Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್ಸಿ ಪರೀಕ್ಷೆ: ಜುನೈದ್ ಅಹ್ಮದ್...

ಯುಪಿಎಸ್ಸಿ ಪರೀಕ್ಷೆ: ಜುನೈದ್ ಅಹ್ಮದ್ ದೇಶಕ್ಕೆ ತೃತೀಯ

ಝಕಾತ್ ಪ್ರತಿಷ್ಠಾನದ ಮಾರ್ಗದರ್ಶನ

ವಾರ್ತಾಭಾರತಿವಾರ್ತಾಭಾರತಿ5 April 2019 11:51 PM IST
share
ಯುಪಿಎಸ್ಸಿ ಪರೀಕ್ಷೆ: ಜುನೈದ್ ಅಹ್ಮದ್ ದೇಶಕ್ಕೆ ತೃತೀಯ

ಹೊಸದಿಲ್ಲಿ,ಎ.5: ಶಾರದಾ ವಿವಿಯಲ್ಲಿ ತನ್ನ ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿದ ಪ್ರತಿಷ್ಠಿತ ಅಲಿಗಡ ಮುಸ್ಲಿಂ ವಿವಿಯ ಹಳೆಯ ವಿದ್ಯಾರ್ಥಿ ಜುನೈದ್ ಅಹ್ಮದ್(27) ಅವರು 2018ನೇ ಸಾಲಿನ ನಾಗರಿಕ ಪರೀಕ್ಷೆಗಳ ಅಂತಿಮ ಪರೀಕ್ಷೆಯಲ್ಲಿ ತೃತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಫಲಿತಾಂಶಗಳನ್ನು ಶುಕ್ರವಾರ ಸಂಜೆ ಘೋಷಿಸಲಾಗಿದೆ.

ಪರೀಕ್ಷೆಗಾಗಿ ಭೂಗೋಳ ಶಾಸ್ತ್ರವನ್ನು ಆಯ್ಕೆ ಮಾಡಿಕೊಂಡಿದ್ದ ಜುನೈದ್ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಎನ್‌ಜಿಒ ಝಕಾತ್ ಪ್ರತಿಷ್ಠಾನದಿಂದ ಮಾರ್ಗದರ್ಶನ ಪಡೆದಿದ್ದರು. ಅವರು 2013ರಿಂದಲೂ ಪರೀಕ್ಷೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದರು.

ಈ ಹಿಂದೆ ನಾನು ವೈಫಲ್ಯವನ್ನು ಕಂಡಿದ್ದೆ ಮತ್ತು ಇಂದು ನನ್ನನ್ನು ಹಿಡಿಯುವವರು ಇಲ್ಲ. ಈ ಸಾಧನೆಯ ಸಂಭ್ರಮವು ಹೊಣೆಗಾರಿಕೆಯ ಹೊರೆಯೊಂದಿಗೇ ಬಂದಿದೆ. ಇನ್ನೀಗ ನಾನು ಜನತೆಗಾಗಿ ಕೆಲಸ ಮಾಡಬೇಕು ಮತ್ತು ಸರಕಾರದ ಯೋಜನೆಗಳು ಫಲಾನುಭವಿಗಳನ್ನು ತಲುಪುವಂತೆ ನೋಡಿಕೊಳ್ಳಬೇಕಿದೆ ಎಂದು ಜುನೈದ್ ಹೇಳಿದರು.

ಜುನೈದ್ ಅವರ ತಂದೆ ವಕೀಲರಾಗಿದ್ದು,ತಾಯಿ ಗೃಹಿಣಿಯಾಗಿದ್ದಾರೆ. ಉ.ಪ್ರದೇಶದ ಬಿಜ್ನೋರ್ ಜಿಲ್ಲೆಯ ನಗೀನಾ ಪಟ್ಟಣದ ಸೇಂಟ್ ಮೇರಿಸ್ ಸ್ಕೂಲ್‌ನಲ್ಲಿ ಓದಿದ್ದ ಅವರಿಗೆ ಇಬ್ಬರು ಸೋದರಿಯರು ಮತ್ತು ಓರ್ವ ಕಿರಿಯ ಸೋದರ ಇದ್ದಾರೆ.

‘‘ನಾನು ಮಧ್ಯಮ ವರ್ಗದ ಹಿನ್ನೆಲೆಯ ಕುಟುಂಬದಿಂದ ಬಂದಿದ್ದೇನೆ. ತಮ್ಮ ಮಗು ಐಎಎಸ್ ಅಧಿಕಾರಿಯಾಗಬೇಕು ಎಂದು ಭಾರತದಲ್ಲಿನ ಪ್ರತಿ ಹೆತ್ತವರೂ ಬಯಸುತ್ತಾರೆ ಮತ್ತು ನನ್ನ ಹೆತ್ತವರೂ ಇದಕ್ಕೆ ಭಿನ್ನರಾಗಿರಲಿಲ್ಲ. ನನಗೆ ಆಸಕ್ತಿಯಿರಲಿಲ್ಲ, ಆದರೆ ಕಾಲಕ್ರಮೇಣ ನಾನು ಅದನ್ನು ಸಾಧಿಸಬಲ್ಲೆ ಎನ್ನುವುದನ್ನು ಅರ್ಥ ಮಾಡಿಕೊಂಡಿದ್ದೆ ಮತ್ತು ಅದಕ್ಕಾಗಿ ನನ್ನನ್ನು ಸಜ್ಜುಗೊಳಿಸಿಕೊಂಡಿದ್ದೆ ’’ ಎಂದು ಜುನೈದ್ ಹೇಳಿದರು.

ಮುಸ್ಲಿಂ ಸಮುದಾಯದ ಹೆಚ್ಚಿನ ಯುವಜನರು ಯುಪಿಎಸ್‌ಸಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ತಾನು ಶ್ರಮಿಸುವುದಾಗಿ ಹೇಳಿದ ಅವರು,‘‘ಹೆಚ್ಚಿನ ಮುಸ್ಲಿಮರು ಈ ಪರೀಕ್ಷೆಗಳಿಗೆ ಹಾಜರಾಗಲು ಬಯಸುತ್ತಿಲ್ಲ,ಪರೀಕ್ಷೆಯಲ್ಲಿ ತಮ್ಮ ವಿರುದ್ಧ ತಾರತಮ್ಯ ನಡೆಯುತ್ತದೆ ಎಂದು ಅವರು ಭಾವಿಸಿದ್ದಾರೆ. ಮಹತ್ವದ್ದೆಂದರೆ ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯು ಉತ್ತಮವಾಗಿಲ್ಲ. ಸಮುದಾಯದ ಹೆಚ್ಚಿನವರಿಗೆ ಸ್ಫೂರ್ತಿ ನೀಡಲು ಮತ್ತು ಪರೀಕ್ಷೆಗೆ ಹಾಜರಾಗುವಂತೆ ಪ್ರೇರೇಪಿಸಲು ನನ್ನ ಎಲ್ಲ ಪ್ರಯತ್ನಗಳನ್ನೂ ಮಾಡುತ್ತೇನೆ ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X