Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಸಪೇಟೆ ಬಿಜೆಪಿ ಮುಖಂಡನಿಂದ ಅಪ್ರಾಪ್ತೆಯ...

ಹೊಸಪೇಟೆ ಬಿಜೆಪಿ ಮುಖಂಡನಿಂದ ಅಪ್ರಾಪ್ತೆಯ ಅತ್ಯಾಚಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ10 April 2019 11:07 PM IST
share
ಹೊಸಪೇಟೆ ಬಿಜೆಪಿ ಮುಖಂಡನಿಂದ ಅಪ್ರಾಪ್ತೆಯ ಅತ್ಯಾಚಾರ: ಆರೋಪ

ಮಂಗಳೂರು/ಹೊಸಪೇಟೆ, ಎ.10: ಹಣದ ಆಮಿಷವೊಡ್ಡಿ ಅಪ್ರಾಪ್ತೆಯನ್ನು ಅತ್ಯಾಚಾರಗೈದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.

ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ನಿವಾಸಿ, ತಾಪಂ ಮಾಜಿ ಸದಸ್ಯ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದೇವರಮನೆ ಚಂದ್ರಶೇಖರಪ್ಪ (50) ತಲೆಮರೆಸಿಕೊಂಡ ಆರೋಪಿ.

ಸಂತ್ರಸ್ತೆಯ ತಂದೆ-ತಾಯಿ ಬಡವರಾಗಿದ್ದು, ಕೂಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು. ಅಪ್ರಾಪ್ತೆಯು ತನ್ನ ಅಜ್ಜಿಯ ಊರಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಬಾಲಕಿಯು ಅಜ್ಜಿಯ ಹೋಟೆಲ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಳು. ಆರೋಪಿ ದೇವರಮನೆ ಚಂದ್ರಶೇಖರಪ್ಪ ಹೋಟೆಲ್‌ಗೆ ಚಹಾ ಕುಡಿಯಲೆಂದು ಆಗಾಗ ಬರುತ್ತಿದ್ದನು. ಬಾಲಕಿಗೆ ಆರೋಪಿಯು 20, 50 ರೂ. ಹೀಗೆ ಆಗಾಗ ಹಣ ನೀಡಿ ಆಮಿಷವೊಡ್ಡುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸುಮಾರು ಆರು ತಿಂಗಳ ಹಿಂದೆ ಆರೋಪಿಯು ತನ್ನ ಮನೆಯೊಳಗೆ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಈ ಕೃತ್ಯವನ್ನು ಆರೋಪಿ ಹಲವು ದಿನಗಳ ಕಾಲ ಮುಂದುವರಿಸಿದ್ದಾನೆ. ಈ ವಿಷಯವನ್ನು ಯಾರ ಮುಂದೆಯೂ ಬಾಯಿ ಬಿಡಬಾರದು. ಬಾಯಿಬಿಟ್ಟದ್ದೇ ಆದಲ್ಲಿ ಜೀವಂತವಾಗಿ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಸಂತ್ರಸ್ತೆ ಬಾಲಕಿಯು ಹೊಟ್ಟೆನೋವೆಂದು ತಾಯಿಯ ಬಳಿ ಅವಲತ್ತುಕೊಂಡಿದ್ದಾಳೆ. ಆಕೆಯನ್ನು ಹೊಸಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಆರೋಪಿ ಬಂಧನವಾಗಿಲ್ಲ: ಆರೋಪಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಾಗಿದ್ದು, ರಾಜಕೀಯ ಪ್ರಭಾವ ಬಳಸಿ ಪ್ರಕರಣದಿಂದ ಹಿಂದೆ ಸರಿಯಲು ಯತ್ನಿಸುತ್ತಿದ್ದಾನೆ. ಸದ್ಯ ಆತ ಗ್ರಾಮದಿಂದ ಪರಾರಿಯಾಗಿದ್ದಾನೆ. ಪೊಲೀಸರು ಇಲ್ಲಿಯವರೆಗೂ ಆರೋಪಿಯನ್ನು ಬಂಧಿಸಿಲ್ಲ ಎಂದು ಪೋಷಕರು ‘ವಾರ್ತಾಭಾರತಿ’ಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಗಾಗಿ ತಂಡವೊಂದನ್ನು ರಚಿಸಲಾಗಿದೆ. ಆರೋಪಿ ಯಾವುದೇ ರಾಜಕೀಯ ಪಕ್ಷದ ಮುಖಂಡನಾಗಿದ್ದರೂ ಆತನನ್ನು ಬಂಧಿಸುತ್ತೇವೆ. ಆರೋಪಿಯ ಸುಳಿವು ಪತ್ತೆಯಾಗಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು.
- ಪರಸಪ್ಪ, ಪೊಲೀಸ್ ಇನ್‌ಸ್ಪೆಕ್ಟರ್,
ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆ

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಿಂದ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸಂತ್ರಸ್ತೆಗೆ ನ್ಯಾಯ ದೊರಕಬೇಕು. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು.
- ಮುಹಮ್ಮದ್ ಗೌಸ್,
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X