Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ರಣಕಣದಲ್ಲಿ ಸ್ಪರ್ಧಿಗಳ ಮತ ಭೇಟೆ...

ಮಂಡ್ಯ ರಣಕಣದಲ್ಲಿ ಸ್ಪರ್ಧಿಗಳ ಮತ ಭೇಟೆ ಪೈಪೋಟಿ: ಉರಿ ಬಿಸಿಲಿಗಿಂತಲೂ ಪ್ರಚಾರ ಪ್ರಖರತೆ ಜೋರು

ವಾರ್ತಾಭಾರತಿವಾರ್ತಾಭಾರತಿ11 April 2019 11:10 PM IST
share
ಮಂಡ್ಯ ರಣಕಣದಲ್ಲಿ ಸ್ಪರ್ಧಿಗಳ ಮತ ಭೇಟೆ ಪೈಪೋಟಿ: ಉರಿ ಬಿಸಿಲಿಗಿಂತಲೂ ಪ್ರಚಾರ ಪ್ರಖರತೆ ಜೋರು

ಮಂಡ್ಯ, ಎ.11: ಚುನಾವಣಾ ರಣಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಉರಿ ಬಿಸಿಲಿಗಿಂತಲೂ ಪ್ರಚಾರ ಭರಾಟೆ ಪ್ರಖರತೆ ಪಡೆಯುತ್ತಿದೆ. ಪುತ್ರನ ಗೆಲುವಿಗೆ ಟೊಂಕ ಕಟ್ಟಿರುವ ಸಿಎಂ ಕುಮಾರಸ್ವಾಮಿ ಒಂದು ಕಡೆ, ಸ್ವಾಭಿಮಾನದ ಕಹಳೆ ಮೊಳಗಿಸಿರುವ ಸುಮಲತಾ ಅಂಬರೀಷ್ ಮತ್ತೊಂದು ಕಡೆ ಬಿಸಲು ಲೆಕ್ಕಿಸದೆ ಮತ ಭೇಟೆಯಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ತನ್ನ ಪುತ್ರನನ್ನೇ ಕಣಕ್ಕಿಳಿಸಿರುವ ಎಚ್.ಡಿ.ಕುಮಾರಸ್ವಾಮಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಎರಡು ದಿನದಿಂದ ಪುತ್ರ ನಿಖಿಲ್ ಗೆಲುವಿಗೆ ಉರಿ ಬಿಸಿಲು ಲೆಕ್ಕಿಸದೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ಮಾಡುತ್ತಿದ್ದಾರೆ.

ನಿನ್ನೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಕುಮಾರಸ್ವಾಮಿ, ಗುರುವಾರ ಮಳವಳ್ಳಿ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೈತ್ರಿ ಅಭ್ಯರ್ಥಿ ನಿಖಿಲ್ ಗೆಲ್ಲಿಸಿಕೊಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಪ್ರಚಾರದುದ್ದಕ್ಕೂ ತನ್ನ ಕುಟುಂಬ ಮಂಡ್ಯ ಜಿಲ್ಲೆಗೆ ಹಾಗೂ ರೈತರಿಗೆ ಮಾಡಿರುವ ಸಾಧನೆ, ಅಂತೆಯೇ ತನ್ನ ಪಕ್ಷಕ್ಕೆ ಜಿಲ್ಲೆಯ ಜನತೆ ತೋರಿರುವ ಪ್ರೀತಿಯನ್ನು ಪ್ರಶಂಸಿದ ಕುಮಾರಸ್ವಾಮಿ, ಎದುರಾಳಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧವೂ ವಾಗ್ದಾಳಿ ನಡೆಸಿದರು.

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಕೂಡ ಪ್ರಚಾರದಲ್ಲಿ ಪೈಪೋಟಿ ನೀಡಿದ್ದು, ಶ್ರೀರಂಗಪಟ್ಟಣ ಹಾಗೂ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಪಾರ ಬೆಂಬಲಿಗರ ಜತೆ ರೋಡ್ ಶೋ ನಡೆಸಿ ಮತಯಾಚಿಸಿದರು.

ಶ್ರೀರಂಗಪಟ್ಟಣ ಸಮೀಪದ ಗಂಜಾಂನಲ್ಲಿ ರೋಡ್ ಶೋ  ನಡೆಸಿದ ಸುುಮಲತಾ, ಹಿಂದಿಯಲ್ಲೇ ಮುಸ್ಲಿಂ ಬಾಂಧವರಲ್ಲಿ ಮತ ಕೇಳಿದರು. ಪಕ್ಷೇತರ ಅಭ್ಯರ್ಥಿಯಾದ ತನಗೆ ಬಿಜೆಪಿ ಬೆಂಬಲ ನೀಡಿದೆಯೇ ಹೊರತು ಬಿಜೆಪಿ ಅಭ್ಯರ್ಥಿಯಲ್ಲ ಎಂದೂ ಮತದಾರರಿಗೆ ಸ್ಪಷ್ಟನೆ ನೀಡಿದರು.

