Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂವಿಧಾನ ಬದಲಿಸಲು ಹೊರಟವರಿಗೆ ಮತ...

ಸಂವಿಧಾನ ಬದಲಿಸಲು ಹೊರಟವರಿಗೆ ಮತ ನೀಡಬೇಡಿ: ಡಿಸಿಎಂ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ3 April 2019 11:18 PM IST
share
ಸಂವಿಧಾನ ಬದಲಿಸಲು ಹೊರಟವರಿಗೆ ಮತ ನೀಡಬೇಡಿ: ಡಿಸಿಎಂ ಪರಮೇಶ್ವರ್

ತುಮಕೂರು,ಎ.3: ಶೋಷಿತ ವರ್ಗದ ಅಭಿವೃದ್ಧಿಗೆಂದು ಅಂಬೇಡ್ಕರ್ ಸಂವಿಧಾನದಲ್ಲಿ ಸಮಾನತೆ ಹಾಗೂ ಮೀಸಲಾತಿ ಮೂಲಕ ನೀಡಿರುವ ಅಸ್ತ್ರವನ್ನು ಬಿಜೆಪಿ ಪಕ್ಷ ಬದಲಾಯಿಸುವುದಾಗಿ ಹೇಳುತ್ತಿದೆ. ಸಂವಿಧಾನವನ್ನು ಬದಲಿಸಿದರೆ ಶೋಷಿತರು ಶೋಷಿತರಾಗಿಯೇ ಉಳಿಯಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.

ನಗರದ ಗವಿರಂಗ ಕಲ್ಯಾಣಮಂಟಪದಲ್ಲಿ ನಡೆದ ಭೋವಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗ ದುಡಿಯುತ್ತಲೇ ಇರಬೇಕು ಎನ್ನುವ ಭಾವನೆಯನ್ನು ಬಿಜೆಪಿ ಹೊಂದಿದೆ. ಗಾಂಧೀಜಿ ಅವರೊಂದಿಗೆ ಜಗಳ ಮಾಡಿ ಅಂಬೇಡ್ಕರ್ ನಮಗೆ ಅವಕಾಶವನ್ನು ನೀಡಿದ್ದಾರೆ. ಅದನ್ನು ಮುಂದಿನ ಪೀಳಿಗೆಗೆ ನೀಡಬೇಕೆಂದರೆ ಸಂವಿಧಾನ ವಿರೋಧಿಗಳನ್ನು ಸೋಲಿಸಬೇಕಿದೆ ಎಂದು ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಬದ್ಧತೆ ಹಾಗೂ ನಿಲುವು ಒಂದೇ ಆಗಿದೆ. ಶೋಷಿತರಿಗೆ ಧ್ವನಿಯಾಗುವ ನಿಲುವು ನಮ್ಮಲ್ಲಿದೆ. ಅದಕ್ಕಾಗಿಯೇ ಭೋವಿ ಅಭಿವೃದ್ಧಿ ನಿಗಮವನ್ನು ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದೆ. ನಿಗಮದಿಂದ ಪ್ರೊತ್ಸಾಹ ಸಿಕ್ಕರೆ ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎನ್ನುವ ಭರವಸೆ ಇದೆ. ಅದಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಮ್ಮಿಶ್ರ ಹೋರಾಟವನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಭೋವಿ ಸಮುದಾಯ ಮುಂದಾಗಬೇಕಿದೆ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ಭೋವಿ ಸಮುದಾಯಕ್ಕೆ ಪ್ರಾತಿನಿಧ್ಯವನ್ನು ನೀಡಿ ವೆಂಕಟರಮಣಪ್ಪ ಅವರನ್ನು ಸಚಿವರನ್ನಾಗಿ ಮಾಡಿದ್ದೇವೆ, ಲೋಕಸಭಾ ಚುನಾವಣೆಯಲ್ಲಿ ದಲಿತರ ಮತಗಳನ್ನು ಸೆಳೆಯಲು ಬೇರೆ ಪಕ್ಷಗಳು ಗೊಂದಲವನ್ನು ಸೃಷ್ಟಿಸುವ ಮೂಲಕ ಮತಗಳನ್ನು ವಿಭಜಿಸುವ ಕೆಲಸ ಮಾಡುತ್ತವೆ, ಅಂತಹ ಗೊಂದಲಗಳಿಗೆ ಒಳಗಾಗದೇ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಸಚಿವ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ದಲಿತರ ಭೂಮಿಯಲ್ಲಿ ಎಳನೀರು ಫ್ಯಾಕ್ಟರಿ ಮಾಡುತ್ತೇವೆ ಎಂದು ಕಾಲೇಜು ಕಟ್ಟಿದವರು ಇಂದು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ದಲಿತರಿಗೆ ಮೀಸಲಿರುವ ಭೂಮಿಯನ್ನು ಕಬಳಿಸಲು ದಲಿತರ ಮೇಲೆ ದೌರ್ಜನ್ಯ ಮಾಡಿ, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟ ಜಿ.ಎಸ್.ಬಸವರಾಜು ಜಿಲ್ಲೆಯಲ್ಲಿ ಯಾವುದೇ ಸಮುದಾಯಕ್ಕೆ ಏನು ಕೊಡುಗೆಯನ್ನು ನೀಡಿಲ್ಲ ಎಂದು ಆರೋಪಿದರು.

