಧಾರವನ್ನು ಮತದಾರರ ಮುಂದೆ ಇಟ್ಟು ತೆಗೆದುಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮನೋವೈದ್ಯ ಡಾ.ಪಿ.ವಿ.ಭಂಡಾರಿ, ಜಯಶ್ರೀ ಭಟ್, ಅನಿತಾ ಡಿಸೋಜ, ಶಾಹಿದ್ ಅಲಿ, ಅನ್ಸಾರ್ ಅಹ್ಮದ್, ಕೃಷ್ಣಪ್ಪ ಉಪ್ಪೂರು, ವರದರಾಜ್, ಅಹ್ಮದ್ ನೇಜಾರ್, ಕಿಶೋರ್ ಶೆಟ್ಟಿ, ರಫೀಕ್ ಕಲ್ಯಾಣಪುರ, ಯಜ್ಞೇಶ್ ಆಚಾರ್ಯ, ಇಸುಬು, ರಾಜಗೋಪಾಲ್ ರೈ, ಸಿರಾಜ್, ಅಮೀರ್ ಬೆಳಪು, ಯೋಗೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಚುನಾವಣಾ ಆಯೋಗ ನೋಟೀಸ್ 

ಚುನಾವಣೆಯಲ್ಲಿ ಹಣ ಹಂಚುವುದು ಅಪರಾಧವೇ ಹೊರತು ಜನರಿಂದ ಹಣ ಪಡೆಯುವುದು ಅಪರಾಧ ಅಲ್ಲ. ನಾವು ಇತ್ತೀಚೆಗೆ ಚುನಾವಣಾ ದೇಣಿಗೆ ಸಂಗ್ರಹ ಮಾಡಿರುವ ಬಗ್ಗೆ ಜಿಲ್ಲಾಡಳಿತ ನೋಟೀಸ್ ಜಾರಿ ಮಾಡಿದೆ. ನಾನು ನನ್ನ ಹಣ ವ್ಯಯ ಮಾಡಿ ಮುಂದೆ ಭ್ರಷ್ಟಾಚಾರಿ ಆಗಬಾರದೆಂಬ ಉದ್ದೇಶ ದಿಂದ ಜನರಿಂದಲೇ ಹಣ ಸಂಗ್ರಹಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅಮೃತ್ ಶೆಣೈ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X