Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂಗಳ ಅವಾಂತರ: ಆಂಧ್ರದಲ್ಲಿ...

ಇವಿಎಂಗಳ ಅವಾಂತರ: ಆಂಧ್ರದಲ್ಲಿ ತಡರಾತ್ರಿಯವರೆಗೂ ನಡೆದ ಮತದಾನ

ಕಾದು ಸುಸ್ತಾಗಿ ಮನೆಗೆ ತೆರಳಿದ ಜನರು

ವಾರ್ತಾಭಾರತಿವಾರ್ತಾಭಾರತಿ12 April 2019 8:33 PM IST
share
ಇವಿಎಂಗಳ ಅವಾಂತರ: ಆಂಧ್ರದಲ್ಲಿ ತಡರಾತ್ರಿಯವರೆಗೂ ನಡೆದ ಮತದಾನ

ಅಮರಾವತಿ,ಎ.12: ದೋಷಪೂರಿತ ವಿದ್ಯುನ್ಮಾನ ಮತದಾನ ಯಂತ್ರ(ಇವಿಎಂ)ಗಳ ಅವಾಂತರಗಳಿಂದಾಗಿ ಗುರುವಾರ ಆಂಧ್ರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿಯ 300ಕ್ಕೂ ಅಧಿಕ ಮತಗಟ್ಟೆಗಳಲ್ಲಿ ತಡರಾತ್ರಿಯವರೆಗೂ ಮತದಾನ ಮುಂದುವರಿದಿತ್ತು.

ಮತದಾನದ ನಿಗದಿತ ಅವಧಿ ಸಂಜೆ ಆರು ಗಂಟೆಗೇ ಅಂತ್ಯಗೊಂಡಿದ್ದರೂ,ಮತಗಟ್ಟೆಗಳ ಹೊರಗೆ ಸರದಿ ಸಾಲುಗಳಲ್ಲಿ ಕಾದು ನಿಂತಿದ್ದ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಲಾಗಿತ್ತು.

ಗುರುವಾರ ಸಂಜೆ ಆರು ಗಂಟೆಯವರೆಗೆ ರಾಜ್ಯದ 175 ವಿಧಾನಸಭಾ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳಲ್ಲಿ ಶೇ.74ಕ್ಕೂ ಅಧಿಕ ಮತದಾನ ನಡೆದಿತ್ತು.

380ಕ್ಕೂ ಅಧಿಕ ಮತಗಟ್ಟೆಗಳಲ್ಲಿ ಇವಿಎಮ್‌ಗಳಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದರಿಂದ ಕಾದು ಕಾದು ಸುಸ್ತಾಗಿದ್ದ ಹಲವಾರು ಮತದಾರರು ತಮ್ಮ ಮನೆಗಳಿಗೆ ವಾಪಸಾಗಿದ್ದರು. ಅಧಿಕಾರಿಗಳು ದೋಷಗಳನ್ನು ನಿವಾರಿಸಿದ ಮತ್ತು ಕೆಲವು ಇವಿಎಂಗಳನ್ನು ಬದಲಿಸಿದ ಬಳಿಕ ಮತದಾನ ಪ್ರಕ್ರಿಯೆ ಪುನರಾರಂಭಗೊಂಡಿತ್ತು. ಸಂಜೆ ಆರು ಗಂಟೆಗೆ ಮೊದಲು ಮತಗಟ್ಟೆಗಳನ್ನು ತಲುಪಿದ್ದ ಎಲ್ಲ ಮತದಾರರಿಗೂ ತಡರಾತ್ರಿಯವರೆಗೆ ಮತದಾನಕ್ಕೆ ಅವಕಾಶವನ್ನು ನೀಡಲಾಗಿತ್ತು.

ಮಂಗಳಗಿರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ ಅವರು ಇವಿಎಂ ಮತ್ತು ವಿವಿಪ್ಯಾಟ್‌ಗಳ ವೈಫಲ್ಯದಿಂದಾಗಿ ಗಂಟೆಗಟ್ಟಲೆ ಸರದಿ ಸಾಲುಗಳಲ್ಲಿ ಕಾದು ನಿಂತಿದ್ದ ಮತದಾರರಿಗೆ ಕುಡಿಯುವ ನೀರಿನಂತಹ ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿ ತಡರಾತ್ರಿ ತಾಡಪಲ್ಲಿ ಪಟ್ಟಣದ ಮತಗಟ್ಟೆಯೊಂದರ ಎದುರು ಪ್ರತಿಭಟನೆಯನ್ನು ನಡೆಸಿದರು.

ಈ ವೇಳೆ ಅಲ್ಲಿದ್ದ ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಅಣಕಿಸಿದ್ದಲ್ಲದೆ, ವಾಪಸ್ ಹೋಗುವಂತೆ ಮತ್ತು ಮತದಾನ ಪ್ರಕ್ರಿಯೆಗೆ ಅಡ್ಡಿಯನ್ನು ಮಾಡದಂತೆ ಘೋಷಣೆಗಳನ್ನು ಕೂಗಿದರು. ಇದಕ್ಕೆ ಸಡ್ಡು ಹೊಡೆಯಲು ಟಿಡಿಪಿ ಕಾರ್ಯಕರ್ತರು ಪ್ರಯತ್ನಿಸಿದಾಗ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು. ಸಕಾಲಕ್ಕೆ ಧಾವಿಸಿದ ಪೊಲೀಸರು ಉಭಯ ಗುಂಪುಗಳನ್ನು ಚದುರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X