Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗಿ ಮೇಲೆ ಕ್ರಮ ಕೈಗೊಂಡ ಆಯೋಗ ಕಲ್ಯಾಣ್...

ಯೋಗಿ ಮೇಲೆ ಕ್ರಮ ಕೈಗೊಂಡ ಆಯೋಗ ಕಲ್ಯಾಣ್ ಸಿಂಗ್ ರನ್ನು ಬಿಟ್ಟಿದ್ದೇಕೆ: ಎಚ್.ಕೆ.ಪಾಟೀಲ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ17 April 2019 6:20 PM IST
share
ಯೋಗಿ ಮೇಲೆ ಕ್ರಮ ಕೈಗೊಂಡ ಆಯೋಗ ಕಲ್ಯಾಣ್ ಸಿಂಗ್ ರನ್ನು ಬಿಟ್ಟಿದ್ದೇಕೆ: ಎಚ್.ಕೆ.ಪಾಟೀಲ್ ಪ್ರಶ್ನೆ

ಹುಬ್ಬಳ್ಳಿ, ಎ.17: ಸೇನೆಯನ್ನು ಮೋದಿ ಸೇನೆ ಎಂದು ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮೇಲೆ ಕೊನೆಗೂ ಸಣ್ಣಕ್ರಮಕ್ಕೆ ಮುಂದಾಗಿರುವ ಚುನಾವಣಾ ಆಯೋಗ, ರಾಜಸ್ತಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರ ಮೇಲೆ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದ ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಅವರು ಬಹಿರಂಗವಾಗಿ ಮೋದಿ ಅವರಿಗೆ ಮತ ನೀಡಿ ಎಂದು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಂವಿಧಾನ ವಿರೋಧಿ. ಈ ನಿಟ್ಟಿನಲ್ಲಿ ನೀಡಿದ್ದ ದೂರನ್ನು ಚುನಾವಣಾ ಆಯೋಗ ರಾಷ್ಟ್ರಪತಿ ಅವರಿಗೆ ರವಾನಿಸಿತ್ತು. ಆದರೆ, ರಾಷ್ಟ್ರಪತಿಯವರು ಅವರ ಮೇಲೆ ಕ್ರಮ ಕೈಗೊಳ್ಳುವ ಬದಲು ಗೃಹ ಇಲಾಖೆಗೆ ರವಾನಿಸಿದ್ದು ಸರಿಯಾದ ಕ್ರಮವಲ್ಲ. ರಾಷ್ಟ್ರಪತಿಗಳು ತಕ್ಷಣ ಕಲ್ಯಾಣ್ ಸಿಂಗ್ ಅವರನ್ನು ಅಮಾನತುಗೊಳಿಸಬೇಕಾಗಿತ್ತು. ಇಲ್ಲವೆ ಚುನಾವಣಾ ಪ್ರಕ್ರಿಯೆ ಮುಗಿಯುವ ವರೆಗೂ ಕಡ್ಡಾಯ ರಜೆಯಲ್ಲಿ ಕಳುಹಿಸಬೇಕಾಗಿತ್ತು.

ಇವರೆಡನ್ನೂ ಮಾಡದ ರಾಷ್ಟ್ರಪತಿಗಳು ಚುನಾವಣಾ ಪ್ರಕ್ರಿಯೆಯ ಪಾವಿತ್ರತೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. ರಾಷ್ಟ್ರಪತಿಗಳ ಈ ಕ್ರಮ ಇತಿಹಾಸದಲ್ಲಿ ಸೇರ್ಪಡೆಯಾಗಲಿದೆ ಎಂದ ಅವರು, ಸ್ವಾತಂತ್ರ್ಯ ನಂತರ ಯಾವುದೇ ಕೆಟ್ಟ ರಾಜಕಾರಣಿಯೂ ಇಂತಹ ಹೇಳಿಕೆ ನೀಡಿರಲಿಲ್ಲ. ಯಾವುದೇ ರಾಜಕಾರಣಿಯೂ ಸೈನ್ಯವನ್ನು ರಾಜಕೀಯಕ್ಕೆ ಬಳಸಿಕೊಂಡಿರಲಿಲ್ಲ. ಸೈನ್ಯವನ್ನು ಪ್ರಸ್ತಾಪಿಸಿ ಜನರನ್ನು ಭಾವೋದ್ರೇಕಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿರಲಿಲ್ಲ. ಯೋಗಿ ಆದಿತ್ಯನಾಥ್ ಅವರು ಬಹಳ ಅನುಭವ ಹೊಂದಿರುವ ವ್ಯಕ್ತಿ. ಕಾವಿ ಹಾಕಿಕೊಂಡರೂ ಗುನ್ನೆ ಪ್ರವೃತ್ತಿಯ ಮನಸ್ಸನ್ನು ಹೊಂದಿದ್ದಾರೆ. ದೇಶದ ಸಂವಿಧಾನ ನೀಡಿರುವ ಪ್ರಮುಖವಾದ ಹುದ್ದೆಯನ್ನು ನಿಭಾಯಿಸುತ್ತಿದ್ದಾರೆ. ಮೋದಿ ಸೇನೆಯ ಗೆಲುವು ಮೋದಿ ಸೇನೆಯಿಂದ ರಕ್ಷಣೆ ಎನ್ನುವ ಹೇಳಿಕೆ ನೀಡುವ ಮೂಲಕ ನೀಚಮಟ್ಟದ ರಾಜಕಾರಣಕ್ಕೆ ಕೈಹಾಕಿದ್ದಾರೆ ಎಂದರು.

ಅಲ್ಲದೆ ವಿದೇಶದಲ್ಲಿ 3 ಲಕ್ಷ ಕೋಟಿ ರೂ.ಗಳಷ್ಟು ಹಣವನ್ನು ಮುದ್ರಿಸಿ ಭಾರತದಲ್ಲಿ ಚಲಾವಣೆಗೊಳಿಸುವವರ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಗಮನ ಸೆಳೆಯಲಾಗಿದೆ. ಇದರ ಬಗ್ಗೆ ತನಿಖೆ ಪ್ರಾರಂಭಿಸಬೇಕು. ಹಾಗೂ ಈ ಪ್ರಕರಣದ ಪ್ರಮುಖ ಸಾಕ್ಷಿಗಳಿಗೆ ಸೂಕ್ತ ಭದ್ರತೆಯನ್ನೂ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದರು.

ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳ ಪರವಾದ ಅಲೆ ಇದೆ. ನಮ್ಮ ಮೈತ್ರಿ ಅಭ್ಯರ್ಥಿಗಳು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ವ್ಯಾಪಕವಾಗಿ ಪ್ರಚಾರ ಕೈಗೊಂಡ ಪಾಟೀಲ್, ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಪರ ಚುನಾವಣಾ ಪ್ರಚಾರ ನಡೆಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X