Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಗುರಿಕಾರರ ಸಮಾವೇಶ, ಮೀನುಗಾರ...

ಉಡುಪಿ: ಗುರಿಕಾರರ ಸಮಾವೇಶ, ಮೀನುಗಾರ ಮಹಿಳೆಯರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ11 April 2019 9:07 PM IST
share
ಉಡುಪಿ: ಗುರಿಕಾರರ ಸಮಾವೇಶ, ಮೀನುಗಾರ ಮಹಿಳೆಯರಿಗೆ ಸನ್ಮಾನ

ಉಡುಪಿ, ಎ.11: ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಮತ್ತು ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನೇತೃತ್ವದಲ್ಲಿ ಗುರಿಕಾರರ ಸಮಾವೇಶ, ಗೌರವಧನ ವಿತರಣೆ ಮತ್ತು ಮತ್ಸಜ್ಯೋತಿ ಮೀನುಗಾರ ಮಹಿಳೆಯರಿಗೆ ಗೌರವ ಪುರಸ್ಕಾರ ಹಾಗೂ ಸಾಮೂಹಿಕ ವಿವಾಹದ ವೀಳ್ಯಶಾಸ್ತ್ರ ಕಾರ್ಯಕ್ರಮ ಇಂದು ಅಂಬಲಪಾಡಿಯ ಫ್ಯಾಮಿಲಿ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್, ಗುರಿಕಾರರು ಸಮಾಜದ ಆಗುಹೋಗುಗಳ ಬಗ್ಗೆ ಚಿಂತನೆ ಮಾಡಬೇಕು. ಮೊಗವೀರರ ಕಷ್ಟಗಳಿಗೆ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಮೊಗವೀರ ಯುವವೇದಿಕೆ ಸದಾ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮೊಗವೀರ ಸಮಾಜದ ಕೂಡುಕಟ್ಟಿನ ಎಲ್ಲ ನಿಯಮ ಗಳನ್ನು ಸಮರ್ಪಕವಾಗಿ ಪಾಲಿಸಿಕೊಂಡು ಬಂದ ಬೆಳ್ಳಂಪಳ್ಳಿಯ ಮೊಗವೀರ ಗ್ರಾಮಸಭಾ, ಮಣಿಪುರ ಮೊಗವೀರಸಭಾ, ಕುಂದಾಪುರದ ನಾರಾಯಣ ಮೊಗವೀರಸಭಾವನ್ನು ಗೌರವಿಸಲಾಯಿತು.

ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ವಿನಯ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರಿಕಾರರು ಮೊಗವೀರ ಸಮಾಜದ ಪರಂಪರೆಯನ್ನು ಎತ್ತಿಹಿಡಿಯುವವರು. ಸಮಾಜದ ಅಭಿವೃದ್ಧಿಯಲ್ಲಿ ಇವರ ಕೊಡುಗೆ ಅಪಾರ ಎಂದರು.

ದ.ಕ.ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಬೆಣ್ಣೆಕುದ್ರು-ಬಾರಕೂರಿನ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ವಿಶ್ವನಾಥ ಮಾಸ್ತರ್ ಮಾತನಾಡಿದರು. ಹಿರಿಯರ ಸಂಪ್ರದಾಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುತ್ತಾ ಬಂದಿರುವ ಗುರಿಕಾರರು ನಮ್ಮ ಸಂಪ್ರದಾಯ ಗಳನ್ನು ಎತ್ತಿಹಿಡಿಯಬೇಕು. ಇತ್ತೀಚಿನ ದಿನಗಳಲ್ಲಿ ವಿವಾಹ ಸಮಾರಂಭಗಳಲ್ಲಿ ನಡೆಯುತ್ತಿರುವ ವಿವಾಹ ಸಮಾರಂಭದ ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.

ಮೊಗವೀರ ಸಮಾಜದ 41 ಜೋಡಿಗಳಿಗೆ ಸಾಮೂಹಿಕ ವಿವಾಹದ ವೀಳ್ಯಶಾಸ್ತ್ರ ಮಾಡಲಾಯಿತು. ಗುರಿಕಾರರ ಸಂಪ್ರದಾಯದ ಬಗ್ಗೆ ಹೋಬಳಿಯ ಗುರಿಕಾರರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

‘ಮತ್ಸಜ್ಯೋತಿ’ ಪುರಸ್ಕೃತರು: ಕೋಟೇಶ್ವರದ ಕೂಸಿ ಯಾನೆ ಲಕ್ಷ್ಮೀ ಮರಕಾಲ್ತಿ, ಕುಂದಾಪುರದ ಸುಶೀಲಾ ಮೊಗೇರ್ತಿ, ಬೈಂದೂರಿನ ನಾಗಮ್ಮಾ, ಹಾಲಾಡಿಯ ಸುಶೀಲಾ ಮೊಗೇರ್ತಿ, ಕೋಟೇಶ್ವರದ ಲಕ್ಷ್ಮೀ ಮರಕಾಲ್ತಿ, ಹೆಮ್ಮಾಡಿಯ ಪರಮೇಶ್ವರಿ ಮೊಗವೀರ, ಸಾಲಿಗ್ರಾಮದ ರಾಧು ಕುಂದರ್, ಬ್ರಹ್ಮಾವರದ ಭಾಗಿ ಮರಕಾಲ್ತಿ, ಪೆರ್ಡೂರಿನ ಕಿಟ್ಟಿ ಸಾಲ್ಯಾನ್, ಉಪ್ಪೂರಿನ ಸರಸು ಮರಕಾಲ್ತಿ, ಪಡುಬಿದ್ರಿಯ ಸುನಂದಾ ಕರ್ಕೇರ, ಪಡುಬಿದ್ರಿಯ ಆನಂದಿ ಆರ್.ಕುಂದರ್, ಮಲ್ಪೆಯ ದೇವಿ ಕುಂದರ್ ಹಾಗೂ ಉಳ್ಳಾಲದ ಮೀನಾಕ್ಷಿ ಇವರನ್ನು ಗೌರವಿಸಲಾಯಿತು.

ಬಗ್ವಾಡಿ ಹೋಬಳಿ ಮೊಗವೀರ ಮಹಾಜನ ಸೇವಾ ಸಂಘದ ಶಾಖಾಧ್ಯಕ್ಷ ಕೆ.ಕೆ.ಕಾಂಚನ್, ಮೊಗವೀರ ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ಗಣೇಶ್ ಕಾಂಚನ್, ಉದ್ಯಮಿ ಶಿವ ಬಿ. ಅಮೀನ್ ಉಪಸ್ಥಿತರಿದ್ದರು.

ಸತೀಶ್ ಎಂ.ನಾಯ್ಕ ಸ್ವಾಗತಿಸಿದರು. ಶಿವರಾಂ ಕೆ.ಎಂ. ವಂದಿಸಿ, ಚಂದ್ರೇಶ್ ಪಿತ್ರೋಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X