Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಹತ್ಯೆಯ ಆರೋಪದಲ್ಲಿ ಹತ್ಯೆ: ತನಿಖೆಯ...

ಗೋಹತ್ಯೆಯ ಆರೋಪದಲ್ಲಿ ಹತ್ಯೆ: ತನಿಖೆಯ ದಾರಿ ತಪ್ಪಿಸಲು ಪೊಲೀಸರಿಂದ ಯತ್ನ - ಆರೋಪ

ವಾರ್ತಾಭಾರತಿವಾರ್ತಾಭಾರತಿ13 April 2019 11:21 PM IST
share
ಗೋಹತ್ಯೆಯ ಆರೋಪದಲ್ಲಿ ಹತ್ಯೆ: ತನಿಖೆಯ ದಾರಿ ತಪ್ಪಿಸಲು ಪೊಲೀಸರಿಂದ ಯತ್ನ - ಆರೋಪ

ಜಾರ್ಖಂಡ್,ಎ.14: ಗೋಹತ್ಯೆ ಆರೋಪದಲ್ಲಿ ಓರ್ವನನ್ನು ಕೊಂದು, ಮೂವರನ್ನು ಗಂಭೀರವಾಗಿ ಗಾಯಗೊಳಿಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಕೆಲವನ್ನು ಬಂಧಿಸಲಾಗಿದೆಯೆಂದು, ಆದರೆ ರಾಮನವಮಿಯಾದ ಕಾರಣ ಬಂಧಿತರ ಹೆಸರನ್ನು ಪ್ರಕಟಿಸಲಾಗುವುದಿಲ್ಲವೆಂದು ಸ್ಥಳೀಯ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಓ) ಯೂನಿಕಾ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಮಾರಕಾಯುಧಗಳಿಂದ ಥಳಿಸಲ್ಪಟ್ಟಿರುವುದರಿಂದ ಮೂವರು ಗಾಯಾಳುಗಳ ಭುಜ ಹಾಗೂ ಹೆಗಲಮೂಳೆಗೆ ಗಂಭೀರವಾದ ಪೆಟ್ಟಾಗಿದೆಯೆಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯ ವಿಧಿವಿಧಾನವನ್ನು ಉಲ್ಲಂಘಿಸುವಂತೆ ಪೊಲೀಸರು ತನ್ನ ಮೇಲೆ ಒತ್ತಡ ಹೇರಿದ್ದರೆಂದು ಆರೋಗ್ಯಕೇಂದ್ರದ ವೈದ್ಯ ಡಾ.ರೋಶನ್ ಖಾಲ್ಕೊ ಆಪಾದಿಸಿದ್ದಾರೆ.

ನಿಯಮಾವಳಿಗಳ ಪ್ರಕಾರ ವ್ಯಕ್ತಿಯನ್ನು ಮೃತಪಟ್ಟ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದರೆ,ಮೊದಲು ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕಾಗಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಮೃತನ ಹೆಸರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ನೋಂದಣಿ ಪಟ್ಟಿಯಲ್ಲಿ ದಾಖಲಿಸುವಂತೆ ಪೊಲೀಸರು ತನ್ನ ಮೇಲೆ ಒತ್ತಡ ಹೇರಿದ್ದರೆಂದು ಡಾ. ರೋಶನ್ ಆಪಾದಿಸಿದ್ದಾರೆ.

ಗೋಹತ್ಯೆಯ ಶಂಕೆಯಲ್ಲಿ ಉದ್ರಿಕ್ತ ಜನರ ಗುಂಪೊಂದು 35 ಮಂದಿ ಬುಡಕಟ್ಟು ಜನರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ, ಓರ್ವನನ್ನು ಹತ್ಯೆಗೈದು, ಇತರ ಮೂವರನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ವರದಿಯಾಗಿತ್ತು.

  ಜುರ್ಮೊ ಗ್ರಾಮದಲ್ಲಿ, ಬುಧವಾರ ಕುಜು ಎಂಬವರ 20 ವರ್ಷಗಳ ಮುದಿ ಎತ್ತು, ಅವರ ಗದ್ದೆಯಲ್ಲಿ ಸಾವನ್ನಪ್ಪಿತ್ತು. ಎತ್ತಿನ ಕಳೇಬರದ ಚರ್ಮವನ್ನು ಸುಲಿಯಲು 30 ಮಂದಿ ಗ್ರಾಮಸ್ಥರ ತಂಡವೊಂದು ಅವರ ಹೊಲಕ್ಕೆ ಆಗಮಿಸಿತ್ತು. ಕೆಲವೇ ನಿಮಿಷಗಳ ಬಳಿಕ ಸಲಾಕೆಗಳು ಹಾಗೂ ದೊಣ್ಣೆಗಳಿಂದ ಸಜ್ಜಿತವಾಗಿದ್ದ ಗುಂಪೊಂದು ಅಲ್ಲಿ ಧಾವಿಸಿ ಬಂದು, ಗೋಹತ್ಯೆಮಾಡಿದ್ದೀರೆಂದು ಆರೋಪಿಸಿ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿತು. ಆಗ ಅಲ್ಲಿದವರಲ್ಲಿ ಹೆಚ್ಚಿನವರು ಸ್ಥಳದಿಂದ ಪರಾರಿಯಾದರು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರನ್ನು ಹಲ್ಲೆನಡೆಸಿದ ತಂಡವೇ ಪೊಲೀಸ್ ಠಾಣೆಗೆ ಕೊಂಡೊಯ್ದಿತ್ತು. ನಾಲ್ವರು ಗಾಯಾಳುಗಳನ್ನು ಪೊಲೀಸರು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕೊಂಡೊಯ್ದರು. ಗಾಯಾಳುಗಳ ಪೈಕಿ ಪ್ರಕಾಶ್ ಲಾಕ್ರಾ ಎಂಬವರು ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ಘೋಷಿಸಿದರು.

ಘಟನೆಯಲ್ಲಿ ಗಾಯಗೊಂಡ ಇತರ ಮೂವರನ್ನು ಪೀಟರ್ ಫುಲಿಜನ್ಸ್ (50), ಬೆಲಾಸುಸ್ ತಿರ್ಕೆ(60) ಹಾಗೂ ಜಾನ್‌ರಿಯುಶ್ ಮಿಂಝ್ (40) ಎಂದು ಗುರುತಿಸಲಾಗಿದೆ.

ಹಲ್ಲೆಗೊಳಗಾದವರೆಲ್ಲರೂ ಬುಡಕಟ್ಟು ಕ್ರೈಸ್ತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. .ಘಟನೆ ನಡೆದ ಎರಡು ದಿನಗಳ ಬಳಿಕ ಪೊಲೀಸರು, ಮೂವರು ಗಾಯಾಳುಗಋ ವಿರುದ್ಧ ಜಾನುವಾರು ಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಹಾಗೂ ಪ್ರಕಾಶ್ ಲಾಕ್ರಾ ಹತ್ಯೆಗೆ ಸಂಬಂಧಿಸಿ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X