Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಾರಾಷ್ಟ್ರದಲ್ಲಿ ಮಲ್ಪೆಯ ಮೀನುಗಾರಿಕಾ...

ಮಹಾರಾಷ್ಟ್ರದಲ್ಲಿ ಮಲ್ಪೆಯ ಮೀನುಗಾರಿಕಾ ಬೋಟು ಮುಳುಗಡೆ: 7 ಮಂದಿ ಮೀನುಗಾರರ ರಕ್ಷಣೆ

90ಲಕ್ಷ ರೂ. ನಷ್ಟ ಅಂದಾಜು

ವಾರ್ತಾಭಾರತಿವಾರ್ತಾಭಾರತಿ9 April 2019 6:18 PM IST
share
ಮಹಾರಾಷ್ಟ್ರದಲ್ಲಿ ಮಲ್ಪೆಯ ಮೀನುಗಾರಿಕಾ ಬೋಟು ಮುಳುಗಡೆ: 7 ಮಂದಿ ಮೀನುಗಾರರ ರಕ್ಷಣೆ

ಮಲ್ಪೆ, ಎ.9: ಮಹಾರಾಷ್ಟ್ರದ ದೇವಗಡ ಸಮೀಪದ ಆಳ ಸಮುದ್ರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅವಘಡದಿಂದ ಮಲ್ಪೆ ಬಂದರಿನಿಂದ ತೆರಳಿದ್ದ ಬೋಟೊಂದು ಮುಳುಗಡೆಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿ ರುವ ಬಗ್ಗೆ ವರದಿಯಾಗಿದೆ.

ಮುಳುಗಡೆಯಾದ ಪಡುತೋನ್ಸೆ ಬೆಂಗ್ರೆ ಹೂಡೆಯ ದಿನೇಶ್ ತಿಂಗಳಾಯ ಎಂಬವರಿಗೆ ಸೇರಿದ ‘ಶಿವರಕ್ಷ’ ಹೆಸರಿನ ಆಳಸಮುದ್ರ ಸ್ಟೀಲ್‌ಬೋಟಿನಲ್ಲಿದ್ದ ಭಟ್ಕಳದ ಮೀನುಗಾರರಾದ ಸುನೀಲ್ ಮಂಜುನಾಥ್, ಸುರೇಶ್ ಮಂಜು ನಾಥ್, ಜಗನ್ನಾಥ ರಾಮ, ಪ್ರಶಾಂತ್ ಮೂಡಗಿ, ಗಜೇಂದ್ರ ಪಾಂಡುರಂಗ, ಕೃಷ್ಣ ಮೊಗೇರ, ಲೋಹಿತ್ ಧರ್ಮ ಎಂಬವರನ್ನು ರಕ್ಷಿಸಲಾಗಿದೆ.

ಎ.6ರಂದು ರಾತ್ರಿ ಮಲ್ಪೆ ಬಂದರಿನಿಂದ ಹೊರಟ ಶಿವರಕ್ಷ ಬೋಟ್ ಮಹಾರಾಷ್ಟ್ರದ ರತ್ನಾಗಿರಿ ಸಮೀಪ ಸುಮಾರು 42 ಮಾರು ಆಳ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿತ್ತೆನ್ನಲಾಗಿದೆ. ಈ ಸಂದರ್ಭ ಬೋಟಿನ ಅಡಿಭಾಗಕ್ಕೆ ಯಾವುದೋ ವಸ್ತು ಢಿಕ್ಕಿ ಹೊಡೆದು ನೀರು ಬೋಟಿನೊಳಗೆ ಬರಲು ಆರಂಭಿಸಿತು. ಕೂಡಲೇ ಬೋಟಿನಲ್ಲಿದ್ದ ಮೀನುಗಾರರು ಸಮೀಪದಲ್ಲಿ ಬೋಟಿನವರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಸಮೀಪದಲ್ಲಿದ್ದ ಶಿವತೇಜಸ್ ಬೋಟಿನ ಮೀನುಗಾರರು ಮುಳುಗುತ್ತಿದ್ದ ಬೋಟಿನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಬಳಿಕ ಶಿವತೇಜಸ್, ವರಸಿದ್ದಿ, ಹನುಮ ಸಾನಿಧ್ಯ ಮತ್ತು ರಾಧಾಂಬಿಕ ಎಂಬ ಹೆಸರಿನ ಬೋಟುಗಳು ಮುಳುಗುತ್ತಿದ್ದ ಶಿವಕ್ಷ ಬೋಟನ್ನು ಎಳೆದು ತಂದಿತು.

ಈ ಮಧ್ಯೆ ಸುಮಾರು 34 ಮಾರು ಆಳದೂರದಲ್ಲಿ ದೇವಗಡ ಸಮೀಪ ಎಳೆದು ತರುತ್ತಿದ್ದಾಗ ಶಿವರಕ್ಷ ಬೋಟ್ ಸಂಪೂರ್ಣ ಮುಳುಗಡೆಗೊಂಡಿತೆನ್ನ ಲಾಗಿದೆ. ಇದರಿಂದ ಬೋಟನಲ್ಲಿದ್ದ 8ಸಾವಿರ ಲೀಟರ್ ಡಿಸೇಲ್, ಬಲೆ, ಜಿಪಿಎಸ್, ಹಿಡಿದ ಮೀನುಗಳು ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X