Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯಾ: ಸ್ನೇಹಿತನನ್ನು ಕೊಂದ...

ಸೌದಿ ಅರೇಬಿಯಾ: ಸ್ನೇಹಿತನನ್ನು ಕೊಂದ ಇಬ್ಬರು ಭಾರತೀಯರ ಶಿರಚ್ಛೇದನ

ವಾರ್ತಾಭಾರತಿವಾರ್ತಾಭಾರತಿ17 April 2019 4:44 PM IST
share
ಸೌದಿ ಅರೇಬಿಯಾ: ಸ್ನೇಹಿತನನ್ನು ಕೊಂದ ಇಬ್ಬರು ಭಾರತೀಯರ ಶಿರಚ್ಛೇದನ

ಚಂಡೀಗಢ, ಎ.17: ಸೌದಿ ಅರೇಬಿಯಾದಲ್ಲಿ ಸಹ ಭಾರತೀಯನನ್ನು ಕೊಲೆಗೈದ ತಪ್ಪಿಗೆ ಹೊಶಿಯಾರಪುರ್ ನ ಸತ್ವಿಂದರ್ ಕೌರ್ ಹಾಗೂ ಲುಧಿಯಾನಾದ ಹರ್ಜೀತ್ ಸಿಂಗ್ ಎಂಬವರ ಶಿರಚ್ಛೇದನಗೈಯಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ. ಅವರಿಬ್ಬರ ಶಿರಚ್ಛೇದನ ಫೆಬ್ರವರಿ 28ರಂದು ನಡೆಸಲಾಗಿತ್ತು.

ಆದರೆ ಇಬ್ಬರಿಗೂ ಈ ಶಿಕ್ಷೆ ವಿಧಿಸುವ ಮೊದಲು ರಿಯಾದ್ ನಲ್ಲಿರುವ ಭಾರತೀಯ ದೂತಾವಾಸಕ್ಕೆ ಸೌದಿ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲ. ಅವರಿಬ್ಬರ ಮೃತದೇಹಗಳನ್ನೂ ಅವರ ಕುಟುಂಬಕ್ಕೆ ಸೌದಿ ನಿಯಮಗಳಂತೆ ಹಸ್ತಾಂತರಿಸುವ ಕ್ರಮವಿಲ್ಲ.

ಸತ್ವಿಂದರ್ ಹಾಗೂ ಹರ್ಜೀತ್ ಇಬ್ಬರೂ ಆರಿಫ್ ಇಮಾಮುದ್ದೀನ್ ಎಂಬಾತನ ಜತೆ ತಾವು ಲೂಟಿಗೈದ ಹಣದ ವಿಚಾರದಲ್ಲಿ ಜಗಳವಾಡಿ ನಂತರ ಆತನನ್ನು ಕೊಂದಿದ್ದರು. ಘಟನೆ ನಡೆದು ಕೆಲ ದಿನಗಳ ನಂತರ ಇಬ್ಬರನ್ನೂ ಮದ್ಯ ಸೇವಿಸಿ ಜಗಳವಾಡುತ್ತಿದ್ದುದಕ್ಕೆ ಬಂಧಿಸಲಾಗಿತ್ತು. ಅವರನ್ನು ಭಾರತಕ್ಕೆ ಗಡೀಪಾರು ಮಾಡುವ ಪ್ರಕ್ರಿಯೆಗಳು ಪೂರ್ಣಗೊಳಿಸುವಷ್ಟರಲ್ಲಿ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ಇಬ್ಬರನ್ನೂ ರಿಯಾದ್ ಕಾರಾಗೃಹದಲ್ಲಿರಿಸಲಾಗಿತ್ತು.

ಅವರಿಬ್ಬರಿಗೆ ವಿಧಿಸಲಾಗಿದ್ದ ಶಿಕ್ಷೆಯ ಬಗ್ಗೆ ವಿದೇಶಾಂಗ ಸಚಿವಾಲಯದಿಂದ ಸೋಮವಾರ ಬಂದ ಪತ್ರದ ಮುಖೇನ ಸತ್ವಿಂದರ್ ಪತ್ನಿ ಸೀಮಾ ರಾಣಿಗೆ  ತಿಳಿದು ಬಂದಿತ್ತು.  ಆಕೆಯ ಮನವಿಗೆ ಉತ್ತರವಾಗಿ ಈ ಪತ್ರ ಬಂದಿತ್ತು. ಅವರಿಬ್ಬರನ್ನು ಕೊಲೆ ಪ್ರಕರಣದಲ್ಲಿ ಡಿಸೆಂಬರ್ 9, 2015ರಂದು ಬಂಧಿಸಲಾಗಿತ್ತು ಎಂದು ಈ ಪತ್ರದಲ್ಲಿ ತಿಳಿಸಲಾಗಿತ್ತು.

ಪ್ರಕರಣದ ವಿಚಾರಣೆ ಮೇ 31, 2017ರಂದು ನಡೆದಾಗ ಭಾರತೀಯ ದೂತಾವಾಸದ ಅಧಿಕಾರಿಯೊಬ್ಬರು ಹಾಜರಿದ್ದರು.  ಪ್ರಕರಣ ಇನ್ನೊಂದು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಾಗ ಅವರಿಬ್ಬರೂ ಹೆದ್ದಾರಿ ದರೋಡೆ ಪ್ರಕರಣದಲ್ಲೂ ಸಿಲುಕಿದ್ದರು.

ಭಾರತೀಯ ದೂತಾವಾಸದ ಅಧಿಕಾರಿಗಳು ಆಗಾಗ ಕಾರಾಗೃಹಕ್ಕೆ ಹೋಗಿ ವಿಚಾರಣೆಯ ಬಗ್ಗೆ ತಿಳಿದುಕೊಳ್ಳುತ್ತಿದ್ದರೂ ಇಬ್ಬರ ಶಿರಚ್ಛೇದನವನ್ನೂ ಈ ವರ್ಷದ ಫೆಬ್ರವರಿ 28ರಂದು ದೂತಾವಾಸಕ್ಕೆ ಮಾಹಿತಿ ನೀಡದೆ ನಡೆಸಲಾಗಿತ್ತು ಎನ್ನಲಾಗಿದೆ. ಮೃತದೇಹಗಳನ್ನು ಪಡೆಯಲು ಸಾಕಷ್ಟು ಪ್ರಯತ್ನಗಳನ್ನು ನಡೆಸಲಾಯಿತಾದರೂ  ಅದು ಅಲ್ಲಿನ ನಿಯಮಗಳಂತೆ ಸಾಧ್ಯವಾಗಿಲ್ಲ, ಎಂದು ಕಾನ್ಸುಲಾರ್ ನಿರ್ದೇಶಕ ಪ್ರಕಾಶ್ ಚಂದ್ ಅವರ ಸಹಿಯಿರುವ ಪತ್ರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X