Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ಮೆಡಿಕಲ್ ವಿವಿ: ಆರೋಗ್ಯ...

ಗಲ್ಫ್ ಮೆಡಿಕಲ್ ವಿವಿ: ಆರೋಗ್ಯ ನಿರ್ವಹಣೆ, ಅರ್ಥಶಾಸ್ತ್ರ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭ

ವಾರ್ತಾಭಾರತಿವಾರ್ತಾಭಾರತಿ17 April 2019 10:49 PM IST
share
ಗಲ್ಫ್ ಮೆಡಿಕಲ್ ವಿವಿ: ಆರೋಗ್ಯ ನಿರ್ವಹಣೆ, ಅರ್ಥಶಾಸ್ತ್ರ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭ

ಅಜ್ಮಾನ್, ಎ.17: ಅಜ್ಮಾನ್‌ನ ಗಲ್ಫ್ ಮೆಡಿಕಲ್ ವಿವಿ (ಜಿಎಂಯು) ಆರಂಭಿಸಿರುವ ಆರೋಗ್ಯ ನಿರ್ವಹಣೆ ಮತ್ತು ಅರ್ಥಶಾಸ್ತ್ರ ಕಾಲೇಜಿನಲ್ಲಿ ಪದವಿ ಮತ್ತು ಕಾರ್ಯನಿರ್ವಾಹಕ ಸ್ನಾತಕೋತ್ತರ ಪದವಿ ವಿಷಯಗಳಿಗೆ ವಿದ್ಯಾರ್ಥಿಗಳ ಪ್ರವೇಶಾತಿ ಆರಂಭವಾಗಿದೆ ಎಂದು ಆಡಳಿತ ವರ್ಗ ತಿಳಿಸಿದೆ.

ಆರೋಗ್ಯ ನಿರ್ವಹಣೆ , ಆರೋಗ್ಯ ಅರ್ಥಶಾಸ್ತ್ರ, ಕಾರ್ಯನೀತಿ ತಯಾರಿ ಮತ್ತು ನಿರ್ವಹಣೆ ಕ್ಷೇತ್ರದಲ್ಲಿ ಸಮಗ್ರ ಕೌಶಲ್ಯ ಮತ್ತು ಜ್ಞಾನ ಬೆಳೆಸಿಕೊಂಡು ವೃತ್ತಿ ಜೀವನ ಆರಂಭಿಸಲು ಇದೊಂದು ಸದವಕಾಶವಾಗಿದೆ. ಈ ಹೊಸ ಕಾಲೇಜಿನ ಆರಂಭದೊಂದಿಗೆ ಒಟ್ಟು 6 ಕಾಲೇಜು, 26 ಮಾನ್ಯತೆ ಪಡೆದ ಶಿಕ್ಷಣ ಕ್ರಮದ ಮೂಲಕ ಈ ಪ್ರದೇಶದಲ್ಲಿರುವ ಅತ್ಯಂತ ಬೃಹತ್ ಖಾಸಗಿ ಮೆಡಿಕಲ್ ಕಾಲೇಜು ಎಂಬ ಹೆಗ್ಗಳಿಕೆಗೆ ಜಿಎಂಯು ಪಾತ್ರವಾಗಿದೆ. ಪ್ರತೀ ವರ್ಷ ಜಿಎಂಯುವಿನ ಅತ್ಯಧಿಕ ಬೇಡಿಕೆಯಿರುವ ಶಿಕ್ಷಣ ಕ್ರಮಗಳ ಕುರಿತು ವಿಶ್ವದ ವಿವಿಧೆಡೆಯಿಂದ 6 ಸಾವಿರಕ್ಕೂ ಹೆಚ್ಚಿನ ವಿಚಾರಣೆಯನ್ನು ಕಾಲೇಜಿನ ಪ್ರವೇಶ ವಿಭಾಗವು ಸ್ವೀಕರಿಸುತ್ತದೆ.

