Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಲಿಕಾಪ್ಟರ್ ನಲ್ಲಿದ್ದ ಏನನ್ನು ಭಾರತ...

ಹೆಲಿಕಾಪ್ಟರ್ ನಲ್ಲಿದ್ದ ಏನನ್ನು ಭಾರತ ನೋಡಬಾರದೆಂದು ಮೋದಿ ಬಯಸಿದ್ದಾರೆ: ಆಪ್ ಪ್ರಶ್ನೆ

ತಪಾಸಣೆ ನಡೆಸಿದ ಐಎಎಸ್ ಅಧಿಕಾರಿಯ ಅಮಾನತು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ18 April 2019 8:24 PM IST
share
ಹೆಲಿಕಾಪ್ಟರ್ ನಲ್ಲಿದ್ದ ಏನನ್ನು ಭಾರತ ನೋಡಬಾರದೆಂದು ಮೋದಿ ಬಯಸಿದ್ದಾರೆ: ಆಪ್ ಪ್ರಶ್ನೆ

ಹೊಸದಿಲ್ಲಿ,ಎ.18: ಒಡಿಶಾದ ಸಂಬಲಪುರ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾದ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಮುಹಮ್ಮದ್ ಮೊಹ್ಸಿನ್ ಅವರನ್ನು ಚುನಾವಣಾ ಆಯೋಗ(ಇಸಿ)ವು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿರುವುದನ್ನು ಕಾಂಗ್ರೆಸ್ ಮತ್ತು ಆಪ್ ಪ್ರಶ್ನಿಸಿವೆ.

ಎ.16ರಂದು ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಬಲಪುರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭ ಫ್ಲೈಯಿಂಗ್ ಸ್ಕ್ವಾಡ್ ತಂಡವೊಂದು ಅವರ ಹೆಲಿಕಾಪ್ಟರ್‌ನ್ನು ತಪಾಸಣೆಗೊಳಪಡಿಸಿದ್ದ ಹಿನ್ನೆಲೆಯಲ್ಲಿ ಆಯೋಗವು ಮೊಹ್ಸಿನ್ ಅವರನ್ನು ಅಮಾನತುಗೊಳಿಸಿ ಆದೇಶವನ್ನು ಹೊರಡಿಸಿದ್ದು,ಇದು ತಕ್ಷಣದಿಂದಲೇ ಜಾರಿಗೊಂಡಿತ್ತು.

ಎಸ್‌ಪಿಜಿ ರಕ್ಷಣೆಯಲ್ಲಿರುವ ಗಣ್ಯರ ಕುರಿತಂತೆ ನೀಡಲಾಗಿದ್ದ  ನಿರ್ದೇಶಗಳನ್ನು ಮೊಹ್ಸಿನ್ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರು ಕರ್ತವ್ಯಲೋಪವನ್ನೆಸಗಿರುವುದು ಮೇಲ್ನೋಟಕ್ಕೆ  ಕಂಡುಬಂದಿದೆ ಎಂದು ಆಯೋಗವು ಹೇಳಿತ್ತು.  

ಆಯೋಗದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್,ಅಧಿಕಾರಿಯನ್ನು ಶಿಕ್ಷಿಸಲು ಅದು ಉಲ್ಲೇಖಿಸಿರುವ ನಿಯಮಗಳು ಪ್ರಧಾನಿಯವರ ವಾಹನಕ್ಕೆ  ಶೋಧ ಕಾರ್ಯಾಚರಣೆಯಿಂದ ವಿನಾಯಿತಿ ನೀಡುವುದಿಲ್ಲ ಎಂದು ಟ್ವೀಟಿಸಿದೆ.

ಭಾರತವು ನೋಡುವುದನ್ನು ಮೋದಿ ಬಯಸದ ಏನನ್ನು ಅವರು ಹೆಲಿಕಾಪ್ಟರ್‌ನಲ್ಲಿ ಸಾಗಿಸುತ್ತಿದ್ದರು ಎಂದು ಅದು ಪ್ರಶ್ನಿಸಿದೆ.

ಪ್ರಧಾನಿಯ ಹೆಲಿಕಾಪ್ಟರ್‌ನ್ನು  ತಪಾಸಣೆಗೊಳಪಡಿಸಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಚೌಕಿದಾರ ತನ್ನದೇ ಆದ ಸಂರಕ್ಷಿತ ಕವಚದಲ್ಲಿ ಬದುಕುತ್ತಿದ್ದಾರೆ. ಚೌಕಿದಾರರು ಏನನ್ನಾದರೂ ಬಚ್ಚಿಡಲು ಯತ್ನಿಸುತ್ತಿದ್ದಾರೆಯೇ ಎಂದು ಆಪ್ ಟ್ವೀಟ್‌ನಲ್ಲಿ ಪ್ರಶ್ನಿಸಿದೆ.

ಸಂಬಲಪುರ ಜಿಲ್ಲಾಧಿಕಾರಿ ಮತ್ತು ಡಿಐಜಿ ವರದಿಗಳ ಆಧಾರದಲ್ಲಿ ಆಯೋಗವು ಮೊಹ್ಸಿನ್ ವಿರುದ್ಧ ಕ್ರಮವನ್ನು ಕೈಗೊಂಡಿದೆ. ತಪಾಸಣೆಯಿಂದಾಗಿ ಮೋದಿ ಅವರು ಸುಮಾರು 15 ನಿಮಿಷಗಳ ಕಾಲ ಸಂಬಲಪುರದಲ್ಲಿ ತಡೆ ಹಿಡಿಯಲ್ಪಟ್ಟಿದ್ದರು ಎನ್ನಲಾಗಿದೆ.

ಚುನಾವಣಾ ಆಯೋಗದ ಕ್ರಮವನ್ನು ತೀವ್ರವಾಗಿ ಆಕ್ಷೇಪಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರು,ಅದು ಈ ಮೂಲಕ ಯಾವ ಸಂದೇಶವನ್ನು ರವಾನಿಸಲು ಬಯಸಿದೆ ಎಂದು ಪ್ರಶ್ನಿಸಿ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X