Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರ ಸಚಿವ ಅನಂತಕುಮಾರ್ ನಾಪತ್ತೆಯಾದ...

ಕೇಂದ್ರ ಸಚಿವ ಅನಂತಕುಮಾರ್ ನಾಪತ್ತೆಯಾದ ಎಷ್ಟು ಮೀನುಗಾರರ ಮನೆಗೆ ಹೋಗಿದ್ದಾರೆ ?: ನಾಡಗೌಡ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ10 April 2019 10:13 PM IST
share

ಉಡುಪಿ, ಎ.10: ‘ಮೀನುಗಾರಿಕಾ ಸಚಿವನಾಗಿ ನಾನು ನಾಪತ್ತೆಯಾದ ಎಲ್ಲಾ ಏಳು ಮಂದಿ ಮೀನುಗಾರರ ಮನೆಗೆ ಹೋಗಿದ್ದೇನೆ. ರಾಜ್ಯ ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಸಹ ಮೀನುಗಾರರ ಮನೆಗೆ ಹೋಗಿದ್ದಾರೆ. ಆದರೆ ಉತ್ತರ ಕನ್ನಡದ ಸಂಸದರಾಗಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ನಾಪತ್ತೆಯಾದ ಉತ್ತರಕನ್ನಡದ ಎಷ್ಟು ಮೀನುಗಾರರ ಮನೆಗೆ ತೆರಳಿದ್ದಾರೆಂಬುದನ್ನು ಬಿಜೆಪಿಗರು ಮೊದಲು ಹೇಳಲಿ’ ಎಂದು ರಾಜ್ಯ ಮೀನುಗಾರಿಕಾ ಹಾಗೂ ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಗರಂ ಆಗಿ ಪ್ರಶ್ನಿಸಿದ್ದಾರೆ.

ಕಳೆದ ರವಿವಾರ ಉಡುಪಿಗೆ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಮೋದ್ ಮಧ್ವರಾಜ್‌ರ ಮನೆಗೆ ಊಟಕ್ಕೆ ಹೋದರೂ, ಅಲ್ಲೇ ಸಮೀಪದಲ್ಲಿದ್ದ ನಾಪತ್ತೆಯಾದ ಮೀನುಗಾರರ ಮನೆಗೆ ಹೋಗಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ ಬಗ್ಗೆ ಇಂದು ಸುದ್ದಿಗಾರರು ನಾಡಗೌಡರನ್ನು ಪ್ರಶ್ನಿಸಿದಾಗ ಸಿಡಿಮಿಡಿಗೊಂಡ ಅವರು ಹೀಗೆ ಮರು ಪ್ರಶ್ನೆ ಹಾಕಿದರು.

ಅನಂತಕುಮಾರ್ ಹೆಗಡೆ, ಮಲ್ಪೆಯ ಸುವರ್ಣ ತ್ರಿಭುಜ ಬೋಟಿನೊಂದಿಗೆ ನಾಪತ್ತೆಯಾದ ಉತ್ತರ ಕನ್ನಡದ ಐದು ಮಂದಿ ಮೀನುಗಾರ ಮನೆಯತ್ತ ಇದುವರೆಗೆ ತಲೆಹಾಕಿಲ್ಲ. ಈ ಐದು ಕುಟುಂಬಗಳು ಅವರದೇ ಕ್ಷೇತ್ರದ ಮತದಾರರು. ಹಾಗಾದರೆ ಸಂಸದನಾಗಿ ಅನಂತಕುಮಾರ್ ಹೆಗಡೆಗೆ ಜವಾಬ್ದಾರಿ ಇಲ್ಲವೇ? ಅವರು ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ. ಬಡ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದಾರಾ? ನಾಪತ್ತೆಯಾದವರ ಬಗ್ಗೆ ಮಾತನಾಡಿ ದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದರು.

ಬೋಟ್ ನಾಪತ್ತೆ: ಸುವರ್ಣ ತ್ರಿಭುಜ ಬೋಟಿನೊಂದಿಗೆ ನಾಪತ್ತೆ ಯಾಗಿರುವ ಏಳು ಮಂದಿ ಮೀನುಗಾರರ ಕುರಿತು ಸಚಿವರನ್ನು ಪ್ರಶ್ನಿಸಿದಾಗ, ಸಚಿವನಾಗಿ ನಾನು ಕಣ್ಮರೆಯಾದ ಉಡುಪಿ ಮತ್ತು ಉತ್ತರ ಕನ್ನಡದ ಏಳು ಮಂದಿ ಮೀನುಗಾರರ ಮನೆಗೂ ಹೋಗಿ ಬಂದಿದ್ದೇನೆ. ಅದೇ ರೀತಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ತೆರಳಿದ್ದಾರೆ. ನಾಪತ್ತೆಯಾದ ಪ್ರತಿಯೊಂದು ಕುಟುಂಬಕ್ಕೂ ತಲಾ ಒಂದು ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರವನ್ನೂ ಘೋಷಿಸಿದ್ದೇವೆ. ಅವರ ಪತ್ತೆಗೆ ನಮ್ಮೆಲ್ಲಾ ಪ್ರಯತ್ನಗಳನ್ನು ನಡೆಸುತಿದ್ದೇವೆ ಎಂದರು.

ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಅವರ ಅಪಾಯಿಂಟ್ ಮೆಂಟ್ ಕೇಳಿದ್ದೆವು. ಆದರೆ ಅವರು ನಮಗೆ ಅಪಾಯಿಂಟ್‌ಮೆಂಟ್ ಕೊಡಲಿಲ್ಲ ಎಂದು ನಾಡಗೌಡ ತಿಳಿಸಿದರು. ನನಗೆ ತಿಳಿದಂತೆ ರಾಜ್ಯ ಸರಕಾರದಂತೆ ಕೇಂದ್ರ ಸರಕಾರದ ಬಳಿ ಸಹ ಪ್ರಕರಣದ ಕುರಿತು ಏನೂ ಹೇಳಲು ನಿಖರ ಮಾಹಿತಿಗಳಿಲ್ಲ ಎಂದವರು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನೌಕಾದಳವೂ ಬೋಟಿಗಾಗಿ ಸಾಕಷ್ಟು ಹುಡುಕಾಟ ನಡೆಸಿದೆ. ಈ ತನಕ ಯಾವುದೇ ನಿಖರ ಮಾಹಿತಿಗಳು ಸಿಕ್ಕಿಲ್ಲ ಎಂದವರು ಹೇಳಿದ್ದಾರೆ ಎಂದರು.

ಬೋಟಿಗೆ ಎನ್‌ಎಂಆರ್ ಉಪಕರಣ: ಸುವರ್ಣ ತ್ರಿಭುಜ ಮೀನುಗಾರಿಕಾ ಬೋಟು ನಾಪತ್ತೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯ ಬಳಿಕ ಆಳಸಮುದ್ರ ಮೀನುಗಾರಿಕೆಗೆ ತೆರಳುವ ಎಲ್ಲಾ ಬೋಟು ಗಳಿಗೆ ಎನ್‌ಎಂಆರ್ (ನೇವಿಗೇಶಲ್ ಮೆಸೇಜ್ ರಿಸೀವರ್) ಉಪಕರಣ ಬಳಕೆಯನ್ನು ಕಡ್ಡಾಯ ಗೊಳಿಸುವುದಾಗಿ ಅವರು ತಿಳಿಸಿದರು.

ಸುವರ್ಣ ತ್ರಿುಜಮೀನುಗಾರಿಕಾಬೋಟುನಾಪತ್ತೆಯಾದಹಿನ್ನೆಲೆಯಲ್ಲಿಲೋಕಸಾ ಚುನಾವಣೆಯ ಬಳಿಕ ಆಳಸಮುದ್ರ ಮೀನುಗಾರಿಕೆಗೆ ತೆರಳುವ ಎಲ್ಲಾ ಬೋಟು ಗಳಿಗೆ ಎನ್‌ಎಂಆರ್ (ನೇವಿಗೇಶಲ್ ಮೆಸೇಜ್ ರಿಸೀವರ್) ಉಪಕರಣ ಬಳಕೆಯನ್ನು ಕಡ್ಡಾಯ ಗೊಳಿಸುವುದಾಗಿ ಅವರು ತಿಳಿಸಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೋ ಶಿಫಾರಸ್ಸು ಮಾಡಿದ ಈ ಉಪಕರಣದ ಬಳಕೆಗಾಗಿ ಈ ಬಾರಿಯ ಬಜೆಟ್‌ನಲ್ಲಿ ಮೂರು ಕೋಟಿ ರೂ.ಗಳ ಪ್ರಸ್ತಾಪವನ್ನು ಇರಿಸಲಾಗಿದೆ. ಈಗ ಚುನಾವಣಾ ನೀತಿ ಸಂಹಿತೆ ಇರುವುದರಿಂದ, ಆಳಸಮುದ್ರ ಮೀನುಗಾರಿಕೆ ತೆರಳುವ ಬೋಟುಗಳ ಎಲ್ಲಾ ಸಂದೇಶಗಳನ್ನು ತಕ್ಷಣವೇ ಒದಗಿಸುವ ಈ ಉಪಕರಣದ ಕುರಿತು ವಿಸ್ತೃತ ಮಾಹಿತಿಗಳನ್ನು ಮುಂದೆ ಒದಗಿಸಲಾಗುವುದು. ಈ ಯಂತ್ರ ದಿಂದ ಬೋಟು ಅಪಾಯಕ್ಕೆ ಸಿಲುಕಿದರೆ ಅದರ ಕುರಿತು ನಿಖರವಾದ ಮಾಹಿತಿ ಲಭಿಸುತ್ತದೆ ಎಂದರು.

ಸೀಮೆಎಣ್ಣೆಗೆ 19.5 ಕೋಟಿ ರೂ.: ಇತ್ತೀಚೆಗೆ ಯಾಂತ್ರೀಕೃತ ನಾಡದೋಣಿಗೆ ಬಳಸುವ ಸೀಮೆಎಣ್ಣೆಗಾಗಿ ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಕೇಂದ್ರ ಸರಕಾರ ಸೀಮೆಎಣ್ಣೆ ಸರಬರಾಜನ್ನೇ ನಿಲ್ಲಿಸಿರುವುದರಿಂದ ನಮಗೆ ಕಷ್ಟವಾಗಿತ್ತು. ಈಗ ಈ ಸಲದ ಬಜೆಟ್‌ನಲ್ಲಿ ಮೀನುಗಾರಿಕಾ ದೋಣಿಗಳಿಗೆ ಬಳಸುವ ಸೀಮೆ ಎಣ್ಣೆಗಾಗಿ 19.5 ಕೋಟಿ ರೂ.ಗಳ ಪ್ರಸ್ತಾಪ ವನ್ನು ಬಜೆಟ್‌ನಲ್ಲಿ ಇರಿಸಲಾಗಿದೆ. ಇದರಿಂದ ದೋಣಿಗೆ ಪ್ರತಿ ತಿಂಗಳು ಸೀಮೆಎಣ್ಣೆಯನ್ನು ಒದಗಿಸಲಾ ಗುವುದು. ಅಲ್ಲದೇ ಡೀಸೆಲ್‌ಗಾಗಿಯೂ 146.5ಕೋಟಿ ರೂ.ಗಳ ಪ್ರಸ್ತಾಪ ಬಜೆಟ್‌ನಲ್ಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X