Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಮತ...

ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಮತ ನೀಡಿ: ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ9 April 2019 10:36 PM IST
share
ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಮತ ನೀಡಿ: ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ

ಔಸಾ, ಎ. 9: ಮಹಾರಾಷ್ಟ್ರದ ಮರಾಠಾವಾಡ ವಲಯದ ಲಾತೂರ್‌ನ ಸಮೀಪ ಔಸಾದಲ್ಲಿ ಮಂಗಳವಾರ ಆಯೋಜಿಸಲಾದ ಬೃಹತ್ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೊದಲ ಬಾರಿಗೆ ಮತದಾರರಲ್ಲಿ ‘ದೇಶಕ್ಕೆ ಮತ ಹಾಕಿ’ ಎಂದು ಮನವಿ ಮಾಡಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಉದ್ಧವ್ ಠಾಕ್ರೆಯೊಂದಿಗೆ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡ ಮೋದಿ, ಶಿವಸೇನೆ ಹಾಗೂ ಆ ಪಕ್ಷದಲ್ಲಿ ತೊಡಗಿಕೊಂಡ ಕುಟುಂಬ ಯಾವುದೇ ಅಧಿಕಾರದ ಹುದ್ದೆ ಪಡೆದುಕೊಳ್ಳುವಾಗ ತೋರಿಸಿದ ಸಂಯಮದ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿದರು.

ಪ್ರಣಾಳಿಕೆಯಿಂದ ಹಿಡಿದು ಸರ್ಜಿಕಲ್ ಸ್ಟ್ರೈಕ್ ಹಾಗೂ ವಾಯು ದಾಳಿಯ ಅಧಿಕೃತತೆ ಬಗೆಗಿನ ಪ್ರಶ್ನೆ, ಭ್ರಷ್ಟಾಚಾರ ಸಹಿತ ಹಲವು ವಿಷಯಗಳ ಬಗ್ಗೆ ಪ್ರಧಾನಿ ತಮ್ಮ 40 ನಿಮಿಷಗಳ ಭಾಷಣದಲ್ಲಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡರು.

ತನ್ನ 40 ನಿಮಿಷಗಳ ಭಾಷಣದ ಅಂತ್ಯದಲ್ಲಿ ಮೋದಿ ಅವರು, 21ನೇ ಶತಮಾನದಲ್ಲಿ ಜನಿಸಿದ ಮತದಾರರನ್ನು ಸೆಳೆಯಲು ಪ್ರಯತ್ನಿಸಿದರು.

“ನಾವು ಮೊದಲ ಬಾರಿಗೆ ಏನು ಮಾಡಿದರೂ ಅದು ಜೀವಿತಾವಧಿವರೆಗಿನದ್ದು ಎಂಬುದನ್ನು ನೆನಪಿನಲ್ಲಿ ಇರಿಸಿಕೊಳ್ಳಿ. ನೀವೆಲ್ಲರೂ ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದೀರಿ. ನೀವೆಲ್ಲರೂ 21ನೇ ಶತಮಾನದಲ್ಲಿ ಜನಿಸಿದ್ದೀರಿ. ನೀವು ದೇಶಕ್ಕೆ ಮತ ಹಾಕಿ” ಎಂದು ಮೋದಿ ಮನವಿ ಮಾಡಿದರು.

ಯಾವುದೇ ತಪ್ಪು ಮಾಡಬೇಡಿ. ಮೊದಲ ಬಾರಿಗೆ ಮತ ಹಾಕುವಾಗ ದೇಶಕ್ಕೆ ಮತ ಹಾಕಿ ಎಂದು ಮೋದಿ ಅವರು ಬಿಜೆಪಿ , ಶಿವಸೇನೆ ಅಥವಾ ಅದರ ಮೈತ್ರಿ ಉಲ್ಲೇಖಿಸದೆ ಹೇಳಿದರು.

‘‘ದೇಶಕ್ಕೆ ಮತ ಹಾಕಿ. ದೇಶ ನಿಮಗೆ ಬಹಳಷ್ಟು ನೀಡಿದೆ. ಸಮಾಜ ನಿಮಗೆ ಬಹಳಷ್ಟು ನೀಡಿದೆ. ನಿಮ್ಮ ಹೆತ್ತವರು, ಅಧ್ಯಾಪಕರು, ವೈದ್ಯರನ್ನು ನೆನಪಿಸಿಕೊಳ್ಳಿ. ಮೊದಲ ಮತ ಕೂಡ ತುಂಬಾ ಪ್ರಮುಖವಾದುದು’’ ಎಂದು ಮೋದಿ ಹೇಳಿದರು.

‘‘ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಿಮ್ಮ ಮತ ನೀಡಿ, ಸರ್ಜಿಕಲ್ ಸ್ಟ್ರೈಕ್, ವಾಯು ದಾಳಿ ನಡೆಸಿದ ಶೂರ ಯೋಧರಿಗೆ ನಿಮ್ಮ ಮತ ನೀಡಿ, ಸೂರ್ಯನ ಉರಿ ಬಿಸಿಲನ್ನು ಲೆಕ್ಕಿಸದೆ ದುಡಿಯುತ್ತಿರುವ ರೈತರಿಗೆ ನಿಮ್ಮ ಮತ ನೀಡಿ, ಪ್ರತಿ ರೈತನಿಗೆ ನೀರಿನ ಭದ್ರತೆ ಖಾತರಿ ನೀಡುವುದಕ್ಕೆ ನಿಮ್ಮ ಮತ ನೀಡಿ, ಭಯೋತ್ಪಾದನೆ ನಿರ್ಮೂಲನೆ ಖಾತರಿ ನೀಡುವುದಕ್ಕೆ ನಿಮ್ಮ ಮತ ನೀಡಿ, ದೇಶಕ್ಕೆ ದೃಢವಾದ ಭದ್ರತೆಯ ಖಾತರಿ ನೀಡುವುದಕ್ಕೆ ನಿಮ್ಮ ಮತ ನೀಡಿ’’ ಎಂದು ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X