ಕೆ.ಆರ್.ಪೇಟೆ ವಿಧಾನಸಭೆಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ಮುಂದುವರಿಸಿದ ಸುಮಲತಾ ಅವರಿಗೆ ಹಲವು ಕಾಂಗ್ರೆಸ್ ಮುಖಂಡರೂ ಸಾಥ್ ನೀಡುವ ಮೂಲಕ ವರಿಷ್ಠರ ನೊಟೀಸ್‍ಗೆ ಶೆಡ್ಡು ಹೊಡೆದರು. ಹಲವು ಬಿಜೆಪಿ ಮುಖಂಡರೂ ಭಾಗವಹಿಸಿದ್ದರು.

ಮೈತ್ರಿ ಅಭ್ಯರ್ಥಿ ನಿಖಿಲ್ ಕೂಡ ಪ್ರತ್ಯೇಕವಾಗಿ ಮುಖಂಡರ ಜತೆ ಪ್ರಚಾರ ಮುಂದುವರಿಸಿದರು. ಮಂಡ್ಯ ವಿಧಾನಸಭಾ ಕ್ಷೇತ್ರದ ಹನಕೆರೆ, ಬೂದನೂರು, ಕೆರಗೋಡು ಜಿಪಂ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ ಅವರಿಗೆ ಸ್ಥಳೀಯ ಶಾಸಕ ಎಂ.ಶ್ರೀನಿವಾಸ್, ಕಾಂಗ್ರೆಸ್ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮುಖಂಡರು ಸಾಥ್ ಕೊಟ್ಟರು.

ಸುಮಲತಾ ಅಂಬರೀಷ್ ಪರವಾಗಿ ಅಬ್ಬರದ ಪ್ರಚಾರದ ಮೂಲಕ ಗಮನ ಸೆಳೆದಿರುವ ಚಿತ್ರನಟರಾದ ದರ್ಶನ್ ಮತ್ತು ಯಶ್ ಕೂಡ ಅಪಾರ ಅಭಿಮಾನಿಗಳ ಬೆಂಬಲದೊಂದಿಗೆ ಪ್ರಚಾರ ಕೈಗೊಂಡಿದ್ದು, ಚುನಾವಣಾ ಪ್ರಚಾರಕ್ಕೆ ರಂಗು ತಂದಿದ್ದಾರೆ.

ಬುಧವಾರ ಮದ್ದೂರು, ಕೆ.ಎಂ.ದೊಡ್ಡಿ, ಬೆಸಗರಹಳ್ಳಿ ಮುಂತಾದ ಕಡೆ ಬಿರುಸಿನ ಪ್ರಚಾರ ನಡೆಸಿದ ಯಶ್ ಗುರುವಾರ ಬ್ರೇಕ್ ತೆಗೆದುಕೊಂಡಿದ್ದರು. ನಿನ್ನೆ ಕೆ.ಆರ್.ನಗರದಲ್ಲಿ ಪ್ರಚಾರ ನಡೆಸಿದ ದರ್ಶನ್ ಗುರುವಾರ ಪಕ್ಕದ ಕೆ.ಆರ್.ಪೇಟೆಯಲ್ಲಿ ಪ್ರಚಾರ ಮುಂದುವರಿಸಿದರು.

ಅಮ್ಮನ ಗೆಲುವಿಗೆ ಅಖಾಡಕ್ಕಿಳಿದಿರುವ ಅಂಬರೀಷ್ ಪುತ್ರ ಅಭಿಷೇಕ್ ಕೂಡ ಬಿರುಸಿನ ಪ್ರಚಾರ ನಡೆಸಿ ತನ್ನ ತಾಯಿಗೂ ಒಂದು ಅವಕಾಶ ಕೊಡುವಂತೆ ಮನವಿ ಮಾಡುತ್ತಿದ್ದಾರೆ. ಗುರುವಾರ ಮಂಡ್ಯ ವಿಧಾನಸಭಾ ಕ್ಷೇತ್ರದ ಚಿಕ್ಕ ಮಂಡ್ಯ ಸೇರಿದಂತೆ ಹಲವು ಗ್ರಾಮದಲ್ಲಿ ಅಭಿಷೇಕ್ ಪ್ರಚಾರ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X