Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಪ್ರಣಾಳಿಕೆ ಬೂಟಾಟಿಕೆಯ...

ಕಾಂಗ್ರೆಸ್ ಪ್ರಣಾಳಿಕೆ ಬೂಟಾಟಿಕೆಯ ದಾಖಲೆ: ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ3 April 2019 9:38 PM IST
share
ಕಾಂಗ್ರೆಸ್ ಪ್ರಣಾಳಿಕೆ ಬೂಟಾಟಿಕೆಯ ದಾಖಲೆ: ಪ್ರಧಾನಿ ಮೋದಿ

ಪಾಸೀಘಾಟ್(ಅರುಣಾಚಲ ಪ್ರದೇಶ),ಎ.3: ಕಾಂಗ್ರೆಸ್ ಪಕ್ಷವು ಮಂಗಳವಾರ ಬಿಡುಗಡೆಗೊಳಿಸಿರುವ ಚುನಾವಣಾ ಪ್ರಣಾಳಿಕೆಯು ಸುಳ್ಳುಗಳ ಕಂತೆಯಾಗಿರುವುದಿಂದ ಅದನ್ನು ‘ಬೂಟಾಟಿಕೆಯ ದಾಖಲೆ’ಎಂದು ಕರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಲ್ಲಿ ಚುನಾವಣಾ ರ್ಯಾಲಿಯಲ್ಲಿ ಟೀಕಿಸಿದರು. ಅರುಣಾಚಲ ಪ್ರದೇಶದಲ್ಲಿ ಲೋಕಸಭಾ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳು ಎ.11ರಂದು ಏಕಕಾಲದಲ್ಲಿ ನಡೆಯಲಿವೆ.

ಒಂದೆಡೆ ದೃಢನಿರ್ಧಾರದ ಸರಕಾರವಿದ್ದರೆ ಇನ್ನೊಂದೆಡೆ ಸುಳ್ಳು ಭರವಸೆಗಳನ್ನು ನೀಡುವ ಜನರಿದ್ದಾರೆ ಎಂದು ಹೇಳಿದ ಮೋದಿ, ಈ ಜನರಂತೆ(ಕಾಂಗ್ರೆಸ್) ಅವರ ಪ್ರಣಾಳಿಕೆಯು ಕೂಡ ಭ್ರಷ್ಟವಾಗಿದೆ ಮತ್ತು ಬೂಟಾಟಿಕೆಯಿಂದ ಕೂಡಿದೆ. ಅದನ್ನು ಬೂಟಾಟಿಕೆಯ ದಾಖಲೆ ಎಂದು ಕರೆಯಬೇಕೇ ವಿನಃ ಪ್ರಣಾಳಿಕೆ ಎಂದಲ್ಲ ಎಂದರು.

ಲೋಕಸಭಾ ಚುನಾವಣೆಯು ವಿಶ್ವಾಸ ಮತ್ತು ಭ್ರಷ್ಟಾಚಾರದ,ಸಂಕಲ್ಪ ಮತ್ತು ಷಡ್ಯಂತ್ರದ ನಡುವಿನ ಆಯ್ಕೆಯ ಕುರಿತಾಗಿದೆ. ಬಿಜೆಪಿಯು ಕೇವಲ ಒಂದು ಭರವಸೆಯನ್ನು ನೀಡಿ ಅದನ್ನು ದಶಕಗಳ ಕಾಲ ಎಳೆಯುವುದಿಲ್ಲ ಎಂದ ಅವರು,ನಾವು ನಿಮ್ಮ ಬದುಕುಗಳನ್ನು ಸುಲಭವಾಗಿಸಲು ಪ್ರಾಮಾಣಿಕವಾಗಿ ಶ್ರಮಿಸುವ ಜನರಾಗಿದ್ದೇವೆ ಎಂದರು.

ಕಾಂಗ್ರೆಸ್ ಎಂದೂ ಈಶಾನ್ಯ ಭಾರತದ ಕನಸುಗಳು,ಮಹತ್ವಾಕಾಂಕ್ಷೆಗಳು ಮತ್ತು ಅಗತ್ಯಗಳಿಗೆ ಸಂವೇದನಾಶೀಲವಾಗಿರಲಿಲ್ಲ. ಆದರೆ ಎಲ್ಲ ಜನರ ಅಗತ್ಯಗಳನ್ನು ಪೂರೈಸುವ ಮತ್ತು ಬದಲಾವಣೆಯನ್ನು ತರುವ ಭರವಸೆಯನ್ನು ಈ ಚೌಕಿದಾರ್ ನೀಡುತ್ತಿದ್ದಾನೆ ಎಂದರು.

 ಕಾಂಗ್ರೆಸ್‌ನ್ನು ತರಾಟೆಗೆತ್ತಿಕೊಂಡ ಅವರು,2009ರ ವೇಳೆಗೆ ದೇಶದ ಪ್ರತಿಯೊಂದೂ ಮನೆಯು ವಿದ್ಯುತ್ ಸಂಪರ್ಕವನ್ನು ಹೊಂದಿರುತ್ತದೆ ಎಂದು ಪ್ರತಿಪಕ್ಷವು ತನ್ನ 2004ರ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ 2014ರ ಸುಮಾರಿಗೆ ಸುಮಾರು 18,000 ಗ್ರಾಮಗಳು ವಿದ್ಯುತ್ ಸಂಪರ್ಕವನ್ನು ಹೊಂದಿರಲಿಲ್ಲ ಮತ್ತು ಕೋಟ್ಯಂತರ ಕುಟುಂಬಗಳು ವಿದ್ಯುಚ್ಛಕ್ತಿಯನ್ನೇ ನೋಡಿರಲಿಲ್ಲ ಎಂದರು.

ದೇಶದ್ರೋಹ ಕಾನೂನನ್ನು ರದ್ದುಗೊಳಿಸುವ ಕಾಂಗ್ರೆಸ್ ಭರವಸೆಯನ್ನು ಪ್ರಸ್ತಾಪಿಸಿದ ಮೋದಿ,ರಾಷ್ಟ್ರಧ್ವಜವನ್ನು ಅವಮಾನಿಸುವವರಿಗೆ ಮತ್ತು ‘ಭಾರತ್,ತೇರೆ ತುಕ್ಡೇ ಹೋಂಗೆ’ ಎಂದು ಕೂಗುವವರಿಗೆ ಸಹ ಕಾಂಗ್ರೆಸ್ ಪಕ್ಷವು ಭರವಸೆಗಳನ್ನು ನೀಡಿದೆ. ಅದು ಇಂತಹ ಜನರ ಬಗ್ಗೆಯೂ ಅನುಕಂಪ ಹೊಂದಿದೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X