Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನ ಕಾಫಿ ಬೆಳೆಗಾರರಿಗೆ ಕೇಂದ್ರ...

ಕೊಡಗಿನ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ: ಶಾಸಕ ಹಾರಿಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ11 April 2019 10:59 PM IST
share
ಕೊಡಗಿನ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ: ಶಾಸಕ ಹಾರಿಸ್ ಆರೋಪ

ಮಡಿಕೇರಿ,ಎ.11: ಕೊಡಗಿನ ಕಾಫಿ ಬೆಳೆಗಾರರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದ್ದು, ಪ್ರತಾಪ್ ಸಿಂಹ ಅವರ ಕಾರ್ಯ ವೈಖರಿಯ ಬಗ್ಗೆ ಇಲ್ಲಿನ ಜನ ಬೇಸತ್ತಿದ್ದಾರೆ ಎಂದು ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹಾರಿಸ್ ಆರೋಪಿಸಿದ್ದಾರೆ.

ಮಡಿಕೇರಿಯ ಕಾಂಗ್ರೆಸ್, ಜೆಡಿಎಸ್ ಚುನಾವಣಾ ಮೈತ್ರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಾಧನೆ ಏನು ಮಾಡಿದ್ದೀರಿ ಎಂದು ಕೇಳಿದರೆ, ಪಾಸ್‍ಪೋರ್ಟ್ ಅಫೀಸ್ ಆರಂಭಿಸಿದ್ದೇನೆ ಎಂದು ಉತ್ತರಿಸುವ ಪ್ರತಾಪ್ ಸಿಂಹ ಅವರ ನಿಷ್ಕ್ರೀಯತೆಯ ಬಗ್ಗೆ ಕೊಡಗಿನ ಜನರಿಗೆ ಈಗಾಗಲೇ ಮನವರಿಕೆಯಾಗಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಕೊಡಗಿನ ಕಾಫಿ ಹಾಗೂ ಕಾಳುಮೆಣಸು ವಿಚಾರದಲ್ಲಿ ಕೊಡಗಿನ ಬೆಳೆಗಾರರಿಗೆ ಮೋದಿ ಸರ್ಕಾರದಿಂದ ಮೋಸವಾಗಿದೆ. ಜನಸಾಮಾನ್ಯರು ರೈತರು ಹಾಗೂ ಬೆಳೆಗಾರರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎನ್ನುವ ಸತ್ಯ ಬಯಲಾಗಿದೆ. ಮಳೆಯಿಂದ ಹಾನಿ ಸಂಭವಿಸಿದಾಗ ಕೇರಳಕ್ಕೆ ತೋರಿದ ಔದಾರ್ಯವನ್ನು ಕೊಡಗಿನ ಮೇಲೆ ತೋರಿಸುವಲ್ಲಿ ಪ್ರಧಾನಿ ಮೋದಿ ಅವರು ವಿಫಲರಾಗಿದ್ದಾರೆ.

ಬಿಜೆಪಿ ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿವೆ, ಹೇಳೋದು ಒಂದು, ಮಾಡೋದು ಮತ್ತೊಂದು ಎನ್ನುವ ಸ್ಥಿತಿಯಲ್ಲಿ ಮೋದಿ ಇದ್ದಾರೆ. ಈ ಬಾರಿಯ ಬಿಜೆಪಿ ಪ್ರಣಾಳಿಕೆ ಕೂಡ ಅದೇ ಮಾದರಿಯಲ್ಲಿ ಇದೆ ಎಂದು ಹಾರಿಸ್ ಆರೋಪಿಸಿದರು. 

ಬೆಲೆ ಏರಿಕೆಯನ್ನು ನಿಯಂತ್ರಿಸಲಾಗದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟೆಲ್ಲಾ ವೈಫಲ್ಯಗಳ ನಡುವೆಯೂ ನನ್ನ ಮುಖ ನೋಡ್ಬೇಡಿ, ಮೋದಿ ಮುಖ ನೋಡಿ ಓಟು ಹಾಕಿ ಎಂದು ಪ್ರತಾಪ್ ಸಿಂಹ ಮನವಿ ಮಾಡುತ್ತಿದ್ದಾರೆ. ಇದರಿಂದ ಮೈತ್ರಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎನ್ನುವುದು ಸಾಬೀತಾಗಿದೆ. 

ಯುವ ಸಮೂಹ 'ಮೋದಿ, ಮೋದಿ' ಎಂದು ಜಪ ಮಾಡುವುದು ಸರಿಯಲ್ಲ, ಯುವಕರ ಭವಿಷ್ಯ ಹಾಳು ಮಾಡಿದ್ದೇ ಮೋದಿ ಸರ್ಕಾರ ಎಂದು ಆರೋಪಿಸಿದ ಹಾರಿಸ್, ಈ ಬಗ್ಗೆ ಯುವ ಮತದಾರರು ಯೋಚಿಸಬೇಕಾಗಿದೆ ಎಂದರು.

ಕಳೆದ ಬಾರಿ ರಾಮ ಮಂದಿರ ನಿರ್ಮಾಣದ ಭರವಸೆ ಬಿಜೆಪಿ ಪ್ರಣಾಳಿಕೆಯಲ್ಲಿತ್ತು. ಈ ಬಾರಿಯೂ ಅದೇ ಮಂದಿರದ ಭರವಸೆ ಪ್ರಣಾಳಿಕೆಯಲ್ಲಿದೆ. ರಾಜಕೀಯಕ್ಕಾಗಿ ಬಿಜೆಪಿ ರಾಮಮಂದಿರದ ಹೆಸರು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. 

ಮೈತ್ರಿ ಕೂಟಕ್ಕೆ ಹೆದರಿರುವ ಬಿಜೆಪಿ ಏನು ಬೇಕಾದರು ಮಾಡಲು ಸಿದ್ಧವಿದೆ. ಪರೋಕ್ಷವಾಗಿ ಭದ್ರತಾ ಲೋಪಕ್ಕೆ ಮೋದಿ ಸರ್ಕಾರವೇ ನೇರ ಕಾರಣ, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದಲೇ ರಾಹುಲ್ ಗಾಂಧಿಗೆ ಎಸ್‍ಪಿಜಿ ಭದ್ರತೆ ಕಡಿಮೆ ಮಾಡಿರಲೂ ಬಹುದು. ಐಟಿ, ಈಡಿ ಎಲ್ಲವನ್ನೂ ನಿಯಂತ್ರಿಸುತ್ತಿರುವವರು ಇದನ್ನೂ ಯಾಕೆ ಮಾಡಿರಬಾರದು ಎಂದು ಹಾರಿಸ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X