Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಭಾರತದ ಲೋಕಸಭೆ ಮತ್ತು ಮುಸ್ಲಿಮರ...

ಭಾರತದ ಲೋಕಸಭೆ ಮತ್ತು ಮುಸ್ಲಿಮರ ಪ್ರತಿನಿಧಿತ್ವ

ಎಸ್. ಬಾಬುಖಾನ್ಎಸ್. ಬಾಬುಖಾನ್9 April 2019 12:03 AM IST
share
ಭಾರತದ ಲೋಕಸಭೆ ಮತ್ತು ಮುಸ್ಲಿಮರ ಪ್ರತಿನಿಧಿತ್ವ

ಭಾಗ-2

ನಮ್ಮ ದೇಶದ ಮುಸ್ಲಿಮರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಲೋಕಸಭೆಯಲ್ಲಿ ಕನಿಷ್ಠ 70 ಸಂಸದರಿರಬೇಕು ಅಥವಾ ಮುಸ್ಲಿಮರ ಪ್ರತಿನಿಧಿತ್ವದ ಪ್ರಶ್ನೆ ಬಂದಾಗ ಕನಿಷ್ಠ 70 ಮುಸ್ಲಿಂ ಸಂಸದರಿರಬೇಕೆಂದು ವಾದಿಸಲಾಗುತ್ತದೆ. ಇದನ್ನು ರಾಜ್ಯವಾರು ವಿಂಗಡಿಸಲಾಗಿದ್ದು ಈ ಕೆಳಕಂಡ ರಾಜ್ಯಗಳಲ್ಲಿ ಮುಸ್ಲಿಂ ಸಂಸದರ ಸಂಖ್ಯೆಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ಹೀಗೆ ವಿವರಿಸಬಹುದು. (ಮೊದಲನೇ ಕೋಷ್ಟಕ ನೋಡಿ)
ನಮ್ಮ ದೇಶದ ಲೋಕ ಸಭೆ ಯಲ್ಲಿ ಇದುವರೆಗೂ ಮುಸ್ಲಿಂ ಸಂಸದರ ಸಂಖ್ಯೆ 50 ದಾಟಿಲ್ಲ. 1980ರ ಲೋಕಸಭೆಯಲ್ಲಿ ಗರಿಷ್ಠ ಸಂಖ್ಯೆ 40 ಆಗಿದ್ದು ಸ್ವಾತಂತ್ರಾನಂತರದ ಚುನಾವಣೆಗಳಲ್ಲಿ ಇದುವರೆಗೂ ಈ ಮ್ಯಾಜಿಕ್ ನಂಬರಾದ 70ನ್ನು ಮುಟ್ಟಲೇ ಇಲ್ಲ. 2014ರ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಕನಿಷ್ಠ ಅಂದರೆ 23 ಮುಸ್ಲಿಂ ಸಂಸದರು ಆಯ್ಕೆಯಾಗಿದ್ದಾರೆ. ಪ್ರಮುಖ 18 ರಾಜ್ಯಗಳ ಮುಸ್ಲಿಂ ಪ್ರತಿನಿಧಿತ್ವವನ್ನು ಅವಲೋಕಿಸಿದರೆ; ಕರ್ನಾಟಕವೂ ಸೇರಿಕೊಂಡಂತೆ 10 ರಾಜ್ಯಗಳಲ್ಲಿ ಪ್ರತಿನಿಧಿತ್ವದ ಕೊರತೆ ಶೇ. 100 ಅಗಿದೆ ಅಂದರೆ ಈ ಹತ್ತು ರಾಜ್ಯಗಳಿಂದ ಮುಸ್ಲಿಮರ ಪ್ರತಿನಿಧಿತ್ವ ಶೂನ್ಯ. 5 ರಾಜ್ಯಗಳಲ್ಲಿ ಕೊರತೆಯ ಪ್ರಮಾಣ ಶೇ. 25-50ರ ವರೆಗಿದೆ.


