Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಓಟು ಕೇಳಲು ಬರುತ್ತೀರಲ್ಲ, ನಿಮಗೆ...

"ಓಟು ಕೇಳಲು ಬರುತ್ತೀರಲ್ಲ, ನಿಮಗೆ ನಾಚಿಕೆ ಆಗಲ್ವಾ"

ಪ್ರಚಾರದ ವೇಳೆ ಗ್ರಾಮಸ್ಥರಿಂದ ಶೋಭಾ ಕರಂದ್ಲಾಜೆಗೆ ತರಾಟೆ

ವಾರ್ತಾಭಾರತಿವಾರ್ತಾಭಾರತಿ3 April 2019 7:31 PM IST
share
ಓಟು ಕೇಳಲು ಬರುತ್ತೀರಲ್ಲ, ನಿಮಗೆ ನಾಚಿಕೆ ಆಗಲ್ವಾ

ಚಿಕ್ಕಮಗಳೂರು, ಎ.3: "ಚುನಾವಣೆ ಬಂದರೆ ಗ್ರಾಮಕ್ಕೆ ಬರುತ್ತೀರ. ಇಷ್ಟು ದಿನ ಎಲ್ಲಿ ಹೋಗಿದ್ದಿರಿ ? ಗ್ರಾಮದಲ್ಲಿ ಕುಡಿಯುವ ನೀರಿಲ್ಲ. ಬರಗಾಲದಿಂದ ಜನರು ಬದುಕುವುದು ಕಷ್ಟವಾಗಿದೆ. ಜನರು ಗುಳೆ ಹೋಗುತ್ತಿದ್ದಾರೆ. ನೀವೇನು ಕೆಲಸ ಮಾಡಿದ್ದೀರ ಎಂದು ಎಸ್.ಬಿದರೆ ಮತ್ತು ಹಿರೇಗೌಡ ಗ್ರಾಮಸ್ಥರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ, ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಬುಧವಾರ ಶೋಭಾ ಕರಂದ್ಲಾಜೆ ಅವರು ಎಸ್.ಬಿದರೆ ಮತ್ತು ಹಿರೇಗೌಡ ಗ್ರಾಮಕ್ಕೆ ಮತಯಾಚನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮದಲ್ಲಿ ಕುಡಿಯುವ ನೀರಿಲ್ಲ, ಚರಂಡಿಯಿಲ್ಲ. ಬರಗಾಲದಿಂದ ಜನರು ಊರು ಬಿಡುತ್ತಿದ್ದಾರೆ. ಸಮಸ್ಯೆ ಕೇಳಲು ಬಾರದವರು, ಓಟು ಕೇಳಲು ಬರುತ್ತೀರಲ್ಲ. ನಿಮಗೆ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದರು.

ಈ ವೇಳೆ ಶೋಭಾ ಕರಂದ್ಲಾಜೆ ಮಾತನಾಡಿ, ಗ್ರಾಮದಲ್ಲಿ ಶಾಸಕ ಸಿ.ಟಿ.ರವಿ, ಜಿಲ್ಲಾ ಪಂಚಾಯತ್ ಸದಸ್ಯರು ಕೆಲಸ ಮಾಡಿಕೊಟ್ಟಿದ್ದಾರೆ. ಕಳೆದ ಐದು ವರ್ಷ ಸಿದ್ದರಾಮಯ್ಯ ಅವರ ಸರಕಾರ ಇತ್ತು. ಈಗ 10-11 ತಿಂಗಳಿಂದ ಕುಮಾರಸ್ವಾಮಿ ಅವರ ಸರಕಾರ ಇದೆ. ಅವರನ್ನು ಕೇಳಿ. ನಮ್ಮನ್ನು ಯಾಕೆ ಕೇಳುತ್ತೀರ ? ರಾಜ್ಯ ಸರಕಾರ ಮಾಡಬೇಕಾದ ಕೆಲಸವನ್ನು ನಮ್ಮ ತಲೆಮೇಲೆ ಯಾಕೆ ಹಾಕುತ್ತೀರ? ನಾವು ಎಷ್ಟು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವೋ ಅಷ್ಟು ಕೆಲಸ ಮಾಡಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಇಂದು ಮೋದಿ ಸರಕಾರ ಬೇಕಾಗಿರುವುದು ಚರಂಡಿ ಆಗಿಲ್ಲ ಎಂದಲ್ಲ, ದೇಶದ ರಕ್ಷಣೆಗಾಗಿ, ಸೈನಿಕರನ್ನು ಬಲಗೊಳಿಸಲು, ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಲು ಮೋದಿ ಸರಕಾರ ಬೇಕು. ಕೇಂದ್ರ ಸರಕಾರ ಉಜ್ವಲ ಗ್ಯಾಸ್ ಸಂಪರ್ಕ ನೀಡಿದೆ. ಸ್ವಚ್ಛ ಭಾರತ ಅಭಿಯಾನದಲ್ಲಿ ಶೌಚಾಲಯ ನೀಡಿದ್ದು ಯಾರು? ರಸ್ತೆ ನೀಡಿದವರು ಯಾರು? ಎಂದು ನೆರೆದಿದ್ದ ಜನತೆಯನ್ನು ಪ್ರಶ್ನಿಸಿದ ಅವರು, ರಾಜಕೀಯ ಮಾಡುವವರು ಬಿಜೆಪಿ ಮುಂದೆ ರಾಜಕೀಯ ಮಾಡುವುದಲ್ಲ. ರಾಜ್ಯದಲ್ಲಿ ಯಾವ ಸರಕಾರ ಇದೆಯೋ, ಅದರ ಮುಂದೆ ಬಂದು ರಾಜಕೀಯ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಚಿಹ್ನೆಯಿಂದ ಪ್ರಶ್ನೆ ಕೇಳುವ ನಿಮ್ಮ ಹಣೆಬರಹಕ್ಕೆ ಈ ಬಾರಿ ಕಾಂಗ್ರೆಸ್ ಚಿಹ್ನೆಯೇ ಇಲ್ಲ, ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದಾರೆ. ಇಂದಿರಾಗಾಂಧಿ ಗೆದ್ದ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಚಿಹ್ನೆಯಿಲ್ಲದಂತಾಗಿದೆ. ಯಾರಿಗಾಗಿ ಕೆಲಸ ಮಾಡುತ್ತಿದ್ದೀರಾ ಎಂದು ಕಾಂಗ್ರೆಸ್ ಮುಖಂಡರನ್ನು ಕೇಳಿ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X