ಸಂವಿಧಾನ ಬದಲಿಸುವುದಾಗಿ ಹೇಳುವ ಬಿಜೆಪಿ ಅಭ್ಯರ್ಥಿಗಳಿಗೆ ರಾಜ್ಯದಲ್ಲಿರುವ ದಲಿತರು ಮತ ಹಾಕಬಾರದು, ಕೇಂದ್ರ ಸಚಿವರಾದ ಅನಂತಕುಮಾರ್ ಹೆಗಡೆ ನೇರವಾಗಿ ದಲಿತರವನ್ನು ಅವಮಾನಿಸುತ್ತಾರೆ. ದಲಿತರು ಮತ ಹಾಕುವ ಮುನ್ನ ಒಮ್ಮೆ ಯೋಚಿಸಬೇಕು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಿ ದಲಿತರ ಮೇಲೆ ಕಲ್ಲು ಚಪ್ಪಡಿಯನ್ನು ಎಳೆಯುತ್ತಾರೆ ಎಂಬ ಎಚ್ಚರಿಯಿಂದ ಮತ ಚಲಾಯಿಸುವಂತೆ ಹೇಳಿದರು.

ಸಚಿವ ವೆಂಕರಮಣಪ್ಪ ಮಾತನಾಡಿ ಯಡಿಯೂರಪ್ಪ, ಈಶ್ವರಪ್ಪ ಬಾಯಲ್ಲಿ ಒಳ್ಳೆಯ ಮಾತು ಬರಲ್ಲ, ಕೊಳಕು ನಾಲಿಗೆಯವರು, ಚುನಾವಣೆ ಆದ ಮೇಲೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಯಡಿಯೂರಪ್ಪನದ್ದು ತಿರುಕುನ ಕನಸು, ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದಕ್ಕೆ ಕಾಯುತ್ತಿರುವ ಬಿಜೆಪಿ ಭೋವಿ ಸಮುದಾಯದವರು ಮತ ನೀಡಬಾರದು ಎಂದು ಕರೆ ನೀಡಿದರು.

