Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬಿಸಿನೀರು ಸೇವನೆಯ ಅದ್ಭುತ ಆರೋಗ್ಯಲಾಭಗಳ...

ಬಿಸಿನೀರು ಸೇವನೆಯ ಅದ್ಭುತ ಆರೋಗ್ಯಲಾಭಗಳ ಬಗ್ಗೆ ತಿಳಿದುಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ10 April 2019 4:43 PM IST
share
ಬಿಸಿನೀರು ಸೇವನೆಯ ಅದ್ಭುತ ಆರೋಗ್ಯಲಾಭಗಳ ಬಗ್ಗೆ ತಿಳಿದುಕೊಳ್ಳಿ

ದಿನವಿಡೀ ಸಾಕಷ್ಟು ನೀರನ್ನು ಸೇವಿಸುತ್ತಿರುವುದು ಆರೋಗ್ಯ ರಕ್ಷಣೆಗೆ ಅಗತ್ಯವಾಗಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಬಿಸಿನೀರಿನ ಸೇವನೆಯು ಕೆಲವು ಹೆಚ್ಚುವರಿ ಆರೋಗ್ಯಲಾಭಗಳನ್ನು ನೀಡುತ್ತದೆ. ಬಹಳಷ್ಟು ಜನರು ಒಂದು ಗ್ಲಾಸ್ ಬಿಸಿನೀರಿನ ಸೇವನೆಯೊಂದಿಗೆ ತಮ್ಮ ದಿನವನ್ನು ಆರಂಭಿಸುತ್ತಾರೆ ಮತ್ತು ಇದು ಅವರಿಗೆ ಹೆಚ್ಚುವರಿ ಆರೋಗ್ಯಲಾಭಗಳನ್ನು ನೀಡುತ್ತದೆ.

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ

ಬಿಸಿನೀರು ಆಹಾರವನ್ನು ವಿಭಜಿಸುವಲ್ಲಿ ಶರೀರಕ್ಕೆ ನೆರವಾಗುತ್ತದೆ ಮತ್ತು ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಬಿಸಿನೀರು ದೊಡ್ಡಕರುಳಿನ ಚಲನವಲನವನ್ನು ಉತ್ತೇಜಿಸುವುದರಿಂದ ಮಲಬದ್ಧತೆಯನ್ನು ನಿವಾರಿಸಲೂ ನೆರವಾಗುತ್ತದೆ.

ತೂಕ ಇಳಿಸಿಕೊಳ್ಳಲು ಸಹಕಾರಿ

ಶರೀರದ ತೂಕವನ್ನು ಇಳಿಸಿಕೊಳ್ಳಲು ಬಿಸಿನೀರು ನೆರವಾಗುತ್ತದೆ ಎನ್ನುವುದನ್ನು ವಿವಿಧ ಸಂಶೋಧನೆಗಳು ಬೆಟ್ಟು ಮಾಡಿವೆ. ಬಿಸಿನೀರು ಶರೀರದಲ್ಲಿಯ ವಿಷವಸ್ತುಗಳನ್ನು ಹೊರಗೆ ಹಾಕಲು ನೆರವಾಗುತ್ತದೆ. ತಣ್ಣೀರಿಗೆ ಹೋಲಿಸಿದರೆ ಬಿಸಿನೀರು ಹೆಚ್ಚು ಸಮಯ ಜಠರದಲ್ಲಿರುವುದರಿಂದ ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ.

ಕಟ್ಟಿದ ಮೂಗಿನಿಂದ ಮುಕ್ತಿ ನೀಡುತ್ತದೆ

ಬಿಸಿನೀರು ಸೇವನೆಯ ಇನ್ನೊಂದು ದೊಡ್ಡ ಲಾಭವೆಂದರೆ ಅದು ಕಟ್ಟಿಕೊಂಡಿರುವ ಮೂಗು ತೆರೆದುಕೊಳ್ಳಲು ನೆರವಾಗುತ್ತದೆ. ಕಟ್ಟಿಕೊಂಡಿರುವ ಸೈನಸ್‌ಗಳನ್ನು ಸಡಿಲಗೊಳಿಸುವ ಅದು ಶೀತದ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ನೆರವಾಗುತ್ತದೆ. ಬಿಸಿನೀರು ಸೇವಿಸಿದಾಗ ಸೈನಸ್‌ನಿಂದ ಉಂಟಾಗಿರುವ ತಲೆನೋವು ಕಡಿಮೆಯಾಗುತ್ತದೆ.

ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ

ಕೇವಲ ಕರುಳಿನ ಆರೋಗ್ಯವನ್ನು ಮಾತ್ರವಲ್ಲ, ಬಿಸಿನೀರಿನ ಸೇವನೆಯು ಶರೀರದಲ್ಲಿ ರಕ್ತಸಂಚಾರವನ್ನೂ ಹೆಚ್ಚಿಸುತ್ತದೆ. ಬಿಸಿನೀರು ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಇದರಿಂದಾಗಿ ರಕ್ತನಾಳಗಳು ಸುಲಭವಾಗಿ ಶರೀರದಾದ್ಯಂತ ರಕ್ತವನ್ನು ಸಾಗಿಸುತ್ತವೆ ಮತ್ತು ರಕ್ತಪರಿಚಲನೆಯು ಹೆಚ್ಚುತ್ತದೆ. ಇದರಿಂದಾಗಿ ಹೃದಯದ ಆರೋಗ್ಯ ಉತ್ತಮಗೊಳ್ಳುತ್ತದೆ ಮತ್ತು ಹೃದಯನಾಳೀಯ ರೋಗಗಳ ಅಪಾಯ ಕಡಿಮೆಯಾಗುತ್ತದೆ.

ನೋವನ್ನು ನೈಸರ್ಗಿಕವಾಗಿ ಶಮನಗೊಳಿಸುತ್ತದೆ

ಬಿಸಿನೀರು ರಕ್ತ ಪರಿಚಲನೆಯನ್ನು ಹೆಚ್ಚಿಸುವುದರಿಂದ ರಕ್ತದ ಹರಿವು ಹೆಚ್ಚುತ್ತದೆ ಮತ್ತು ಇದರಿಂದ ಸ್ನಾಯುಗಳು ಸಡಿಲಗೊಂಡು ನೋವು ಶಮನಗೊಳ್ಳುತ್ತದೆ. ಆಂತರಿಕ ನೋವಿದ್ದರೆ ಬಿಸಿನೀರಿನ ಸೇವನೆಯು ಹೆಚ್ಚು ಲಾಭಕಾರಿಯಾಗಿದೆ. ಮಹಿಳೆಯರು ಬಿಸಿನೀರು ಸೇವಿಸುವ ಮೂಲಕ ಋತುಕಾಲದ ನೋವಿನಿಂದಲೂ ಶಮನ ಪಡೆಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X