Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರಿಕೆಟ್ ಬೆಟ್ಟಿಂಗ್; ಮತ್ತೆ ಮೂವರ...

ಕ್ರಿಕೆಟ್ ಬೆಟ್ಟಿಂಗ್; ಮತ್ತೆ ಮೂವರ ಸೆರೆ: ಬಂಧಿತರ ಸಂಖ್ಯೆ 20ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ9 April 2019 9:53 PM IST
share
ಕ್ರಿಕೆಟ್ ಬೆಟ್ಟಿಂಗ್; ಮತ್ತೆ ಮೂವರ ಸೆರೆ: ಬಂಧಿತರ ಸಂಖ್ಯೆ 20ಕ್ಕೆ ಏರಿಕೆ

ಮಂಗಳೂರು, ಎ.9: ನಗರದ ಮಠದಕಣಿಯಲ್ಲಿ ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸೋಮವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ, ಲಕ್ಷಾಂತರ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಮಠದಕಣಿ ನಿವಾಸಿಗಳಾದ ಸುನಿಲ್ ಮೆಲ್ವಿನ್ ರೇಗೋ (42), ಸಂತೋಷ್ ಜಾನ್ (47) ಹಾಗೂ ಉಳ್ಳಾಲಬೈಲು ನಿವಾಸಿ ಅಶೋಕ್ ಅಂಚನ್ (46) ಬಂಧಿತ ಆರೋಪಿಗಳು.

ಆರೋಪಿಗಳು ಕ್ರಿಕೆಟ್ ಬೆಟ್ಟಿಂಗ್ ದಂಧೆಗಾಗಿ ‘ಬೆಟ್‌ಪ್ರೊ’ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿದ ಗ್ರಾಹಕರಿಗೆ ಈ ಆ್ಯಪ್‌ಗೆ ಹಣವನ್ನು ರಿಚಾರ್ಜ್ ಮಾಡುವುದು ಹಾಗೂ ಪಾಸ್‌ವರ್ಡ್‌ಗಾಗಿ ಹಣವನ್ನು ಸಂಗ್ರಹಿಸುತ್ತಿದ್ದರು. ನಂತರ ವಿದೇಶದಲ್ಲಿರುವ ಅರುಣ್ ಮೊಂತೆರೋ ಹಾಗೂ ಕಿರಣ್ ಎಂಬವರಿಗೆ ಹಣವನ್ನು ಸಂದಾಯ ಮಾಡಿದಾಗ ಅವರು ಆ್ಯಪ್‌ನ ಪಾಸ್‌ವರ್ಡ್‌ನ್ನು ಗ್ರಾಹಕರಿಗೆ ನೀಡುತ್ತಿದ್ದರು. ಈ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕೃತ್ಯದಲ್ಲಿ ಇನ್ನು ಇತರರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರಿಂದ ವಂಚಿಸುತ್ತಿದ್ದ 4.25 ಲಕ್ಷ ರೂ. ನಗದು ಮತ್ತು ಐದು ಮೊಬೈಲ್ ಪೋನ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 4.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಲ್ಲಿ ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಆರ್. ನಾಯ್ಕೆ, ಪಿಎಸ್‌ಐ ಕಬ್ಬಾಳ್‌ರಾಜ್, ಶಂಕರ ನಾಯರಿ ಮತ್ತು ಸಿಸಿಬಿ ಸಿಬ್ಬಂದಿ ಹಾಗೂ ಮಂಗಳೂರು ಬರ್ಕೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸೂರಜ್, ಪಿಎಸ್‌ಐ ಹೀರಾವತಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಬಂಧಿತರ ಸಂಖ್ಯೆ 20ಕ್ಕೆ ಏರಿಕೆ: ಐಪಿಎಲ್ ಕ್ರಿಕೆಟ್ ಆರಂಭಗೊಳ್ಳುತ್ತಿದ್ದಂತೆ ಬೆಟ್ಟಿಂಗ್‌ನಲ್ಲಿ ತೊಡಗದಂತೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಇದು ಕ್ರಿಕೆಟ್ ಬೆಟ್ಟಿಂಗ್ ದಂಧೆ ವಿರುದ್ದ 6ನೇ ಪ್ರಕರಣವಾಗಿದೆ.

ಈ ಹಿಂದೆ ಮಾ.26ರಂದು ಮೂವರನ್ನು ಮಂಗಳೂರು ನಗರ ಅಪರಾಧ ಪತ್ತೆದಳ ಪೊಲೀಸರು ಬಿಜೈ ಬಳಿ ಬಂಧಿಸಿ, 62,700 ರೂ. ನಗದು ಹಾಗೂ 4 ಮೊಬೈಲ್ ವಶಪಡಿಸಿಕೊಂಡಿದ್ದರು. ಆ ಬಳಿಕ ಮಾ.29ರಂದು ಪಣಂಬೂರು ಮೀನಕಳಿಯ ಸಮುದ್ರ ಕಿನಾರೆಯಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹದಳ ಪೊಲೀಸರು ಬಂಧಿಸಿ 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು.

ಮಾ.31ರಂದು ಗೋವಾ ಮೂಲಕ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 3.99 ಲಕ್ಷ ರೂ. ವಶಪಡಿಸಿಕೊಂಡಿದ್ದರು. ಎ.3ರಂದು ಬೆಟ್ಟಿಂಗ್ ನಿರತ ಮೂವರನ್ನು ಕಾವೂರು ಪೊಲೀಸರು ಬಂಧಿಸಿ 26 ಸಾವಿರ ರೂ. ಹಾಗೂ 4 ಮೊಬೈಲ್ ವಶಪಡಿಸಿಕೊಳ್ಳಲಾಗಿತ್ತು.
ಎ.4ರಂದು ಮೂಡುಶೆಡ್ಡೆ ಗಾಲ್ಫ್ ಕ್ಲಬ್ ಬಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹದಳ ಹಾಗೂ ಕಾವೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.

ಆರೋಪಿಗಳಿಂದ 26 ಸಾವಿರ ರೂ. ಸಹಿತ 66 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಲ್ಲದೆ, ಬಿಜೈ ನ್ಯೂ ರೋಡ್‌ನ ಅಪಾರ್ಟ್‌ಮೆಂಟ್ ಮತ್ತು ಬಿಜೈ ವಸತಿಗೃಹವೊಂದರಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆ ಉರ್ವ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿ ನಗದನ್ನು ವಶಪಡಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X