Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಹೈದರಾಬಾದ್‌ಗೆ ಶಾಕ್ ನೀಡಿದ...

ಐಪಿಎಲ್: ಹೈದರಾಬಾದ್‌ಗೆ ಶಾಕ್ ನೀಡಿದ ಅಲ್ಝರಿ; ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ7 April 2019 9:11 AM IST
share
ಐಪಿಎಲ್: ಹೈದರಾಬಾದ್‌ಗೆ ಶಾಕ್ ನೀಡಿದ ಅಲ್ಝರಿ; ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ

ಹೈದರಾಬಾದ್, ಎ.7: ಹಿಂದಿನ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ ಮತ್ತು ಜಾನಿ ಬ್ರೆಸ್ಟೊ ಶತಕದ ಜತೆಯಾಟ ನೀಡಿದ್ದಾರೆ. ಆದರೆ ಶನಿವಾರ ರಾತ್ರಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಇಡೀ ತಂಡದ ಸ್ಕೋರ್ ಕೂಡಾ ಮೂರಂಕಿ ತಲುಪಲಿಲ್ಲ. 96 ರನ್‌ಗಳಿಗೆ ಆಲೌಟ್ ಆದ ಹೈದರಾಬಾದ್ ತಂಡ ಮುಂಬೈಗೆ ಶರಣಾಯಿತು. ಇದಕ್ಕೆ ಕಾರಣವಾಗಿದ್ದು ಚೊಚ್ಚಲ ಐಪಿಎಲ್ ಆಡುತ್ತಿರುವ ಅಲ್ಝರಿ ಜೋಸೆಫ್ ಅವರ ದಾಖಲೆಯ ಅದ್ಭುತ ಬೌಲಿಂಗ್.

ಇಬ್ಬರೂ ಆರಂಭಿಕರನ್ನು 33 ರನ್ನುಗಳಾಗುಷ್ಟರಲ್ಲಿ ಕಳೆದುಕೊಂಡ ಸನ್‌ರೈಸರ್ಸ್‌ ಚೇತರಿಸಿಕೊಳ್ಳಲೇ ಇಲ್ಲ. ಇದಕ್ಕೆ ಕಾರಣವಾದದ್ದು ಆಂಟಿಗುವಾದ ವೇಗದ ಬೌಲರ್ ಹಾಗೂ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಅಲ್ಝರಿ ಜೋಸೆಫ್ ಅವರ ಅದ್ಭುತ ಬೌಲಿಂಗ್. ಕೇವಲ 12 ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಿತ್ತ ಅಲ್ಝರಿ, ವಿರೋಧಿ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಮೊದಲ ಓವರ್‌ನಲ್ಲೇ ವಾರ್ನರ್ ಅವರನ್ನು ಬೌಲ್ಡ್ ಮಾಡಿದ ಅಲ್ಝರಿ ಜೋಸೆಫ್, ಶಂಕರ್, ಹೂಡಾ, ರಶೀದ್ ಖಾನ್, ಭುವನೇಶ್ವರ ಕುಮಾರ್ ಹಾಗೂ ಸಿದ್ಧಾರ್ಥ ಕೌಲ್ ಅವರಿಗೆ ಪೆವಿಲಿಯನ್ ಗೆ ಹಾದಿ ತೋರಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಅತ್ಯುತ್ತಮ ಸಾಧನೆಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಪಾಕಿಸ್ತಾನದ ಸುಹೈಲ್ ತನ್ವೀರ್ 14 ರನ್‌ಗಳಿಗೆ 6 ವಿಕೆಟ್ ಕಬಳಿಸಿದ್ದು ದಾಖಲೆಯಾಗಿತ್ತು.

ಇದಕ್ಕೂ ಮುನ್ನ ಕೈರನ್ ಪೊಲಾರ್ಡ್ ಅವರ ಏಕಾಂಗಿ ಸಾಹಸದಿಂದ (26 ಎಸೆತಗಳಲ್ಲಿ 46) ಮುಂಬೈ ಗೌರವಾರ್ಹ ಮೊತ್ತ ತಲುಪಿತ್ತು. ಈ ವಿಂಡೀಸ್ ಬ್ಯಾಟ್ಸ್‌ಮನ್ ಎರಡು ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿ ಕೊನೆಯ ಓವರ್‌ಗಳಲ್ಲಿ ಮುಂಬೈ ಸ್ಕೋರ್ ಹೆಚ್ಚಲು ಕಾರಣರಾದರು. ಮುಂಬೈ ಕೊನೆಯ ಐದು ಓವರ್‌ಗಳಲ್ಲಿ 61 ರನ್ ಗಳಿಸಿತು.

ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸೋಲಿನ ರುಚಿ ತೋರಿಸುವ ಮೂಲಕ ಅವರ ಗೆಲುವಿನ ಓಟಕ್ಕೆ ತಡೆಯೊಡ್ಡಿದ ಮುಂಬೈ ಇಂಡಿಯನ್ಸ್ ಮತ್ತೊಂದು ಅರ್ಹ ಜಯ ಸಂಪಾದಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X