Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮೋದಿಯಿಂದಾಗಿ ಗೇರುಬೀಜ ಕಾರ್ಖಾನೆಗಳು...

'ಮೋದಿಯಿಂದಾಗಿ ಗೇರುಬೀಜ ಕಾರ್ಖಾನೆಗಳು ಸಂಕಷ್ಟದಲ್ಲಿ'

ಹೆಬ್ರಿ ಗೇರುಬೀಜ ಕಾರ್ಖಾನೆಗಳಲ್ಲಿ ಪ್ರಮೋದ್ ಮತ ಯಾಚನೆ

ವಾರ್ತಾಭಾರತಿವಾರ್ತಾಭಾರತಿ12 April 2019 8:35 PM IST
share
ಮೋದಿಯಿಂದಾಗಿ ಗೇರುಬೀಜ ಕಾರ್ಖಾನೆಗಳು ಸಂಕಷ್ಟದಲ್ಲಿ

ಹೆಬ್ರಿ, ಎ.12: ಮನಮೋಹನ ಸಿಂಗ್ ಸರಕಾರದ ಅವಧಿಯಲ್ಲಿ ಕಾರ್ಮಿಕ ಮಹಿಳೆಯರ ಕೈಯಲ್ಲಿ ಹಣ ಇತ್ತು. ನೆಮ್ಮದಿ ಇತ್ತು, ನಂತರ ಬಂದ ನರೇಂದ್ರ ಮೋದಿ ಸರಕಾರದಿಂದಾಗಿ ಇಂದು ಮಹಿಳೆಯರು ಕಣ್ಣೀರು ಹಾಕುವ ದಿನಗಳು ಬಂದಿವೆ. ನೋಟು ಅಮಾನ್ಯೀಕರಣ ಹಾಗೂ ವಿಪರೀತ ಜಿಎಸ್‌ಟಿ ತೆರಿಗೆಯ ಹೇರಿಕೆಯಿಂದಾಗಿ ನಮ್ಮ ಜಿಲ್ಲೆಯ ಬಹುತೇಕ ಗೇರುಬೀಜ ಕಾರ್ಖಾನೆಗಳು ಮುಳುಗುವ ಹಂತಕ್ಕೆ ತಲುಪಿದ್ದು, ಮಾಲಕರು ಕಾರ್ಮಿಕರಿಗೆ ಕೆಲಸ ಕೊಡುವ ಸ್ಥಿತಿಯಲ್ಲಿ ಇಲ್ಲ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಶುಕ್ರವಾರ ಹೆಬ್ರಿ ತಾಲೂಕು ವ್ಯಾಪ್ತಿಯ ವಿವಿಧ ಗೇರುಬೀಜದ ಕಾರ್ಖಾನೆಗೆ ತೆರಳಿ ಮತಯಾಚನೆ ನಡೆಸಿ ಪ್ರಮೋದ್ ಮಧ್ವರಾಜ್ ಮಾತನಾಡುತಿದ್ದರು. ಬಿಜೆಪಿಯವರು ನಿಮ್ಮಲ್ಲಿ ಬಂದು ಮೋದಿಗೆ ಓಟು ಕೊಡಿ ಎಂದು ಕೇಳುತ್ತಾರೆ. ಮೋದಿ ಓಟಿಗೆ ನಿಂತಿರುವುದು ದೂರದ ವಾರಣಾಸಿಯಲ್ಲಿ, ನಿಮ್ಮ ಸಮಸ್ಯೆ ಯನ್ನು, ನಿಮ್ಮ ಕೆಲಸವನ್ನು ಮೋದಿಯಲ್ಲಿ ಹೇಳಲು ಆಗಲ್ಲ ಗ್ರಾಪಂ ಸದಸ್ಯನಂತೆ ನಿಮ್ಮ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಡಿ ಎಂದು ಪ್ರಮೋದ್ ಮನವಿ ಮಾಡಿದರು.

ಮೋದಿಯಿಂದಾಗಿ ಇಂದು ದೇಶದ ಬಹುತೇಕ ಕಂಪೆನಿಗಳು ಮುಚ್ಚುವ ಹಂತ ತಲುಪಿವೆ. ಕಾರ್ಮಿಕರನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಮೋದಿಗೆ ಜನಸಾಮಾನ್ಯರು ಬೇಡ. ಅವರಿಗೆ ಕೇವಲ ಅಂಬಾನಿ-ಅದಾನಿಗಳು ಮಾತ್ರ ಸಾಕು. ಮೋದಿ ಪ್ರದಾನಿಯಾಗುವ ಮೊದಲು ಅಂಬಾನಿ ಆಸ್ತಿ ಮೌಲ್ಯ 16 ಲಕ್ಷ ಕೋಟಿ ಇತ್ತು. ಈಗ 31 ಲಕ್ಷ ಕೋಟಿ ಆಗಿದೆ. ನಮ್ಮ ಹಣವನ್ನು ಮೋದಿ ಪರೋಕ್ಷವಾಗಿ ಅವರಿಬ್ಬರಿಗೆ ವರ್ಗಾಯಿಸಿದ್ದಾರೆ ಎಂದು ಪ್ರಮೋದ್ ಮಧ್ವರಾಜ್ ಆರೋಪಿಸಿದರು.

ಯುಪಿಎ ಸರಕಾರದ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್‌ಗೆ 350 ರೂ. ಇತ್ತು. ಇಂದು ಅದು 900 ರೂ. ಆಗಿದೆ. ಅದೇ ರೀತಿ ಮರಳು ಸಮಸ್ಯೆ ಹೆಚ್ಚಾಗಲು ಕೇಂದ್ರ ಸರಕಾರ ಕಾರಣ. ನಾನು ಆಯ್ಕೆಯಾದರೆ ಕೇಂದ್ರ ಸರಕಾರದಲ್ಲಿ ಜಿಲ್ಲೆಯ ಮರಳು ಜಿಲ್ಲೆಯ ಜನತೆಗೆ ಸಿಗಲು ಹೊಸ ಕಾನೂನು ಮಾಡಿ ಎಲ್ಲರಿಗೂ ಸುಲಭದಲ್ಲಿ ಮರಳು ಸಿಗುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಶಿವಪುರ, ಕನ್ಯಾನ, ಚಾರ, ಹೆಬ್ರಿ, ಕಾರ್ಕಳ ರೈತಸೇವಾ ಗ್ರಾಮೋದ್ಯೋಗ ಲಕ್ಷ್ಮಿನಾರಾಯಣ ಕಾರ್ಖಾನೆ ಸೇರಿದಂತೆ ವಿವಿದೆಡೆಗಳ ಗೇರು ಬೀಜದ ಕಂಪೆನಿಗಳಿಗೆ ಭೇಟಿ ನೀಡಿ ಪ್ರಮೋದ್ ವುಧ್ವರಾಜ್ ಮತಯಾಚನೆ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಗೋಪಾಲ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಂಗ್ರೆಸ್ ನಾಯಕ ನೀರೆ ಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ ಶೆಟ್ಟಿ, ಹೆಬ್ರಿ ಎಚ್.ಜನಾರ್ಧನ್, ಆರೀಫ್ ಕಲ್ಲೋಟ್ಟೆ, ಎಚ್.ನರೇಂದ್ರ ನಾಯಕ್, ಜೆಡಿಎಸ್ ಕಾರ್ಯಧ್ಯಕ್ಷ ಶ್ರೀಕಾಂತ್ ಪೂಜಾರಿ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X