ಸಮುದಾಯಕ್ಕಾಗಿ ನಿಗಮ ಸ್ಥಾಪಿಸಿದ್ದು ಸಿದ್ದರಾಮಯ್ಯ ಎನ್ನುವುದನ್ನು ಭೋವಿ ಸಮುದಾಯ ಮರೆಯಬಾರದು, ಮೋದಿ ಸರ್ಕಾರ ರೈತರಿಗೆ, ಬಡವರಿಗೆ ಏನು ಮಾಡಿದೆ, ರೈತರಿಗೆ ತಿಂಗಳಿಗೆ ಐನೂರು ರೂಪಾಯಿ ಕೋಡ್ತೀವಿ ಅನ್ನುವ ಬಿಜೆಪಿ ಸರ್ಕಾರ ಉದ್ಯಮಿಗಳ ಸಾವಿರಾರು ಕೋಟಿ ಸಾಲವನ್ನು ಮನ್ನಾ ಮಾಡುತ್ತದೆ. ಬಿಜೆಪಿಗೆ ಬಡವರು ಬೇಕಿಲ್ಲ, ಶ್ರೀಮಂತ ಉದ್ಯಮಿಗಳೇ ಸಾಕು, ಚುನಾವಣೆ ವೇಳೆ ಅಪಪ್ರಚಾರ ಮಾಡುವ ಮೂಲಕ ಗೆಲ್ಲುವುದಕ್ಕೆ ಯತ್ನಿಸುವವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಹೇಳಿದರು.

ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗೆ ಭೋವಿ ಸಮುದಾಯದವರನ್ನು ಕಂಡರೆ ಭಯ, ಅದಕ್ಕಾಗಿ ಮಧ್ಯರಾತ್ರಿ ಭೋವಿ ಸಮಾಜದ ಜಿಲ್ಲಾಧ್ಯಕ್ಷರ ಮನೆಗೆ ಹೋಗಿ ಸಭೆಯನ್ನು ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ವೆಂಕಟರಮಣಪ್ಪನವರು ಈ ಹಿಂದೆ ಸಚಿವರಾಗಿದ್ದಾಗ ಚಿತ್ರ ಹಿಂಸೆ ಕೊಟ್ಟವರು ಇದೇ ಬಿಜೆಪಿ ಪಕ್ಷದವರು, ತುಮಕೂರು ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಭೋವಿ ಸಮುದಾಯದ ಒಬ್ಬರಿಗೂ ಟಿಕೆಟ್ ಕೊಡದ ಬಿಜೆಪಿ ಅಭ್ಯರ್ಥಿ ಇಂದು ನಿಮ್ಮ ಬಳಿಗೆ ಮತ ಕೇಳಲು ಬರಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಭೋವಿ ಸಮಾಜದ ಜಿಲ್ಲಾಧ್ಯಕ್ಷ ಊರುಕೆರೆ ಉಮೇಶ್ ಮಾತನಾಡಿ, ನಮ್ಮನ್ನು ಪ್ರೀತಿಸುವವರಿಗೆ ಪ್ರೀತಿಕೊಡಬೇಕು. ತಾಲ್ಲೂಕು ಪಂಚಾಯತ್ ನಲ್ಲೇ ನಮಗೆ ಟಿಕೆಟ್ ಕೊಡದೇ ಹೀಯಾಳಿಸಿದವರಿಗೆ ಮತನೀಡಬೇಕಾ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಿದೆ. ನಮ್ಮ ನಾಯಕರಾದ ವೆಂಕಟರಮಣಪ್ಪ ಅವರ ಸೂಚನೆಯಂತೆ ತಾಲೂಕು ಮುಖಂಡರ ಸಭೆ, ಗ್ರಾಮ ಪಂಚಾಯತ್, ತಾಪಂ ಸದಸ್ಯರು, ಎಪಿಎಂಸಿ ಸದಸ್ಯರ ಸಭೆಯನ್ನು ಆಯೋಜಿಸಿದ್ದು ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲು ಮತ ನೀಡುವಂತೆ ಕೋರಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ ಮಾಜಿ ಶಾಸಕರಾದ ತಿಮ್ಮರಾಯಪ್ಪ, ಸುಧಾಕರ್‍ಲಾಲ್, ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ರಾಧಾಕೃಷ್ಣ, ಮುಖಂಡರಾದ ದೀಪಕ್, ಹಾಲನೂರು ಅನಂತ್, ಆರ್.ಸಿ.ಆಂಜಿನಪ್ಪ, ಚಂದ್ರಶೇಖರ್, ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X