ಸಿದ್ದರಾಮಯ್ಯರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ
![ಸಿದ್ದರಾಮಯ್ಯರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ](https://www.varthabharati.in/sites/default/files/images/articles/2019/04/6/185728.jpeg)
ಬೆಂಗಳೂರು, ಎ.6 : ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಪ್ರಚಾರಕ್ಕೆ ಬಿಡುವು ನೀಡಿ ಬೆಂಗಳೂರಿನ ‘ಕಾವೇರಿ’ ನಿವಾಸಕ್ಕೆ ಆಗಮಿಸಿದ ನಿಖಿಲ್, ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಬಳಿಕ ಸುದ್ದಿಗಾರರೊಂದಿಗೆ ನಿಖಿಲ್, ''ತುಂಬಾ ಆತ್ಮೀಯತೆಯಿಂದ ಮಾತನಾಡಿದರು. ನನ್ನ ಪರವಾಗಿ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದೆ. ಎ. 12ರಂದು ಮಂಡ್ಯದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ'' ಎಂದು ಹೇಳಿದರು.
Next Story