ಮಾಹಿತಿಗಳ ಪ್ರಕಾರ ನಮ್ಮ ದೇಶದ ವಿವಿಧ ರಾಜ್ಯಗಳಿಗೆ ಸೇರಿದ 121 ಜಿಲ್ಲೆಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿದೆ. ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಮತ್ತು ಬೀದರ್ ಜಿಲ್ಲೆಗಳಲ್ಲಿ ಇವರ ಪ್ರಮಾಣ ಹೆಚ್ಚಿದೆ. ದೇಶದ ವಿವಿಧ ಜಿಲ್ಲೆಗಳಲ್ಲಿ ಹರಡಿರುವ ಧಾರ್ಮಿಕ ಅಲ್ಪಸಂಖ್ಯಾತ ಜನಸಂಖ್ಯೆ ಹೆಚ್ಚಿರುವ 90 ಜಿಲ್ಲೆಗಳನ್ನು ಗುರುತಿಸಲಾಗಿದ್ದು. ರಾಷ್ಟ್ರೀಯ ಸರಾಸರಿಗಿಂತ ಸಾಮಾಜಿಕ-ಆರ್ಥಿಕ ಮತ್ತು ಮೂಲ ಭೂತ ಸೌಲಭ್ಯಗಳಲ್ಲಿ ಹಿಂದುಳಿದಿರುವ ಜಿಲ್ಲೆಗಳನ್ನು ‘ಎ’ ವಿಭಾಗ ಎಂದೂ ಮತ್ತು ಮೇಲಿನ ಅಂಶಗಳಲ್ಲಿ ಯಾವುದಾದರೂ ಒಂದು ಅಂಶದಲ್ಲಿ ಹಿಂದುಳಿದಿರುವ ಜಿಲ್ಲೆಗಳನ್ನು ‘ಬಿ’ ಎಂದು ವಿಭಾಗಿಸಲಾಗಿದೆ. ಅವುಗಳ ವಿವರ ಹೀಗಿದೆ:(ಎರಡನೇ ಕೋಷ್ಟಕ ನೋಡಿ)


ಮೊದಲನೆಯದಾಗಿ ಈ ಎಲ್ಲಾ ಜಿಲ್ಲೆಗಳು ಅತ್ಯಂತ ಹಿಂದು ಳಿದ ಮತ್ತು ಹಿಂದುಳಿದ ಜಿಲ್ಲೆಗಳು ಹಾಗೆಯೇ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ದಲಿತರು ಹೆಚ್ಚಿರುವ ಜಿಲ್ಲೆಗಳು; ಉದಾಹರಣೆಗೆ ಕರ್ನಾಟಕದ ಬೀದರ್ ಮತ್ತು ಕಲಬುರಗಿಯನ್ನೇ ತೆಗೆದುಕೊಳ್ಳಬಹುದು. ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಕೆಲವು ಲೋಕಸಭಾ ಕ್ಷೇತ್ರಗಳು ಮೀಸಲು ಕ್ಷೇತ್ರಗಳಾಗಿದ್ದು ಸಾಮಾನ್ಯ ಅಥವಾ ಅಲ್ಪಸಂಖ್ಯಾತ ಸಮುದಾಯದ ಜನ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಈ 90 ಜಿಲ್ಲೆಗಳು ಹಿಂದುಳಿ ಯಲು ಕಾರಣಗಳೇನು? ಅವರನ್ನು ಪ್ರತಿನಿಧಿಸುತ್ತಿರುವ ಸಂಸದರೇ ಅಥವಾ ಸರಕಾರಗಳೇ? ಹಾಗಾದರೆ ಈ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನ ಸ್ಪರ್ಧಿಸಿ ಗೆದ್ದರೆ ಅಭಿವೃದ್ಧಿಯಾಗುತ್ತದೆಯೇ? ಅಲ್ಪಸಂಖ್ಯಾತ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡಲು ಸಾಧ್ಯವೇ? ಉತ್ತರವನ್ನು ಎರಡೂ ರೀತಿಯಲ್ಲಿಯೂ ಕೊಡಬಹುದು.

ಮುಂದುವರಿಯುವುದು....

share
ಎಸ್. ಬಾಬುಖಾನ್
ಎಸ್. ಬಾಬುಖಾನ್
Next Story
X