ಆರೋಗ್ಯ ನಿರ್ವಹಣೆ ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಎರಡು ಶಿಕ್ಷಣ ಕ್ರಮವನ್ನು ಆರಂಭಿಸಿದೆ. ಬ್ಯಾಚುಲರ್ ಆಫ್ ಸೈಯನ್ಸ್ ಇನ್ ಹೆಲ್ತ್‌ಕೇರ್ ಮ್ಯಾನೇಜ್‌ ಮೆಂಟ್ ಆ್ಯಂಡ್ ಇಕನಾಮಿಕ್ಸ್ (ಬಿಎಸ್ಸಿ.ಎಚ್‌ಎಂಇ): ಆರೋಗ್ಯ ನಿರ್ವಹಣೆ ಉದ್ಯಮದ ಬಗ್ಗೆ ಆಳವಾದ ತಿಳುವಳಿಕೆ ಮೂಡಿಸುವ ಉದ್ದೇಶದ ನಾಲ್ಕು ವರ್ಷದ ಪದವಿ ಕಾರ್ಯಕ್ರಮ.

ದಿ ಎಕ್ಸಿಕ್ಯೂಟಿವ್ ಮಾಸ್ಟರ್ ಇನ್ ಹೆಲ್ತ್‌ಕೇರ್ ಮ್ಯಾನೇಜ್‌ಮೆಂಟ್ ಆ್ಯಂಡ್ ಇಕನಾಮಿಕ್ಸ್(ಇಎಂಎಚ್‌ಎಂಇ): ಆರೋಗ್ಯ ನಿರ್ವಹಣೆ ಉದ್ಯಮದಲ್ಲಿ ಮಧ್ಯಮ ದಿಂದ ಹಿರಿಯ ಮಟ್ಟದ ವೃತ್ತಿಪರರಿಗೆ ಅನುಕೂಲವಾಗುವ 12 ತಿಂಗಳ ಶಿಕ್ಷಣ ಕಾರ್ಯಕ್ರಮ. ಕಾರ್ಯನಿರ್ವಹಿಸುತ್ತಿರುವ ವೃತ್ತಿಪರರಿಗೆ ತಮ್ಮ ವೃತ್ತಿ ನಿರೀಕ್ಷೆಯನ್ನು ಸುಧಾರಿಸಿಕೊಳ್ಳಲು ಮತ್ತು ವೃತ್ತಿಪರ ಜಾಲಬಂಧ(ನೆಟ್‌ವರ್ಕ್) ವಿಸ್ತರಿಸಿಕೊಳ್ಳಲು ಹೆಚ್ಚು ಪ್ರಯೋಜನಕಾರಿಯಾಗಿದೆ.

ಕಾಲೇಜು ಮತ್ತು ಶಿಕ್ಷಣ ಕ್ರಮಗಳು ಯುಎಇಯ ಶಿಕ್ಷಣ ಸಚಿವಾಲಯದಿಂದ ಮಾನ್ಯತೆ ಪಡೆದಿವೆ. ಮಿಲಾನ್ ವಿವಿ, ಅರಿರೆನಾ ವಿವಿ, ಅಮೆರಿಕನ್ ಯುನಿವರ್ಸಿಟಿ ಆಫ್ ಕೈರೊ, ಸೆಂಟ್ರಲ್ ಫ್ಲೊರಿಡಾ ವಿವಿ ಮುಂತಾದ ಪ್ರಮುಖ ಅಂತರ್ ರಾಷ್ಟ್ರೀಯ ವಿವಿಗಳ ಸಹಯೋಗದೊಂದಿಗೆ ಈ ಶಿಕ್ಷಣ ಕ್ರಮವನ್ನು ವ್ಯವಸ್ಥೆ ಮಾಡಲಾಗಿದೆ. ಕಾಲೇಜು ಯುರೋಪಿಯನ್ ಹೆಲ್ತ್‌ಕೇರ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಸದಸ್ಯತ್ವ ಹೊಂದಿದೆ. ಇದೀಗ 2019ರ ಸೆಪ್ಟೆಂಬರ್‌ನಲ್ಲಿ ಆರಂಭವಾಗುವ ಪದವಿ ಮತ್ತು ಕಾರ್ಯನಿರ್ವಾಹಕ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಎಂಯು ಕುಲಪತಿ ಪ್ರೊ. ಹೊಸ್ಸಾಂ ಹಮ್ದಿ ತಿಳಿಸಿದ್ದಾರೆ.

ಪ್ರೊ. ಹೊಸ್ಸಾಂ ಹಮ್ದಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X