Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಬಿಜೆಪಿ ಉಚ್ಛಾಟಿತರ...

ಕುಂದಾಪುರ: ಬಿಜೆಪಿ ಉಚ್ಛಾಟಿತರ ಪಾಳಯದಲ್ಲಿ ‘ತೆನೆ ಹೊತ್ತ ಮಹಿಳೆ’

ವಾರ್ತಾಭಾರತಿವಾರ್ತಾಭಾರತಿ11 April 2019 9:26 PM IST
share
ಕುಂದಾಪುರ: ಬಿಜೆಪಿ ಉಚ್ಛಾಟಿತರ ಪಾಳಯದಲ್ಲಿ ‘ತೆನೆ ಹೊತ್ತ ಮಹಿಳೆ’

 ಕುಂದಾಪುರ, ಎ.11: ಪಕ್ಷವಿರೋಧಿ ಚಟುವಟಿಕೆಗಳಿಗಾಗಿ ಕೆಲ ಸಮಯದ ಹಿಂದೆ ಬಿಜೆಪಿಯಿಂದ ಉಚ್ಚಾಟಿತರಾದವರೊಂದಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಇಂದು ಕಾಣಿಸಿಕೊಳ್ಳುವ ಮೂಲಕ ಎದುರಾಳಿ ಪಾಳೆಯಲ್ಲಿ ಕಳವಳ ಮೂಡಿಸಿದ್ದಾರೆ.

ಕುಂದಾಪುರದಲ್ಲಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಮಾಜಿ ಪುರಸಭಾ ಉಪಾಧ್ಯಕ್ಷ ರಾಜೇಶ ಕಾವೇರಿ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪರ್ಧಿಸಿದ್ದಾಗ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಿಶೋರ್ ಕುಮಾರ್ ಅವರ ಕುಂದಾಪುರದ ಕಲಾಕ್ಷೇತ್ರದ ಕಚೇರಿಗೆ ಗುರುವಾರ ದಿಢೀರ್ ಭೇಟಿ ನೀಡಿದ ಪ್ರಮೋದ್ ಮಧ್ವರಾಜ್ ತನಗೆ ಮತ ನೀಡುವಂತೆ ಮನವಿ ಮಾಡಿದರು.

ಕುಂದಾಪುರದಲ್ಲಿ ಬಿಜೆಪಿ ಪ್ರಮುಖರಾಗಿದ್ದ ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಸರ್ವೋತ್ತಮ ಹೆಗ್ಡೆ, ಮೇರ್ಡಿ ಸತೀಶ್ ಶೆಟ್ಟಿ ಸೇರಿದಂತೆ ಹಲವರ ಗುಂಪೊಂದು, ಒಂದೊಮ್ಮೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪಕ್ಷಕ್ಕೆ ಮರು ಸೇರ್ಪಡೆಯನ್ನು ಬಯಸಿದಾಗ ಅದನ್ನು ತೀವ್ರವಾಗಿ ವಿರೋಧಿಸಿದ್ದರು.

ಇದರಿಂದ ಕುಂದಾಪುರ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿತ್ತು. ಇವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಕದತಟ್ಟಿದ ಜಯಪ್ರಕಾಶ್ ಹೆಗ್ಡೆಗೆ ರತ್ನಗಂಬಳಿ ಸ್ವಾಗತ ನೀಡಿದ್ದರು. ಇವರ ಭಿನ್ನಮತ ಪರಾಕಾಷ್ಟೆಯನ್ನು ತಲುಪಿದ್ದು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕುಂದಾಪುರದಲ್ಲಿ ನಡೆದ ಯಡಿಯೂರಪ್ಪರ ಸಮಾರಂದಲ್ಲಿ ಇವರು ಹಾಲಾಡಿ ವಿರೋಧಿ ಭಿತ್ತಿ ಪತ್ರ ಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿ ಹಾಲಾಡಿ ಅವರ ಮರುಸೇರ್ಪಡೆಯನ್ನು ಸಾರ್ವಜನಿಕವಾಗಿಯೇ ವಿರೋಧಿಸಿದ್ದರು.

ಆದರೆ ಇಲ್ಲಿ ಹಾಲಾಡಿ ಪರ ಬ್ಯಾಟ್ ಬೀಸಿದ ಯಡ್ಡಿ, ಅವರ ವಿರೋಧಿ ಬಣಕ್ಕೆ ಹೊರ ಹೋಗುವಂತೆ ಸಾರ್ವಜನಿಕವಾಗಿಯೇ ಜಾಡಿಸಿದ್ದರು. ಅನಂತರ ಬೂದಿಮುಚ್ಚಿದ ಕೆಂಡದಂತಿದ್ದ ಭಿನ್ನಮತ ಕುಂದಾಪುರ ಪುರಸಭಾ ಚುನಾವಣೆ ಸಂದರ್ಭದಲ್ಲಿ ಭುಗಿಲೆದ್ದು, ಬಿಜೆಪಿಯ ಮೋಹನ್ ಶೆಣೈ ಎದುರು ಬಂಡಾಯ ವಾಗಿ ಸ್ಫರ್ಧಿಸಿದ ರಾಜೇಶ್ ಕಾವೇರಿ ಅವರನ್ನು ಪಕ್ಷದಿಂದ ಹೊರಹಾಕ ಲಾಯಿತು.

ಇದೀಗ ಈ ಪಾಳಯಕ್ಕೆ ನುಗ್ಗಿದ ಪ್ರಮೋದ್‌ರನ್ನು ಸ್ವಾಗತಿಸಿದ ಕಿಶೋರ್ ಕುಮಾರ್ ಮತ್ತು ರಾಜೇಶ್ ಕಾವೇರಿ, ನಾವೆಲ್ಲರೂ ಅಸಲಿಗೆ ಈಗಲೂ ಬಿಜೆಪಿ ಯವರೇ. ಕೇಂದ್ರದಲ್ಲಿ ನಮಗೆ ಮೋದಿ ಬೇಕೆ ಬೇಕು. ಆದರೆ ಸ್ಥಳೀಯವಾಗಿ ಕ್ಷೇತ್ರವನ್ನು ಅಭಿವೃದ್ಧಿಗೆ ಕೊಂಡೊಯ್ಯಬೇಕಾದ ನಿಮ್ಮಂಥಹ ಅಭ್ಯರ್ಥಿ ಬೇಕು. ಹೀಗಾಗಿ ನಿಮಗೆ ನಮ್ಮ ಮತ ಎಂದು ಖುಲ್ಲಂ ಖುಲ್ಲಾ ಆಶ್ವಾಸನೆ ನೀಡಿ ಬಿಟ್ಟರು. ಇವರ ಈ ಮಾತು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ‘ಗೋ ಬ್ಯಾಕ್ ಶೋಭಾ’ ಅಭಿಯಾನದ ಮುಂದುವರಿದ ಭಾಗದಂತಿತ್ತು.

ಇಂದು ರಾಜೇಶ್ ಕಾವೇರಿ ಹಾಗೂ ಕಿಶೋರ್‌ಕುಮಾರ್ ಅವರೊಂದಿಗೆ ಹಿಂದೆ ಬಿಜೆಪಿ ಭಿನ್ನಮತದ ಮಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮೇರ್ಡಿ ಸತೀಶ್ ಶೆಟ್ಟಿ ಹಾಗೂ ಕೊಟೇಶ್ವರ ಗ್ರಾಪಂನ ಬಿಜೆಪಿ ಉಚ್ಛಾಟಿತ ಅಧ್ಯಕ್ಷೆ ಜಾನಕಿ ಬಿಲ್ಲವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದಿದ್ದು ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X