Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಕಾಲೀನ ಘಟನೆಗಳು ದೇಶದಲ್ಲಿ...

ಸಮಕಾಲೀನ ಘಟನೆಗಳು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ಸೂಚಿಸುತ್ತಿವೆ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 April 2019 10:14 PM IST
share
ಸಮಕಾಲೀನ ಘಟನೆಗಳು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ಸೂಚಿಸುತ್ತಿವೆ: ಸುಪ್ರೀಂ ಕೋರ್ಟ್

 ಹೊಸದಿಲ್ಲಿ,ಎ.11: ದೇಶದಲ್ಲಿ ಭಿನ್ನಾಭಿಪ್ರಾಯದ ಧ್ವನಿಗಳ ವಿರುದ್ಧ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಕಲಾತ್ಮಕ ಸ್ವಾತಂತ್ರ್ಯದ ಮೇಲ ನಿರ್ಬಂಧಗಳನ್ನು ಹೇರುತ್ತಿರುವ ಬಗ್ಗೆ ಗುರುವಾರ ಕಳವಳ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯವು,ಜನತೆಯ ಸ್ವಾತಂತ್ರ್ಯವನ್ನು ರಕ್ಷಿಸಲು ಸರಕಾರವು ಸಂವಿಧಾನಾತ್ಮಕವಾಗಿ ಬದ್ಧವಾಗಿದೆ ಎಂದು ಹೇಳಿತು. ಇದೇ ವೇಳೆವ್ಯಂಗಾತ್ಮಕ ಚಿತ್ರ ‘ಭೋಬಿಶ್ಯೋಟೆರ್ ಭೂತ್’ನ ಬಿಡುಗಡೆಗೆ ತಡೆಯನ್ನೊಡ್ಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಸರಕಾರಕ್ಕೆ 20 ಲ.ರೂ.ಗಳ ದಂಡವನ್ನು ನ್ಯಾಯಾಲಯವು ವಿಧಿಸಿತು.

ಕಲಾವಿದರು ಸಂಪೂರ್ಣ ಸ್ವಾತಂತ್ರ್ಯ ಮತ್ತು ಟೀಕಿಸುವ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅವರ ಕಲಾತ್ಮಕ ಸ್ವಾತಂತ್ರ್ಯವನ್ನು ಸರಕಾರಿಸಂಸ್ಥೆಗಳು ನಿರ್ಬಂಧಿಸುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ ಮತ್ತು ಹೇಮಂತ ಗುಪ್ತಾ ಅವರ ಪೀಠವು ಹೇಳಿತು.
  ಅಧಿಕಾರದಲ್ಲಿರುವವರು ಇತರರ ನಂಬಿಕೆಯ,ಚಿಂತನೆಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ಸಂವಿಧಾನವು ಅನುಮತಿ ನೀಡುವುದಿಲ್ಲ. ಅಭಿಪ್ರಾಯಗಳ ಸಂವಹನವುಮಾನವನ ಶಾಸನಬದ್ಧ ಹಕ್ಕು ಆಗಿದೆ ಮತ್ತು ಈ ಅಭಿಪ್ರಾಯಗಳು ಯಾರನ್ನು ಉದ್ದೇಶಿಸಿವೆಯೋ ಅವರ ಸ್ವೀಕಾರಾರ್ಹತೆಯ ನಿಯಂತ್ರಣಕ್ಕೊಳಪಟ್ಟಿಲ್ಲ. ಕಲೆಯನ್ನು ಯಾವುದೇ ರೂಪದಲ್ಲಿ ಬಿಂಬಿಸುವ ಕ್ಷಮತೆಯು ಸಂವಿಧಾನಾತೀತ ಪ್ರಾಧಿಕಾರಿಯ ಅಧೀನಕ್ಕೊಳಪಟ್ಟರೆ ಮೂಲಭೂತ ಮಾನವ ಸ್ವಾತಂತ್ರ್ಯಗಳಿಗೆ ಅಸ್ಪಷ್ಟತೆ ಮತ್ತು ನಿರಂಕುಶಾಧಿಕಾರದಿಂದಕುತ್ತುಂಟಾಗುವ ಗಂಭೀರ ಅಪಾಯವಿದೆ ಎಂದು ತೀರ್ಪನ್ನು ಬರೆದ ನ್ಯಾ.ಚಂದ್ರಚೂಡ ಹೇಳಿದರು.

ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದಿರುವ ಚಿತ್ರದ ಬಿಡುಗಡೆಗೆ ಅಡ್ಡಿಯನ್ನುಂಟು ಮಾಡುವ ಮೂಲಕ ಪ.ಬಂಗಾಳ ಪೊಲೀಸರು ತಮ್ಮ ಅಧಿಕಾರವನ್ನುದುರುಪಯೋಗಿಸಿಕೊಂಡಿದ್ದಾರೆ ಎಂದು ಹೇಳಿದ ನ್ಯಾಯಾಲಯವು, ಸದ್ಯದ ಸಂಸ್ಕೃತಿಗಳನ್ನು ಟೀಕಿಸುವ ಭಾಷಣಗಳು,ಅಭಿಪ್ರಾಯಗಳ ಧ್ವನಿಯನ್ನುಡುಗಿಸಲು ಮತ್ತು ಕಾನೂನಿಗೆವಿಧೇಯ ಪ್ರಜೆಗಳನ್ನು ಮಣಿಸಲು ಬೆದರಿಕೆಯನ್ನೊಡ್ಡಲು ಪೊಲೀಸರು ಪ್ರಯತ್ನಿಸಿದ್ದರು ಎಂದು ತಿಳಿಸಿತು. ಕಲಾತ್ಮಕ ಸ್ವಾತಂತ್ರಕ್ಕೆ ಒತ್ತು ನೀಡಿದ ಅದು,ಪೊಲೀಸರು ಸಾರ್ವಜನಿಕನೈತಿಕತೆಯ ಸ್ವಘೋಷಿತ ಪಾಲಕರಾಗುವಂತಿಲ್ಲ ಎಂದು ಹೇಳಿತು.
ಚಿತ್ರ ನಿರ್ಮಾಪಕರಿಗೆ ಉಂಟಾಗಿರುವ ನಷ್ಟವನ್ನು ಭರಿಸುವಂತೆ ನ್ಯಾಯಾಲಯವು ಪಶ್ಚಿಮ ಬಂಗಾಳ ಸರಕಾರಕ್ಕೆ ಆದೇಶಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X