Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಮಲತಾ ಅಂಬರೀಷ್‍ಗೆ ದಸಂಸ ಬೆಂಬಲ: ರಾಜ್ಯ...

ಸುಮಲತಾ ಅಂಬರೀಷ್‍ಗೆ ದಸಂಸ ಬೆಂಬಲ: ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು

"ಬದಲಾವಣೆಯ ದಿಕ್ಕಿನತ್ತ ದಿಟ್ಟತನದ ಹೆಜ್ಜೆ"

ವಾರ್ತಾಭಾರತಿವಾರ್ತಾಭಾರತಿ3 April 2019 10:51 PM IST
share
ಸುಮಲತಾ ಅಂಬರೀಷ್‍ಗೆ ದಸಂಸ ಬೆಂಬಲ: ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು

ಮಂಡ್ಯ, ಎ.3: ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ದಲಿತ ಸಂಘರ್ಷ ಸಮಿತಿ ಬೆಂಬಲಿಸುತ್ತದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಆತ್ಮಸಾಕ್ಷಿ, ಸ್ವಾಭಿಮಾನದ ಪ್ರತೀಕವಾಗಿ ಸುಮಲತಾ ಅವರಿಗೆ ಬೆಂಬಲ ನೀಡಲು ಸಮಿತಿ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಬಹುತೇಕ ರಾಜಕೀಯ ಪಕ್ಷಗಳು ಸಮಗ್ರ ಸಮಾಜದ ಹಿತಾಸಕ್ತಿ ತುಳಿದು, ವಂಶಾಡಳಿತ ಹಿತಾಸಕ್ತಿಗೆ ಆದ್ಯತೆ ನೀಡುತ್ತಿರುವುದು ಸಂಸದೀಯ ಪ್ರಜಾಪ್ರಭುತ್ವದ ದುರ್ಬಳಕೆಯ ದುರಂತವನ್ನು ಸೂಚಿಸುತ್ತದೆ. ಸಜ್ಜನಿಕೆಯ ಎಲ್ಲಾ ಚೌಕಟ್ಟುಗಳನ್ನು ಧ್ವಂಸ ಮಾಡಿ, ಸ್ವ-ಕುಟುಂಬ ರಾಜಕಾರಣವು ಲೂಟಿಕೋರರ ಲಕ್ಷಣವಾಗಿದೆ ಎಂದು ಅವರು ಕಿಡಿಕಾರಿದರು.

ಮುತ್ಸದ್ದಿ ರಾಜಕಾರಣಕ್ಕೆ ಪ್ರಖ್ಯಾತವಾಗಿದ್ದ ಜಿಲ್ಲೆಯು ಕಳೆದ ಮುವತ್ತು ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಂತ ಹಂತವಾಗಿ ರಾಜಕೀಯ ದಾಸ್ಯಕ್ಕೆ ಒಗ್ಗಿ ಹೋಗಿದೆ. ಅದಕ್ಕೆ ಪೂರಕವಾಗಿ ಎಲ್ಲಾ ಹಂತದ ಜನಪ್ರತಿನಿಧಿಗಳನ್ನೂ ನಾನಾ ರೀತಿಯಲ್ಲಿ ಕುಟುಂಬ ರಾಜಕಾರಣದ ಗುಲಾಮರಾಗಿರುವಂತೆ ಚೆನ್ನಾಗಿ ಪಳಗಿಸಲಾಗಿದೆ. ಇಂತಹ ಕುಟುಂಬ ರಾಜಕಾರಣದ ಅಸಹ್ಯಕರ ಪ್ರದರ್ಶನದ ವಿರುದ್ಧ ಜಿಲ್ಲೆಯ ಜನತೆ ಈಗ ಸಾಮೂಹಿಕವಾಗಿ ಕೆರಳಿದ್ದಾರೆ. ಇದೊಂದು ಸ್ವಾಗತಾರ್ಹ ರಾಜಕೀಯ ಬೆಳವಣಿಗೆ. ಜನರ ಈ ಪ್ರತಿರೋಧವು ಉತ್ತಮ ರಾಜಕೀಯ ಫಲಿತಾಂಶಕ್ಕೆ ಕಾರಣವಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹೊರಗಿನ ಜನರ ದಾಸ್ಯದ ಸಂಕೋಲೆಯ ವಿರುದ್ಧವಾಗಿ ಮಂಡ್ಯದ ಸ್ವಾಭಿಮಾನ ಮತ್ತು ಈ ನೆಲದ ಜನರ ಘನತೆಯ ರಾಜಕಾರಣಕ್ಕಾಗಿ ಮೊದಲ ಬಾರಿಗೆ ಮಂಡ್ಯದ ಜನತೆ ಜಾತಿ, ಮತ, ಧರ್ಮದ ಎಲ್ಲೆಗಳನ್ನು ಮೀರಿ ಆಚೆ ಬಂದು ಪಕ್ಷೇತರ ಅಭ್ಯರ್ಥಿಯೊಬ್ಬರ ಪರವಾಗಿ ನಿಂತು ಮಾತನಾಡುತ್ತಿರುವುದು ಅಚ್ಚರಿಯ ಸಂಗತಿ ಮಾತ್ರವಲ್ಲ, ಬದಲಾವಣೆಯ ದಿಕ್ಕಿನತ್ತ ಇಟ್ಟ ದಿಟ್ಟತನದ ಹೆಜ್ಜೆಯಾಗಿದೆ. ಈ ನಿಟ್ಟಿನಲ್ಲಿ ಜನಪರ ಸಂಘಟನೆಗಳು ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರೊ.ಹುಲ್ಕೆರೆ ಮಹದೇವು, ದೇವರಾಜ್ ತಿರುಮಲಾಪುರ, ಪ್ರಸನ್ನ, ಶಿವಲಿಂಗಯ್ಯ, ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X