ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪರಿವರ್ತನ ಗಾಳಿ: ವಿಷ್ಣುನಾಥ್

ಉಡುಪಿ, ಎ.2: ಚಿಕ್ಕಮಗಳೂರು ಕ್ಷೇತ್ರದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜಗೆ ಈಗಾಗಲೇ ಪೂರಕ ವಾತಾವರಣ ಕಂಡು ಬಂದಿದ್ದು, ಅದನ್ನು ನಾವು ಉಡುಪಿ ಕ್ಷೇತ್ರದಲ್ಲಿಯೂ ನಿರೀಕ್ಷಿಸುತ್ತೇವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಹೇಳಿದ್ದಾರೆ.
ನಗರದ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡ ಬ್ಲಾಕ್ ಹಾಗೂ ವಿವಿಧ ಘಟಕಗಳ ಚುನಾವಣಾ ಸಮಾಲೋಚನಾ ಸೆಯಲ್ಲಿ ಅವರು ಮಾತನಾಡುತಿದ್ದರು.
ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಕಾಲಾವಧಿಯಲ್ಲಿ ಕ್ಷೇತ್ರಕ್ಕೆ ಯಾವುದೇ ಯೋಜನೆಗಳನ್ನು ರೂಪಿಸದೆ ಜನರ ಸಂಕಷ್ಟಕ್ಕೆ ಸ್ಪಂದಿಸದೆ ಸಂಪೂರ್ಣ ವಿಫಲತೆ ಹೊಂದಿದ್ದಾರೆ. ಇದನ್ನೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮೋದ್ ಮಧ್ವರಾಜ್ ಪರವಾಗಿ ಮತ ಪರಿವರ್ತನೆಯಾಗುವಂತೆ ಕಾರ್ಯಯೋಜನೆ ರೂಪಿಸಬೇಕಾಗಿದೆ ಎಂದರು.
ಕೇರಳದ ಗಡಿ ಪ್ರದೇಶವಾದ ವಯನಾಡು ಕ್ಷೇತ್ರದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವುದರಿಂದ ಕರ್ನಾಟಕ ರಾಜ್ಯಕ್ಕೂ ಅದರ ಪ್ರಭಾವ ಬೀರುವುದರಲ್ಲಿ ಸಂಶಯವಿಲ್ಲ ಎಂದು ಕೇರಳದ ವಿಷ್ಣುನಾಥ್ ನುಡಿದರು.
ಸುಳ್ಳು, ಅಪಪ್ರಚಾರಗಳಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ರಂತಹ ಕ್ರಿಯಾಶೀಲ ವ್ಯಕ್ತಿಗೆ ಸೋಲಾಗಿದೆ. ಆದರೆ ಈ ಬಾರಿ ಹಾಗಾಗದಂತೆ ನಾವು ಎಚ್ಚರವಹಿಸಬೇಕಾಗಿದೆ ಎಂದು ಜಿಲ್ಲಾ ಉಸು್ತವಾರಿ ಸಚಿವೆ ಡಾ.ಜಯಮಾಲ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್ ಹಾಗೂ ಜಿ.ಎ. ಬಾವ, ಪಕ್ಷದ ಮುಖಂಡರಾದ ದಿನೇಶ್ ಪುತ್ರನ್, ವೆರೋನಿಕ ಕರ್ನೇಲಿಯೋ, ನವೀನ್ ಡಿಸೋಜಾ ಮಂಗಳೂರು, ಭಾಸ್ಕರ್ ರಾವ್ ಕಿದಿಯೂರು, ದಿವಾಕರ್ ಕುಂದರ್, ಹರೀಶ್ ಕಿಣಿ, ಉದ್ಯಾವರ ನಾಗೇಶ್ ಕುಮಾರ್, ಗೀತಾ ವಾಗ್ಳೆ, ಕ್ರಿಸ್ಟನ್ ಅಲ್ಮೇಡ, ವಿವಿಧ ಬ್ಲಾಕ್ಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.







