Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆಯದು...

ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆಯದು ಎಂಬ ಇಮ್ರಾನ್ ಖಾನ್ ಹೇಳಿಕೆಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ17 April 2019 1:56 PM IST
share
ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆಯದು ಎಂಬ ಇಮ್ರಾನ್ ಖಾನ್ ಹೇಳಿಕೆಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ಹೊಸದಿಲ್ಲಿ, ಎ.17: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ಭಾರತದ ಜತೆ ಮಾತುಕತೆಗಳಿಗೆ ಉತ್ತಮ ಅವಕಾಶವಿರಲಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇತ್ತೀಚೆಗೆ ಹೇಳಿರುವುದು ಕಾಂಗ್ರೆಸ್ ಸಂಚಿನ ಭಾಗವಾಗಿರಬಹುದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.

“ಇಂತಹ ಹೇಳಿಕೆಗಳು ಭಾರತದಲ್ಲಿ ಚುನಾವಣೆಯ ಅಸುಪಾಸಿನಲ್ಲಿಯೇ ಬರುತ್ತವೆ. ಪ್ರಧಾನಿ ನರೇಂದ್ರ ಮೋದಿಯನ್ನು  ಕೆಳಗಿಳಿಸಲು ಸಹಾಯ ಕೋರಿಕೊಂಡು ಕೆಲ ಪ್ರಮುಖ ಕಾಂಗ್ರೆಸ್ ನಾಯಕರೇ ಅಲ್ಲಿಗೆ ಹೋಗಿದ್ದಾರೆ'' ಎಂದು ಸುದ್ದಿ ಸಂಸ್ಥೆ ಎಎನ್‍ಐಗೆ ನೀಡಿರುವ ಸಂದರ್ಶನದಲ್ಲಿ ಸಚಿವೆ ಆರೋಪಿಸಿದ್ದಾರೆ.

“ಇದು ಕಾಂಗ್ರೆಸ್ ಸಂಚಿನ ಭಾಗವಾಗಿರಬಹುದು ಎಂದು ನಾನು ಯೋಚಿಸುತ್ತಿದ್ದೇನೆ. ಇದರ ಬಗ್ಗೆ ನಿಜವಾಗಿ ಏನು ಹೇಳಬೇಕೆಂಬುದೇ ತೋಚುತ್ತಿಲ್ಲ'' ಎಂದು ಅವರು ಹೇಳಿದರು.

ನಿಂದನಾತ್ಮಕ ಹೇಳಿಕೆಗಳನ್ನು ನೀಡುವುದಕ್ಕಿಂತ ಮೊದಲು ಚೆನ್ನಾಗಿ ಯೋಚಿಸಬೇಕು ಎಂದು ರಾಜಕಾರಣಿಗಳಿಗೆ ಸಲಹೆ ನೀಡಿದ ಸಚಿವೆ ರಾಜಕೀಯ ಟೀಕೆಗಳ ವಿಚಾರದಲ್ಲಿ ಗೆರೆ ಎಳೆಯುವ ಅಗತ್ಯವಿದೆಯೆಂದು ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರು ಬಿಜೆಪಿ ಅಭ್ಯರ್ಥಿ ಜಯಪ್ರದಾ ಬಗ್ಗೆ ನೀಡಿರುವ ನಿಂದನಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

``ಇತರ ವಿಚಾರಗಳ ಬಗ್ಗೆ ಮಾತನಾಡುವಾಗ ಮಹಿಳೆಯರನ್ನು ಟಾರ್ಗೆಟ್ ಮಾಡುವುದು ಸುಲಭವಾಗಿದೆ'' ಎಂದು ಖೇದ ವ್ಯಕ್ತಪಡಿಸಿದ ಸಚಿವೆ ತಮ್ಮ ಸಲಹೆ ಎಲ್ಲಾ ಪಕ್ಷದ ನಾಯಕರಿಗೂ  ಅನ್ವಯಿಸುತ್ತದೆ ಎಂದರು.

`ಕಳ್ಳತನ'ವಾಗಿದೆಯೆಂದು ಹೇಳಲಾದ ರಫೇಲ್ ದಾಖಲೆಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಕೈಗೊಂಡಿರುವ ನಿರ್ಧಾರದಿಂದ ಕೇಂದ್ರ ಸರಕಾರಕ್ಕೆ ಹಿನ್ನಡೆಯಾಗಿದೆಯೇ ಎಂಬ ಪ್ರಶ್ನೆಗೆ ನಕಾರಾತ್ಮಕವಾಗಿ ಉತ್ತರಿಸಿದ ಸಚಿವೆ, ಈ ವಿಚಾರದಲ್ಲಿ ನಮ್ಮ ನಿಲುವು ಅಚಲವಾಗಿದೆ. ಗೌಪ್ಯ ದಾಖಲೆಗಳು ಬಹಿರಂಗಗೊಂಡಾಗ ಅವುಗಳನ್ನು ಕಳ್ಳತನಗೈದಂತೆ, ಈ ದಾಖಲೆಗಳು ಹೇಗೆ ಸೋರಿಕೆಯಾಗಿವೆ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಸಚಿವೆ ತಿಳಿಸಿದರು.

ಫೆಬ್ರವರಿ 26ರ ವಾಯುದಾಳಿಯ ಸಂದರ್ಭ ಭಾರತ ಗುರಿಯಾಗಿಸಿಲ್ಲದ ಮದರಸಾಗೆ ಪಾಕಿಸ್ತಾನವು ಪತ್ರಕರ್ತರನ್ನು ಕರೆದುಕೊಂಡು ಹೋಗಿ ತನ್ನನ್ನು ತಾನೇ ಅಪಹಾಸ್ಯಗೈದಿದೆ ಎಂದು ಸಚಿವೆ ಹೇಳಿದರು. “ದಾಳಿ ನಡೆದಿಲ್ಲ ಹಾಗೂ ಹಲವು ಮಂದಿ ಸತ್ತಿಲ್ಲ ಎಂಬುದನ್ನು ಸಾಬೀತುಪಡಿಸುವುದು ಪಾಕಿಸ್ತಾನಕ್ಕೆ ಬಿಟ್ಟಿದ್ದು'' ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X