Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10ನೇ ತರಗತಿಯ ಇತಿಹಾಸದ ಪಠ್ಯಪುಸ್ತಕದಿಂದ...

10ನೇ ತರಗತಿಯ ಇತಿಹಾಸದ ಪಠ್ಯಪುಸ್ತಕದಿಂದ 3 ಅಧ್ಯಾಯಗಳನ್ನು ಕೈಬಿಟ್ಟ ಎನ್‌ಸಿಇಆರ್‌ಟಿ

ವಾರ್ತಾಭಾರತಿವಾರ್ತಾಭಾರತಿ8 April 2019 8:51 PM IST
share
10ನೇ ತರಗತಿಯ ಇತಿಹಾಸದ ಪಠ್ಯಪುಸ್ತಕದಿಂದ 3 ಅಧ್ಯಾಯಗಳನ್ನು ಕೈಬಿಟ್ಟ ಎನ್‌ಸಿಇಆರ್‌ಟಿ

ಹೊಸದಿಲ್ಲಿ, ಎ.8: ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಆಡಳಿತದಡಿ ಕೈಗೊಳ್ಳಲಾಗಿರುವ ದ್ವಿತೀಯ ಪಠ್ಯಪುಸ್ತಕ ಪುನರ್‌ಪರಿಶೀಲನೆಯ ಅಂಗವಾಗಿ 'ಭಾರತ ಮತ್ತು ಸಮಕಾಲೀನ ಜಗತ್ತು-II' ಶೀರ್ಷಿಕೆಯ 10ನೇ ತರಗತಿಯ ಇತಿಹಾಸ ಪಠ್ಯಪುಸ್ತಕದಲ್ಲಿಯ ಮೂರು ಅಧ್ಯಾಯಗಳನ್ನು ತೆಗೆದುಹಾಕಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ)ಯು ನಿರ್ಧರಿಸಿದೆ.

ಮೂರು ಅಧ್ಯಾಯಗಳನ್ನು ಕೈಬಿಡುವ ನಿರ್ಧಾರವು ವಿದ್ಯಾರ್ಥಿಗಳ ಮೇಲಿನ ಹೊರೆಯನ್ನು ತಗ್ಗಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರು ಆರಂಭಿಸಿದ್ದ ಪಠ್ಯಕ್ರಮ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿದೆ ಎಂದು ಹೇಳಲಾಗಿದೆ. 72 ಪುಟಗಳು ಕಡಿಮೆಯಾಗಿರುವ ಪರಿಷ್ಕೃತ ಪಠ್ಯಪುಸ್ತಕವು ಈ ತಿಂಗಳು ಆರಂಭಗೊಂಡಿರುವ ನೂತನ ಶೈಕ್ಷಣಿಕ ವರ್ಷದಿಂದ ಅನ್ವಯಗೊಳ್ಳಲಿದೆ.

ಕಳೆದ ತಿಂಗಳು ಎನ್‌ಸಿಇಆರ್‌ ಟಿಯು ಒಂಭತ್ತನೇ ತರಗತಿಯ ಇತಿಹಾಸದ ಪಠ್ಯಪುಸ್ತಕದಿಂದ ಜಾತಿ ಹೋರಾಟಗಳು,ಕ್ರಿಕೆಟ್‌ನ ಇತಿಹಾಸ ಮತ್ತು ಗ್ರಾಮೀಣ ಸಮುದಾಯಗಳ ಮೇಲೆ ವಸಾಹತುಶಾಹಿಯ ಪರಿಣಾಮಕ್ಕೆ ಸಂಬಂಧಿಸಿದ ಮೂರು ಅಧ್ಯಾಯಗಳನ್ನು ಕೈಬಿಟ್ಟಿತ್ತು.

 ಈ ಹಿಂದೆ ವಿದ್ಯಾರ್ಥಿಗಳಿಗೆ ಬೋಧಿಸಲು 10ನೇ ತರಗತಿಯ ಇತಿಹಾಸ ಪಠ್ಯಪುಸ್ತಕದಲ್ಲಿ ವಿವಿಧ ವಿಭಾಗಗಳಡಿ ಎಂಟು ಅಧ್ಯಾಯಗಳ ಪೈಕಿ ಐದು ಅಧ್ಯಾಯಗಳನ್ನು ಆಯ್ಕೆ ಮಾಡಿಕೊಳ್ಳುವ ವಿವೇಚನಾಧಿಕಾರವನ್ನು ಶಾಲೆಗಳು ಹೊಂದಿದ್ದವು.

