Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಧ್ಯಾಹ್ನ 3 ಗಂಟೆ ವೇಳೆಗೆ ಕೊಡಗಿನಲ್ಲಿ...

ಮಧ್ಯಾಹ್ನ 3 ಗಂಟೆ ವೇಳೆಗೆ ಕೊಡಗಿನಲ್ಲಿ ಶೇ.57 ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ18 April 2019 6:08 PM IST
share
ಮಧ್ಯಾಹ್ನ 3 ಗಂಟೆ ವೇಳೆಗೆ ಕೊಡಗಿನಲ್ಲಿ ಶೇ.57 ರಷ್ಟು ಮತದಾನ

ಮಡಿಕೇರಿ, ಎ.18: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ ನಡೆದಿದೆ. ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಬೆಳಗಿನಿಂದಲೇ ಬಿರುಸಿನ ಮತದಾನ ಆರಂಭವಾಗಿತ್ತು. ಮತ್ತೆ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನದ ನಂತರ ಮತದಾನ ಚುರುಕುಗೊಂಡಿದೆ.  

ಮಡಿಕೇರಿ, ಒಣಚಲು, ಗಾಳಿಬೀಡು, ಸುಂಟಿಕೊಪ್ಪ, ಗರಗಂದೂರು, ಮಾದಾಪುರ, ಹಟ್ಟಿಹೊಳೆ, ಮಕ್ಕಂದೂರು, ಮೂರ್ನಾಡು, ವಿರಾಜಪೇಟೆ, ಆರ್ಜಿ, ಅಮ್ಮತ್ತಿ-ಕಾರ್ಮಾಡು, ಸಿದ್ದಾಪುರ, ನೆಲ್ಯಹುದಿಕೇರಿ, ವಾಲ್ನೂರು, ನಂಜರಾಯಪಟ್ಟಣ, ಕುಶಾಲನಗರ, ಸೋಮವಾರಪೇಟೆ, ಗುಡ್ಡೆಹೊಸೂರು, ಕಂಬಿಬಾಣೆ, ಚೆಟ್ಟಳ್ಳಿ ಮತ್ತಿತರೆಡೆ ಮತದಾರರು ಸರದಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸಿದ್ದು ಕಂಡುಬಂತು.  

ಮತದಾನ ದಿನವಾದ ಗುರುವಾರ ಮಳೆ ಬಿಡುವು ನೀಡಿತ್ತು. ಜಿಲ್ಲೆಯ ಹಲವು ಮತಗಟ್ಟೆಗಳಲ್ಲಿ ತಮ್ಮ ಮೊಮ್ಮಕ್ಕಳ ಸಹಾಯದೊಂದಿಗೆ ಹಿರಿಯರು ಮತ್ತು ವಿಶೇಷ ಚೇತನರು ಮತಗಟ್ಟೆಗೆ ಆಗಮಿಸಿ ಮತ ಹಕ್ಕು ಚಲಾಯಿಸಿದರು. ವಿಶೇಷ ಚೇತನರು ತಮ್ಮ ಮೊಮ್ಮಕ್ಕಳ ಸಹಾಯದೊಂದಿಗೆ ಗಾಲಿ ಕುರ್ಚಿ ವಾಹನದ ಮೂಲಕ ಮತಗಟ್ಟೆಗೆ ತೆರಳಿ ಮತ ಹಕ್ಕು ಚಲಾಯಿಸಿದ್ದು ಕಂಡುಬಂತು. 

ಒಣಚಲು ಮತಗಟ್ಟೆಯಲ್ಲಿ ಮತದಾರರು ಉತ್ಸಾಹದಿಂದ ಮತಹಕ್ಕು ಚಲಾಯಿಸಿದರು. ಸುಂಟಿಕೊಪ್ಪ ಗ್ರಾಮದ ಮತಗಟ್ಟೆಯಲ್ಲಿ ಮಹಿಳಾ ಮತ್ತು ಪುರುಷ ಮತದಾರರು ಉದ್ದುದ್ದ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡಿದರು. 

ಒಣಚಲು ಗ್ರಾಮದ ಮಹಿಳೆಯೊಬ್ಬರೂ ಮಾತನಾಡಿ, ಒಣಚಲು ಸುತ್ತಮುತ್ತ ಕಾಡು ಪ್ರಾಣಿಗಳ ಹಾವಳಿ ಇದ್ದು, ಪ್ರತಿನಿತ್ಯ ಭಯದಲ್ಲಿ ವಾಸಮಾಡಬೇಕಿದೆ.  ಇತ್ತೀಚಿನ ದಿನಗಳಲ್ಲಿ ರಸ್ತೆ ಮತ್ತು ಸಾರಿಗೆ ಸಂಪರ್ಕ ಸುಧಾರಣೆಯಾಗಿದ್ದು, ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಮಾಡಬೇಕಿದೆ ಎಂದರು. 

ಜಿಲ್ಲೆಯಲ್ಲಿ ಬೆಳಗ್ಗೆ 11 ಗಂಟೆ ವೇಳೆಗೆ ಶೇ.29 ರಷ್ಟು ಮತದಾನವಾಗಿತ್ತು, ಹಾಗೆಯೇ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.46 ರಷ್ಟು ಮತದಾನವಾಗಿತ್ತು.  
ಜಿಲ್ಲೆಯ ಸೂಕ್ಷ್ಮ ಮತಗಟ್ಟೆಗಳಲ್ಲಿ ಒಂದಾದ ಒಣಚಲು ಮತಗಟ್ಟೆಯಲ್ಲಿ ಬೆಳಗಿನಿಂದಲೇ ಮತದಾರರು ಸಾಲುಗಟ್ಟಿ ಮತ ಚಲಾಯಿಸಿದ್ದು ಕಂಡುಬಂತು.  
ಒಟ್ಟಾರೆ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳ ಎಲ್ಲಾ ಭಾಗಗಳಲ್ಲಿ ಉತ್ತಮ ಮತದಾನವಾಗಿದೆ. ಜಿಲ್ಲೆಯಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಸುಮಾರು ಶೇ.57 ರಷ್ಟು ಮತದಾನವಾಗಿದೆ.  

ಮಹಿಳೆಯರು ಅತಿ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದು ವಿಶೇಷವಾಗಿತ್ತು. ಒಣಚಲು ಗ್ರಾಮದಲ್ಲಿ ಮುಂಜಾನೆಯಿಂದಲೇ ಮಹಿಳಾ ಮತದಾರರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X