Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವರ್ತಮಾನವನ್ನು ಕಡೆಯುವ ಕಡಗೋಲು...

ವರ್ತಮಾನವನ್ನು ಕಡೆಯುವ ಕಡಗೋಲು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ15 April 2019 12:01 AM IST
share
ವರ್ತಮಾನವನ್ನು ಕಡೆಯುವ ಕಡಗೋಲು...

ಡಾ. ಎಂ. ಎಸ್. ಮಣಿ ಅವರ ‘ಕಡಗೋಲು’ ಪತ್ರಿಕೋದ್ಯಮದ ಕರ್ತವ್ಯದ ಭಾಗಗಳಾಗಿ ಬರೆದ ಲೇಖನಗಳ ಸಂಗ್ರಹ. ಸತ್ಯ ಕಥೆಗಳ ಮಂಥನ ಎಂದು ಲೇಖಕರು ಈ ಕೃತಿಯನ್ನು ಸ್ವತಃ ಕರೆದುಕೊಂಡಿದ್ದಾರೆ. ಇಲ್ಲಿರುವ ಹಲವು ಲೇಖನಗಳು ಇಂದು ನಮ್ಮ ದೇಶ ಎದುರಿಸುತ್ತಿರುವ ಹಲವಾರು ಸಮಸ್ಯೆ, ಸಂಕಷ್ಟಗಳ ನಿಜರೂಪ ದರ್ಶನ ಮಾಡಿಸುತ್ತದೆ. ಅದು ಮೋದಿಯವರ ನೋಟು ನಿಷೇಧದಿಂದ ಜನತೆ ಅನುಭವಿಸಿದ ಯಾತನೆ, ಧರ್ಮಗುರುಗಳ ಧಾರ್ಮಿಕ ಭ್ರಷ್ಟತೆ, ಅವರು ನಡೆಸಿದರೆನ್ನಲಾದ ಅನಾಚಾರಗಳ ಅನಾವರಣ ಸೇರಿದಂತೆ ರಾಜಕೀಯ, ಸಾಮಾಜಿಕ ವಿಷಯಗಳ ಚರ್ಚೆ ಇಲ್ಲಿ ನಡೆದಿದೆ.
25ಕ್ಕೂ ಅಧಿಕ ಲೇಖನಗಳನ್ನು ಈ ಕೃತಿ ಹೊಂದಿದೆ. ಅಹಿಂದ ಚಳವಳಿಯ ಕುರಿತಂತೆ ಇರುವ ನಿರೀಕ್ಷೆ, ಭಾರತವನ್ನು ಕಾಡುತ್ತಿರುವ ಧಾರ್ಮಿಕ ಭ್ರಷ್ಟತೆ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಅಂಬೇಡ್ಕರ್ ಆಶಯ, ಮೋದಿ-ಸೂಕಿಯ ಗೋಸುಂಬೆ ಸಿದ್ಧಾಂತ, ಸಂವಿಧಾನ ವಿರೋಧಿಗಳ ಸಂಚಿನ ಒಳನೋಟ, ರಾಣಿ ಪದ್ಮಾವತಿ ಸಿನೆಮಾದ ಹೆಸರಿನಲ್ಲಿ ಬಹಿರಂಗಗೊಂಡ ಧಾರ್ಮಿಕ ಅಸಹನೀಯತೆ, ನೋಟು ನಿಷೇಧದಿಂದ ಬಡವರು ಎದುರಿಸಿದ ಸಂಕಷ್ಟ, ರಫೇಲ್ ಡೀಲ್ ಹೇಗೆ ದೇಶದ ರಕ್ಷಣಾ ಹಿತಾಸಕ್ತಿಯನ್ನು ಬಲಿಕೊಟ್ಟಿತು ಎನ್ನುವ ಕುರಿತ ಮಾಹಿತಿ, ಅಹಿಂದವರ್ಗಗಳ ಆತ್ಮಾವಲೋಕನದ ಅನಿವಾರ್ಯ, ಭೀಮಾ ಕೋರೆಗಾಂವ್ ಹಿನ್ನೆಲೆಯಲ್ಲಿ ದಲಿತ ಹೋರಾಟಗಳ ಕುರಿತಂತೆ ವಿಶ್ಲೇಷಣೆ....ಹೀಗೆ ದೇಶವನ್ನು ಸದ್ಯಕ್ಕೆ ಕಾಡುತ್ತಿರುವ ಬಲಪಂಥೀಯ, ಮನುವಾದಿ ರಾಜಕಾರಣದ ವಿರುದ್ಧ ಅತ್ಯಂತ ಸ್ಪಷ್ಟ ಧ್ವನಿಯಲ್ಲಿ ಈ ಕೃತಿ ಮಾತನಾಡುತ್ತದೆ. ತನ್ನ ದೈನಂದಿನ ಬದುಕಿನ ಅನುಭವಗಳನ್ನಿಟ್ಟುಕೊಂಡು ಕಥನ ರೂಪದಲ್ಲಿ ಬರೆಯುತ್ತಾ ಹೋಗುವ ಲೇಖಕರ ತಂತ್ರವೂ ಓದಿಸಿಕೊಂಡು ಹೋಗುವಲ್ಲಿ ಪೂರಕವಾಗಿ ಕೆಲಸ ಮಾಡುತ್ತದೆ. ಕಡಗೋಲನ್ನು ಲೇಖಕರು ಇಲ್ಲಿ ರೂಪಕವಾಗಿ ಬಳಸಿಕೊಂಡಿದ್ದಾರೆ. ದಲಿತ ಅಸ್ಮಿತೆಯ ತಳಹದಿಯಲ್ಲಿ ಲೇಖನ ತನ್ನ ಜೀವವನ್ನು ಹಿಡಿದುಕೊಂಡಿದೆ.
ಕೆ.ವಿ. ಪ್ರಭಾಕರ ಪ್ರಕಾಶನ ಹೊರತಂದಿರುವ ಕೃತಿಯ ಒಟ್ಟು ಪುಟಗಳು 184. ಮುಖಬೆಲೆ 200 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X