ನ್ಯಾಷನಲಿಸ್ಟ್ ಮೂವ್‌ಮೆಂಟ್ ಇನ್ ಇಂಡೋ-ಚೈನಾ, ವರ್ಕ್ ಲೈಫ್ ಆ್ಯಂಡ್ ಲೀಸರ್ ಮತ್ತು ನಾವೆಲ್ಸ್, ಸೊಸೈಟಿ ಆ್ಯಂಡ್ ಹಿಸ್ಟರಿ ಇವು 10ನೇ ತರಗತಿಯ ಇತಿಹಾಸ ಪಠ್ಯಪುಸ್ತಕದಿಂದ ಕೈಬಿಡಲಾಗಿರುವ ಮೂರು ಅಧ್ಯಾಯಗಳಾಗಿವೆ.

ಎಲ್ಲ ವಿಷಯಗಳಲ್ಲಿ ಪಠ್ಯಕ್ರಮವನ್ನು ಶೇ.50ರಷ್ಟು ಕಡಿತಗೊಳಿಸಲು ಜಾವಡೇಕರ್ ಶಿಫಾರಸು ಮಾಡಿದ್ದರೆ,ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ತೆಗೆಯಲಾಗಿರುವ ವಿಷಯದ ಪ್ರಮಾಣವು ಗಣಿತ ಮತ್ತು ವಿಜ್ಞಾನ ಪಠ್ಯಪುಸ್ತಕಗಳಿಗೆ ಹೋಲಿಸಿದರೆ ಹೆಚ್ಚಿದೆ.

 ಇತಿಹಾಸ ಮತ್ತು ಗಣಿತಕ್ಕೆ ಹೋಲಿಸಿದರೆ 100 ಅಂಕಗಳ ಸಮಾಜ ವಿಜ್ಞಾನ ಪರೀಕ್ಷೆಗಾಗಿ ವಿದ್ಯಾರ್ಥಿಗಳು ಬಹಳಷ್ಟು ಓದಬೇಕಿತ್ತು ಎನ್ನುವುದು ಈ ಕ್ರಮಕ್ಕೆ ಕಾರಣ. ಇತಿಹಾಸ, ಭೂಗೋಳಶಾಸ್ತ್ರ, ರಾಜಕೀಯ ವಿಜ್ಞಾನ ಮತ್ತು ಅರ್ಥಶಾಸ್ತ್ರಗಳನ್ನೊಳಗೊಂಡ ಸಮಾಜ ವಿಜ್ಞಾನವು ಸಾಮಾನ್ಯ ವಿಷಯವಾಗಿದ್ದು,ಇತಿಹಾಸದ ಪುಸ್ತಕಗಳು ಹೆಚ್ಚಿನ ವಿಷಯಗಳನ್ನು ಹೊಂದಿದ್ದವು. ಇದೇ ಕಾರಣದಿಂದ ಇತಿಹಾಸದಲ್ಲಿ ಕೈಬಿಟ್ಟಿರುವ ವಿಷಯಗಳ ಪ್ರಮಾಣ ತುಲನಾತ್ಮಕವಾಗಿ ಹೆಚ್ಚಿದೆ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ 12ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಪುಸ್ತಕದಲ್ಲಿಯ 'ಗುಜರಾತ್‌ನ ಮುಸ್ಲಿಂ ವಿರೋಧಿ ದಂಗೆಗಳು' ಎಂಬ ಉಲ್ಲೇಖವನ್ನು 'ಗುಜರಾತ್ ದಂಗೆಗಳು' ಎಂದು ಪರಿವರ್ತಿಸಲು ಮತ್ತು ಹಿಂದುತ್ವ ವ್ಯಾಖ್ಯಾನವನ್ನು ಬದಲಿಸಲು ಎನ್‌ಸಿಇಆರ್‌ಟಿ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ವರದಿಯಾದ ಬಳಿಕ ನರೇಂದ್ರ ಮೋದಿ ಸರಕಾರವು ಪಠ್ಯಕ್ರಮವನ್ನು,ವಿಶೇಷವಾಗಿ ಇತಿಹಾಸದ ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಆರೋಪಿಸಲಾಗಿತ್ತು. ಪುಸ್ತಕದಲ್ಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಸಿದ್ಧ ಉಕ್ತಿ 'ರಾಜಧರ್ಮ' ಕೂಡ ಅನಗತ್ಯವೆಂದು ಪರಿಗಣಿಸಲಾಗಿತ್ತು ಎಂದೂ ವರದಿಯು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X