Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ವಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ...

ಸ್ವಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ7 April 2019 8:24 PM IST
share
ಸ್ವಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡ ಪ್ರಚಾರ

ಬೆಂಗಳೂರು, ಎ.7: ಈ ಬ್ಯಾಟರಾಯನಪುರ ಕ್ಷೇತ್ರದಿಂದ ತಾವೆಲ್ಲರೂ ಸೇರಿ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದೀರಿ. ಇದೀಗ ಲೋಕಸಭಾ ಚುನಾವಣೆ ಎದುರಿಸಲು ಮುಂದಾಗಿದ್ದೇನೆ. ದಯವಿಟ್ಟು ಮತ ನೀಡಿ ಆಶೀರ್ವದಿಸಿ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡ ಮನವಿ ಮಾಡಿದರು.

ತಮ್ಮ ಸ್ವ ಕ್ಷೇತ್ರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಿದ್ಯಾರಣ್ಯಪುರ, ರಾಮಚಂದ್ರಪುರ, ಕುವೆಂಪು ನಗರ ಮತ್ತು ಎಂ.ಎಸ್.ಪಾಳ್ಯಗಳಿಗೆ ತೆರಳಿ ಅವರು ಮತಯಾಚನೆ ಮಾಡಿದರು. ಈ ಚುನಾವಣೆಗೆ ಸ್ಪರ್ಧಿಸುವ ಮುನ್ನ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ ನಿಮ್ಮ ಬಳಿ ಅಭಿಪ್ರಾಯ ಕೇಳಬೇಕಿತ್ತು. ಆದರೆ, ಅದಕ್ಕೆ ಸಮಯಾವಕಾಶ ಸಿಗಲಿಲ್ಲ. ಕೊನೆಯ ಗಳಿಗೆಯಲ್ಲಿ ಪಕ್ಷದ ನಾಯಕರು ಹೇಳಿದ್ದರಿಂದ ಅವರಿಗೆ ಗೌರವ ಕೊಟ್ಟು ಇದೀಗ ಮತ್ತೊಮ್ಮೆ ನಿಮ್ಮ ಬಳಿ ಮತ ಕೇಳಲು ಬಂದಿದ್ದೇನೆ ಎಂದು ಅವರು ಹೇಳಿದರು.

ವಿದ್ಯಾರಣ್ಯಪುರದಲ್ಲಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳ್ಳದೆ ಹಲವು ದಿನಗಳಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದರು. ಅದನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಕ್ಕೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಕೃಷ್ಣಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷದ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು, ಸಮಸ್ಯೆ ಸರಿಪಡಿಸಲು ಪ್ರಯತ್ನಿಸುವ ನಮ್ಮಂತವರ ವಿರುದ್ಧ ದೂರು ದಾಖಲಿಸಿ ಚಿಲ್ಲರೆ ರಾಜಕಾರಣ ಮಾಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮೋದಿ ನೇತೃತ್ವದ ಕೇಂದ್ರ ಸರಕಾರ ಬರೀ ಶ್ರೀಮಂತರ, ಉದ್ಯಮಿಗಳ ಪರ ಸರಕಾರ. ಅವರಿಂದ ಬಡವರಿಗೆ ಯಾವುದೇ ರೀತಿಯ ನೆರವು ಸಿಕ್ಕಿಲ್ಲ. ಬದಲಿಗೆ ಶ್ರೀಮಂತ ಉದ್ಯಮಿಗಳಿಗೆ ಅನುಕೂಲ ಆಗುವಂತೆ ಆಡಳಿತ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಇಲ್ಲಿಂದ ಆಯ್ಕೆ ಆಗಿ ಹೋಗಿರುವ ಸದಾನಂದಗೌಡರು ಒಂದೇ ಒಂದು ದಿನ ಇಲ್ಲಿಗೆ ಬಂದು ನಿಮ್ಮ ಕಷ್ಟ ಸುಖ ಆಲಿಸಲಿಲ್ಲ. ಈ ಕ್ಷೇತ್ರದ ಶಾಸಕನಾಗಿರುವ ನಾನು ಕಳೆದ ಹನ್ನೊಂದು ವರ್ಷಗಳಿಂದ ನಿಮ್ಮ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸಂಸದನಾಗಿ ಆಯ್ಕೆ ಆದ ನಂತರವೂ ನಿಮ್ಮ ಸೇವೆ ಮುಂದುವರೆಸುತ್ತೇನೆ ಎಂದು ಕೃಷ್ಣಭೈರೇಗೌಡ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X