Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಕಾಂಗ್ರೆಸ್‌ನ ಮುಸ್ಲಿಂ ಸಂಸದೆಗೆ...

ಅಮೆರಿಕ ಕಾಂಗ್ರೆಸ್‌ನ ಮುಸ್ಲಿಂ ಸಂಸದೆಗೆ ಜೀವ ಬೆದರಿಕೆ: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ7 April 2019 11:21 PM IST
share
ಅಮೆರಿಕ ಕಾಂಗ್ರೆಸ್‌ನ ಮುಸ್ಲಿಂ ಸಂಸದೆಗೆ ಜೀವ ಬೆದರಿಕೆ: ಆರೋಪಿಯ ಬಂಧನ

ನ್ಯೂಯಾರ್ಕ್,ಎ.7: ಅಮೆರಿಕದ ಡೆಮೊಕ್ರಾಟಿಕ್ ಪಕ್ಷದ ಪ್ರತಿನಿಧಿ ಹಾಗೂ ಮಿನೆಸ್ಸೊಟಾದ ಅಮೆರಿಕ ಕಾಂಗ್ರೆಸ್‌ನ ಮುಸ್ಲಿಂ ಸದಸ್ಯೆ ಇಲ್ಹಾನ್ ಉಮರ್ ವರ ಮೇಲೆ ಹಲ್ಲೆ ನಡೆಸುವ ಹಾಗೂ ಕೊಲೆಗೈಯುವ ಬೆದರಿಕೆ ಹಾಕಿದ ಆರೋಪದಲ್ಲಿ. 55 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

  ಆರೋಪಿಯನ್ನು ನ್ಯೂಯಾರ್ಕ್ ನಗರದ ಆ್ಯಡಿಸನ್ ಪ್ರದೇಶದ ನಿವಾಸಿ ಪ್ಯಾಟ್ರಿಕ್ ಕಾರ್ಲಿನಿಯೊ ಜೂನಿಯರ್ ಎಂದು ಗುರುತಿಸಲಾಗಿದೆ. ಆತ ಉಮರ್ ಅವರ ಸಿಬ್ಬಂದಿಯೊಬ್ಬರಿಗೆ ಮಾರ್ಚ್ 21ರಂದು ದೂರವಾಣಿ ಕರೆ ಮಾಡಿ, '' ನೀವು ಮುಸ್ಲಿಂ ಬ್ರದರ್‌ಹುಡ್ ಸಂಘಟನೆಯ ಪರವಾಗಿ ಕೆಲಸ ಮಾಡುತ್ತಿದ್ದೀರಾ?. ನೀವ್ಯಾಕೆ ಆಕೆಗಾಗಿ (ಉಮರ್) ಕೆಲಸ ಮಾಡುತ್ತಿದ್ದೀರಿ. ಆಕೆ ಭಯೋತ್ಪಾದಕಿ. ನಾನು ಆಕೆಯ ತಲೆಬುರುಡೆಗೆ ಬುಲೆಟ್ ಹೊಡೆಯಲಿದ್ದೇನೆ''ಎಂದು ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.

ಈ ದೂರವಾಣಿ ಬೆದರಿಕೆ ಕರೆ ಬಗ್ಗೆ ಉಮರ್ ಅವರ ಸಿಬ್ಬಂದಿ ಅಮೆರಿಕ ಕ್ಯಾಪಿಟಲ್ ಪೊಲೀಸರಿಗೆ ದೂರು ನೀಡಿದ್ದರು. ದೂರವಾಣಿ ಸಂಭಾಷಣೆಯ ವೇಳೆ ಉದ್ರಿಕ್ತಗೊಂಡಂತೆ ವರ್ತಿಸಿದ್ದ ಕಾರ್ಲಿನಿಯೊ ತನ್ನ ಹೆಸರನ್ನು ಕೂಡಾ ತಿಳಿಸಿದ್ದ ಹಾಗೂ ತನ್ನನ್ನು ಸಂಪರ್ಕಿಸುವ ವಿವರಗಳನ್ನ ನೀಡಿದ್ದನೆಂದು ಎಫ್‌ಬಿಐನ ವಿಶೇಷ ಏಜೆಂಟ್ ಒಬ್ಬರು ಅಫಿದಾವಿತ್‌ನಲ್ಲಿ ತಿಳಿಸಿದ್ದರು. ವಿಚಾರಣೆಯ ವೇಳೆ ಕಾರ್ಲಿಯೊ ತನ್ನನ್ನು ದೇಶಭಕ್ತನೆಂದು ಹೇಳಿಕೊಂಡಿದ್ದು, ತನ್ನ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ಇದೆಯೆಂದು ಹೇಳಿದ್ದಾನೆ. ಅಮೆರಿಕ ಸರಕಾರದಲ್ಲಿ 'ತೀವ್ರವಾದಿ ' ಮುಸ್ಲಿಮರು ಇರುವುದನ್ನು ತಾನು ದ್ವೇಷಿಸುವುದಾಗಿ ಆತ ಹೇಳಿದ್ದಾನೆಂದು ಎಫ್‌ಬಿಐ ಅಫಿದಾವಿತ್ ತಿಳಿಸಿದೆ.

   ಕಾರ್ಲಿನಿಯೋನನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನ ವಿಚಾರಣೆಯನ್ನು ಎಪ್ರಿಲ್ 10ರಂದು ನ್ಯಾಯಾಧೀಶರು ಮುಂದೂಡಿದ್ದಾರೆ. ಅಮೆರಿಕ ಸರಕಾರದ ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯೆಯಾದ ಇಲ್ಹಾನ್ ಉಮರ್, ಕಳೆದ ನವೆಂಬರ್‌ನಲ್ಲಿ ಅಮೆರಿಕ ಕಾಂಗ್ರೆಸ್‌ಗೆ ಪ್ರಥಮ ಬಾರಿಗೆ ಆಯ್ಕೆಯಾದ ಇಬ್ಬರು ಮುಸ್ಲಿಂ ಮಹಿಳೆಯರಲ್ಲೊಬ್ಬರಾಗಿದ್ದಾರೆ. ಆದರೆ ಈ ಜೀವಬೆದರಿಕೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಉಮರ್ ನಿರಾಕರಿಸಿದ್ದಾರೆಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X