Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭೀಕರ ಚಂಡಮಾರುತಕ್ಕೆ ಊರೇ ಜಲಾವೃತ:...

ಭೀಕರ ಚಂಡಮಾರುತಕ್ಕೆ ಊರೇ ಜಲಾವೃತ: ಮಾವಿನಮರದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ6 April 2019 9:36 PM IST
share
ಭೀಕರ ಚಂಡಮಾರುತಕ್ಕೆ ಊರೇ ಜಲಾವೃತ: ಮಾವಿನಮರದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ದೊಂಬ್, ಮನಿಕಾ, ಎ.6: "ಎರಡು ವರ್ಷದ ಮಗನೊಂದಿಗೆ ಮನೆಯಲ್ಲಿದ್ದಾಗ, ಹಠಾತ್ತನೆ ಮನೆಯೊಳಗೆ ಪ್ರವಾಹದ ನೀರು ಹರಿಯಲಾರಂಭಿಸಿತು. ಮಾವಿನ ಮರದ ತುದಿ ಏರುವುದು ಬಿಟ್ಟರೆ ಬದುಕಿಕೊಳ್ಳಲು ದಾರಿಯೇ ಇರಲಿಲ್ಲ. ಆಗ ಅಸಾಧ್ಯ ಹೆರಿಗೆ ನೋವು ಆರಂಭವಾಯಿತು. ನನ್ನ ನೆರವಿಗೆ ಸುತ್ತಮುತ್ತ ಯಾರೂ ಇರಲಿಲ್ಲ. ಕೆಲ ಗಂಟೆಗಳಲ್ಲಿ ಹೆಣ್ಣುಮಗು ಸಾರಾ ಮಾವಿನಮರದ ತುದಿಯಲ್ಲೇ ಹುಟ್ಟಿದಳು. ಮರದ ತುದಿಯಲ್ಲಿ ಬಹಳ ಹೊತ್ತಿನವರೆಗೆ ಮಗ ಮತ್ತು ಸಾರಾ ಮಾತ್ರ ನನ್ನ ಜತೆಗಿದ್ದದ್ದು. ಸಾರಾ ಹುಟ್ಟಿ ಎರಡು ದಿನ ನಾವು ಮರದ ತುದಿಯಲ್ಲೇ ಇದ್ದೆವು. ಬಳಿಕ ನೆರೆಯವರು ಸಹಾಯ ಮಾಡಿ ಮರದಿಂದ ಕೆಳಗೆ ಇಳಿಸಿದರು. ನಾವು ಕೂಡಾ ಇತರರಂತೆ ಇಲ್ಲಿಗೆ ಬಂದೆವು"……

ಇದು ಮೊಝಾಂಬಿಕ್ ದೇಶದ ಮನಿಕಾ ಪ್ರಾಂತ್ಯದ ದೊಂಬ್ ಪ್ರದೇಶದ ಸುಧಾರಿತ ವಸತಿ ವ್ಯವಸ್ಥೆಯಲ್ಲಿ ಆಸರೆ ಪಡೆದಿರುವ ಅಮೇಲಿಯಾರ ಮಾತುಗಳು.

ಇಡಾಯಿ ಚಂಡಮಾರುತ ಕೇಂದ್ರ ಮೊಝಾಂಬಿಕ್ ಮೇಲೆ ಅಪ್ಪಳಿಸಿದ್ದು, ವ್ಯಾಪಕ ಹಾನಿ ಮಾಡಿದೆ. ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ. ದೊಂಬ್‍ ನ ಆಡಳಿತಾತ್ಮಕ ಪ್ರದೇಶ ಕೂಡಾ ಚಂಡಮಾರುತದಿಂದ ಅಪಾರ ಹಾನಿಗೀಡಾದ ಪ್ರದೇಶಗಳಲ್ಲಿ ಒಂದು.

ದೊಂಬ್ ಪ್ರದೇಶದಲ್ಲಿ ಸುಮಾರು 3,000 ಮಂದಿ ಸ್ವಂತ ವ್ಯವಸ್ಥೆಯಲ್ಲಿ ಉಳಿದುಕೊಂಡಿದ್ದಾರೆ. ಇವರ ಪೈಕಿ ಹಸುಳೆ ಸಾರಾ ಕೂಡಾ ಒಬ್ಬಳು. ಅಚ್ಚರಿಯೊಂದಿಗೆ ಈ ಜಗತ್ತಿಗೆ ಕಾಲಿಟ್ಟ ಸಾರಾ ಇದೀಗ ಚೇತರಿಸಿಕೊಳ್ಳುತ್ತಿದ್ದಾಳೆ. ತಾಯಿ ಅಮೇಲಿಯಾ ಸತತವಾಗಿ ಎದೆಹಾಲುಣಿಸಿ ಮಗುವನ್ನು ರಕ್ಷಿಸಿಕೊಂಡಿದ್ದಾರೆ. ಇದೀಗ ಹಾನಿಗೀಡಾದ ಪ್ರದೇಶದ ಇತರ ತಾಯಂದಿರು ಇವರ ನೆರವಿಗೆ ಬಂದಿದ್ದಾರೆ.

ಸಮುದಾಯ ಆರೋಗ್ಯ ಕಾರ್ಯಕರ್ತೆ ಜೊಸಿಯಾಸ್ ಚಾಕಾ ಅವರಿಂದ ಆರೋಗ್ಯ ಮತ್ತು ಪೌಷ್ಟಿಕಾಂಶ ಬೆಂಬಲವನ್ನೂ ಪಡೆಯುತ್ತಿದ್ದಾರೆ. ಜೊಸಿಯಾಸ್ ಕೂಡಾ ತಮ್ಮ ಮನೆ ಹಾಗೂ ಆಸ್ತಿಯನ್ನು ಇಡಾಯಿ ಚಂಡಮಾರುತದಲ್ಲಿ ಕಳೆದುಕೊಂಡಿದ್ದಾರೆ. ಆದರೆ 2015ರಿಂದೀಚೆಗೆ ತರಬೇತಿ ಪಡೆದ ಹಿನ್ನೆಲೆಯಲ್ಲಿ, ಪ್ರಾಥಮಿಕ ಆರೋಗ್ಯ ಮತ್ತು ಪೌಷ್ಟಿಕಾಂಶ ಆರೈಕೆಯನ್ನು ನೆರೆಯವರಿಗೆ ಮಾಡುತ್ತಿದ್ದಾರೆ.

ಮೊಝಾಂಬಿಕ್ ನಲ್ಲಿ ಭೀಕರ ಚಂಡಮಾರುತದಿಂದ ಸುಮಾರು 19 ಲಕ್ಷ ಮಂದಿ ತೊಂದರೆಗೀಡಾಗಿದ್ದಾರೆ. ಈ ಪೈಕಿ 10 ಲಕ್ಷ ಮಕ್ಕಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X