Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಬಾಂಡ್: 2 ವರ್ಷಗಳಲ್ಲಿ ಬಿಜೆಪಿ...

ಚುನಾವಣಾ ಬಾಂಡ್: 2 ವರ್ಷಗಳಲ್ಲಿ ಬಿಜೆಪಿ ಗಳಿಕೆ ಎಷ್ಟು ಕೋಟಿ ರೂ. ಗೊತ್ತಾ?

ಈ ಮೊತ್ತ ಕಾಂಗ್ರೆಸ್ ಗಳಿಕೆಗಿಂತ 5 ಪಟ್ಟು ಅಧಿಕ

ವಾರ್ತಾಭಾರತಿವಾರ್ತಾಭಾರತಿ12 April 2019 11:16 AM IST
share
ಚುನಾವಣಾ ಬಾಂಡ್: 2 ವರ್ಷಗಳಲ್ಲಿ ಬಿಜೆಪಿ ಗಳಿಕೆ ಎಷ್ಟು ಕೋಟಿ ರೂ. ಗೊತ್ತಾ?

ಹೊಸದಿಲ್ಲಿ, ಎ. 12: ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಕ್ರಮವಾಗಿ 997 ಕೋಟಿ ರೂ. ಹಾಗೂ 990 ಕೋಟಿ ರೂ. ದೇಣಿಗೆಯಾಗಿ ಸ್ವೀಕರಿಸಿದ್ದು, ಇದು ಕಾಂಗ್ರೆಸ್ ಪಕ್ಷ ಇದೇ ಅವಧಿಯಲ್ಲಿ ಪಡೆದ ದೇಣಿಗೆಯ ಐದು ಪಟ್ಟು ಅಧಿಕ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಚುನಾವಣಾ ಆಯೋಗದ ಪರವಾಗಿ ಹಾಜರಾದ ಹಿರಿಯ ವಕೀಯ ರಾಕೇಶ್ ದ್ವಿವೇದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತ ಸಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಈ ಮಾಹಿತಿ ನೀಡಿದರು. ಚುನಾವಣಾ ಬಾಂಡ್ ಮೂಲಕ ಅನಾಮಧೇಯ ಹೆಸರಿನಲ್ಲಿ ಸ್ವೀಕರಿಸುವ ಬಾಂಡ್ ವಿಚಾರದಲ್ಲಿ ಹೆಚ್ಚು ಪಾರದರ್ಶಕತೆ ತರುವಂತೆ ಸೂಚಿಸಬೇಕು ಎಂದು ಕೋರಿ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಾಹಿತಿ ನೀಡಿದರು. ಪ್ರಸ್ತುತ ಇರುವ ವ್ಯವಸ್ಥೆಯು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವಂಥದ್ದು ಮತ್ತು ಕಪ್ಪು ಹಣ ಹುಟ್ಟುಹಾಕುವಂಥದ್ದು ಎಂದು ಎಡಿಆರ್ ಆಪಾದಿಸಿದೆ.

ಅರ್ಜಿದಾರರ ಪರವಾಗಿ ವಾದಿಸಿದ ಪ್ರಶಾಂತ್ ಭೂಷಣ್, ಅನಾಮಧೇಯ ದೇಣಿಗೆಯ ಪೈಕಿ ಶೇಕಡ 95ರಷ್ಟು ಆಡಳಿತಾರೂಢ ಬಿಜೆಪಿಗೆ ಬಂದಿದೆ ಎಂದು ದೂರಿದರು. 2017-18ರಲ್ಲಿ ಬಿಜೆಪಿಗೆ 222 ಕೋಟಿ ರೂ. ಮೌಲ್ಯದ 520 ಬಾಂಡ್‌ಗಳು ಬಂದಿವೆ ಎಂದು ಮಾಹಿತಿ ನೀಡಲಾಯಿತು. ಬಿಜೆಪಿ 200 ಕೋಟಿ ರೂ.ಗಳನ್ನು ಅನಾಮಧೇಯ ಚುನಾವಣಾ ಬಾಂಡ್ ಮೂಲಕ ಪಡೆದಿದ್ದು, ಉಳಿದ ಪಕ್ಷಗಳು ಕೇವಲ 11 ಕೋಟಿ ರೂಪಾಯಿಯನ್ನು ಮಾತ್ರ ಪಡೆದಿವೆ. ಆದ್ದರಿಂದ ಬಿಜೆಪಿ ಶೇಕಡ 94ರಷ್ಟು ಆದಾಯವನ್ನು ಇಂಥ ಬಾಂಡ್ ಮೂಲಕ ಪಡೆದಿರುವುದು ನಿಜ ಎಂದು ಚುನಾವಣಾ ಆಯೋಗದ ವಕೀಲ ದ್ವಿವೇದಿ ಮಾಹಿತಿ ನೀಡಿದರು.

ಬಿಜೆಪಿ 2016-17ರಲ್ಲಿ 997 ಕೋಟಿ ರೂ. ದೇಣಿಗೆ ಸ್ವೀಕರಿಸಿದ್ದು, ಚುನಾವಣಾ ಆಯೋಗದ ಬಳಿ 529 ಕೋಟಿಯನ್ನು ಘೋಷಿಸಿಕೊಂಡಿದೆ. 468 ಕೋಟಿ ರೂ. ನಗದು ದೇಣಿಗೆ ಸ್ವೀಕರಿಸಿದ್ದು, ಇವೆಲ್ಲ 20 ಸಾವಿರಕ್ಕಿಂತ ಕಡಿಮೆ ಮೌಲ್ಯದ್ದು ಎಂದು ಪಕ್ಷ ಹೇಳಿದ್ದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ 180 ಕೋಟಿ ರೂ. ದೇಣಿಗೆ ಸಂಗ್ರಹಿಸಿದ್ದು, 138 ಕೋಟಿ ರೂ. ಅನಾಮಧೇಯರಿಂದ ಸಣ್ಣ ದೇಣಿಗೆಗಳ ಮೂಲಕ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X