Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮು ಗಲಭೆಗೆ ಮೈತ್ರಿ ಸರಕಾರ ಆಸ್ಪದ:...

ಕೋಮು ಗಲಭೆಗೆ ಮೈತ್ರಿ ಸರಕಾರ ಆಸ್ಪದ: ಶಾಸಕ ಭರತ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ9 April 2019 9:59 PM IST
share
ಕೋಮು ಗಲಭೆಗೆ ಮೈತ್ರಿ ಸರಕಾರ ಆಸ್ಪದ: ಶಾಸಕ ಭರತ್ ಶೆಟ್ಟಿ

ಮಂಗಳೂರು, ಎ.9: ದ.ಕ. ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮಹಿಳೆಯ ಮಾನಭಂಗ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧದ ಪ್ರಕರಣ ಗಳನ್ನು ವಾಪಸ್ ಪಡೆಯುವ ಮೂಲಕ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆಗೆ ಆಸ್ಪದ ನೀಡುತ್ತಿದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಆರೋಪಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಥಳಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಹಿತ ಒಂದು ಮತಕ್ಕೆ ಸೇರಿದ ಆರೋಪಿಗಳ ಮೇಲಿನ 142 ಕೇಸ್‌ಗಳನ್ನು ವಾಪಸ್ ಪಡೆದ ಉದ್ದೇಶ ಏನು ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸಾರ್ವಜನಿಕರಿಗೆ ತಿಳಿಸಬೇಕು ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರವಿದ್ದಾಗ, ಏಳು ಮಂದಿ ಕಾಂಗ್ರೆಸ್ ಶಾಸಕರಿದ್ದರು. ಆಗ ಪದೇಪದೇ ಕೋಮು ಗಲಭೆ ನಡೆಯುತ್ತಿತ್ತು. ಬಿಜೆಪಿಯ ಏಳು ಶಾಸಕರು ಆಯ್ಕೆಯಾದ ಬಳಿಕ ಕೋಮು ಗಲಭೆಗೆ ಆಸ್ಪದ ನೀಡುತ್ತಿಲ್ಲ ಎಂದರು.

ತಿಳಿವಳಿಕೆ ಇಲ್ಲದವರ ಮತ ಬೇಕೇ?: ಕರಾವಳಿಯ ಜನತೆ ತಿಳಿವಳಿಕೆ ಇಲ್ಲದವರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕರಾವಳಿ ಜಿಲ್ಲೆಗೆ ಆಗಮಿಸಿ ಮತ ನೀಡುವಂತೆ ಸಿಎಂ ವಿನಂತಿಸುತ್ತಿದ್ದಾರೆ. ಇಲ್ಲಿನ ದೇವಸ್ಥಾನ ಇವರಿಗೆ ಬೇಕು. ತಿಳಿವಳಿಕೆ ಇಲ್ಲದವರು ಮತ ನೀಡಲು ಬೇಕೇ ಎಂಬುದನ್ನು ಕಾಂಗ್ರೆಸ್-ಜೆಡಿಎಸ್ ನಾಯಕರು ಉತ್ತರಿಸಲಿ ಎಂದು ಸವಾಲೆಸೆದರು.

ಸಂಸದ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಜಿಲ್ಲೆಗೆ 16,520 ಕೋಟಿ ರೂ. ಅನುದಾನ ತಂದಿದ್ದಾರೆ. ರಾಜ್ಯದ ಸಿದ್ದರಾಮಯ್ಯ ಸರಕಾರ ಮತ್ತು ಈಗಿನ ಮೈತ್ರಿ ಸರಕಾರ ಜಿಲ್ಲೆಗೆ ಎಷ್ಟು ಅನುದಾನ ನೀಡಿದೆ ಎಂಬುದನ್ನು ತಿಳಿಸಲಿ ಎಂದರು.

ಎನ್‌ಎಂಪಿಟಿ ಉದ್ಘಾಟನೆ ಸಂದರ್ಭ ಮಂಗಳೂರಿನಲ್ಲಿ ಸರ್ವಋತು ಮೀನುಗಾರಿಕಾ ಜೆಟ್ಟಿ ನಿರ್ಮಿಸುವುದಾಗಿ 70ರ ದಶಕದಲ್ಲಿ ಇಂದಿರಾಗಾಂಧಿ ಭರವಸೆ ನೀಡಿದ್ದರು. ಆದರೆ, ನಳಿನ್‌ಕುಮಾರ್ ಸಂಸದನಾಗಿ ಜೆಟ್ಟಿ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಸಿ, ಕಾಮಗಾರಿ ಪ್ರಕ್ರಿಯೆಯಲ್ಲಿದೆ ಎಂದು ಭರತ್ ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಗಣೇಶ ಹೊಸಬೆಟ್ಟು, ಪ್ರಮುಖರಾದ ಕಿರಣ್ ಕುಮಾರ್ ಕೋಡಿಕಲ್, ಸುಧಾಕರ ಅಡ್ಯಾರ್, ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X