Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರದಲ್ಲಿ ಶಾಂತಿಯುತ ಮತದಾನ

ಬೆಂಗಳೂರು ನಗರದಲ್ಲಿ ಶಾಂತಿಯುತ ಮತದಾನ

ವಾರ್ತಾಭಾರತಿವಾರ್ತಾಭಾರತಿ18 April 2019 8:32 PM IST
share
ಬೆಂಗಳೂರು ನಗರದಲ್ಲಿ ಶಾಂತಿಯುತ ಮತದಾನ

ಬೆಂಗಳೂರು, ಎ.18: ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಅಂತಿಮಗೊಂಡಿದ್ದು, ಹಲವು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಮಾಯ ಸೇರಿದಂತೆ ಸಣ್ಣಪುಟ್ಟ ಗಲಾಟೆಗಳ ನಡುವೆ ಶಾಂತಿಯುತವಾಗಿ ಮತದಾನ ನಡೆದಿದೆ.

ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ, ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟಿರುವುದು, ನಕಲಿ ಮತದಾನಕ್ಕೆ ಯತ್ನ ಸೇರಿದಂತೆ ಸಣ್ಣಪುಟ್ಟ ಘಟನೆಗಳು ನಡೆದಿದ್ದರೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.

ಕೋರಮಂಗಲ ಈಡಬ್ಲ್ಯೂಸಿ ಕ್ವಾಟ್ರಸ್‌ನಲ್ಲಿರುವ 3 ಸಾವಿರ ಮತದಾರರ ಹೆಸರನ್ನು ಬಿಬಿಎಂಪಿ ತೆಗೆದು ಹಾಕಿದೆ. ಬಿಬಿಎಂಪಿ ಇಡಬ್ಲ್ಯೂಸಿ ಕ್ವಾಟ್ರಸ್ ನವೀಕರಣಕ್ಕಾಗಿ ನೆಲಸಮಗೊಳಿಸಿದ್ದು, ಈ ವೇಳೆ ಮತದಾರರ ಪಟ್ಟಿ ನಾಪತ್ತೆಯಾಗಿದೆ. 3 ಸಾವಿರ ಕ್ಕೂ ಅಧಿಕ ಮತದಾರರ ಹೆಸರು ಪಟ್ಟಿಯಿಂದ ತೆಗೆದುಹಾಕಿರುವುದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಗರಬಾವಿ ಸಮೀಪದ ಕೆಎಲ್ಇ ಕಾಲೇಜಿನ ಬೂತ್‌ನಲ್ಲಿ ಮತದಾರರ ಪಟ್ಟಿಯಲ್ಲಿ 367 ಹೆಸರು ನಾಪತ್ತೆಯಾಗಿದ್ದು, ಮತದಾರರು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೊಮ್ಮನಹಳ್ಳಿಯ ಹೊಂಗಸಂದ್ರ ನಿವಾಸಿ ದೇವರಾಜ್ ಹೆಸರಿನಲ್ಲಿ ಬೇರೊಬ್ಬ ವ್ಯಕ್ತಿ ಮತ ಚಲಾಯಿಸಿದ್ದರಿಂದ ಕೆಲಕಾಲ ಮತಗಟ್ಟೆಯಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ಡಾಲರ್ಸ್ ಕಾಲನಿಯ ಗೋಪಾಲ ನಾಗರಾಜ್ ಮತಗಟ್ಟೆಯಲ್ಲಿ ಮತದಾರರ ಫೋಟೊ ಹೊಂದಾಣಿಕೆ ಆಗುತ್ತಿಲ್ಲವೆಂದು ಅಧಿಕಾರಿಗಳು ಮತ್ತು ಮತದಾರರ ನಡುವೆ ಮಾತಿನ ಚಕಮುಕಿ ನಡೆಯಿತು.

ಇವಿಎಂನಲ್ಲಿ ತಾಂತ್ರಿಕ ದೋಷ: ಶ್ರೀರಾಮಪುರದ 69ರ ಮತಗಟ್ಟೆಯ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, 7 ಗಂಟೆಗೆ ಮತದಾನ ಆರಂಭವಾಗಲಿಲ್ಲ. ಜನರು ಉತ್ಸಾಹದಿಂದ ಮತ ಹಾಕಲು ಕಾದು ನಿಂತಿದ್ದು, ಇವಿಎಂ ತಾಂತ್ರಿಕ ದೋಷದಿಂದಾಗಿ ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಇವಿಎಂ ತಾಂತ್ರಿಕ ದೋಷ ಸರಿಪಡಿಸಲು ಹರಸಾಹಸ ಪಟ್ಟರು. ಕೆಲ ಗಂಟೆಗಳ ನಂತರ ತಾಂತ್ರಿಕ ದೋಷ ಸರಿಪಡಿಸಲಾಯಿತು. ಮತದಾನ ಆರಂಭವಾಯಿತು.

ಕಣ್ಮುಚ್ಚಿ ಕುಳಿತ ಆಯೋಗ

ಮತಗಟ್ಟೆಯಿಂದ 100 ಮೀ. ಒಳಗೆ ಪ್ರಚಾರ ನಡೆಸುವಂತಿಲ್ಲ ಮತ್ತು 200 ಮೀ. ಒಳಗೆ ಪಕ್ಷದ ಏಜೆಂಟರು 1 ಟೇಬಲ್ ಮತ್ತು 2 ಕುರ್ಚಿಗಳನ್ನು ಮಾತ್ರ ಬಳಸಬೇಕೆಂದು ಆಯೋಗ ತಿಳಿಸಿದೆ. ಆದರೂ, ಚಾಮರಾಜಪೇಟೆಯ ವಿಧಾನಸಭಾ ಕ್ಷೇತ್ರದ ಕರಿತಿಮ್ಮನಹಳ್ಳಿ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸೇರಿದಂತೆ ಸುತ್ತಲಿನ ಮತಗಟ್ಟೆಗಳಲ್ಲಿ ಏಜೆಂಟರು 4ಕ್ಕೂ ಅಧಿಕ ಟೇಬಲ್ ಹಾಕಿಕೊಂಡಿದ್ದು ಕಂಡು ಬಂದಿತು. 

ಮತ ಚಲಾಯಿಸುವುದರಿಂದ ಉತ್ತಮ ನಾಯಕನ ಆಯ್ಕೆ ಸಾಧ್ಯ. ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಕಡಿಮೆ ಇದ್ದು, ಹೆಚ್ಚಾಗಬೇಕು.

-ರಾಕ್‌ಲೈನ್ ವೆಂಕಟೇಶ್, ನಿರ್ಮಾಪಕ

ನಾನು ಪರವಾಗಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಎರಡು ವರ್ಷದ ಹಿಂದೆಯೇ ತಿಳಿಸಿದ್ದೆ. ಪ್ರೀತಿ ವಿಶ್ವಾಸ ಮುಖ್ಯ. ಮತದಾರರು ಕೂಡ ಪ್ರೀತಿ ವಿಶ್ವಾಸದಿಂದ ಮತ ಚಲಾಯಿಸುತ್ತಾರೆ. ಅಭ್ಯರ್ಥಿಗಳು ಕೆಲಸ ಮಾಡದಿದ್ದರೆ ನಾವು ಜವಬ್ದಾರರಾಗಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ಅಭ್ಯರ್ಥಿಗೆ ಬೆಂಬಲವಿಲ್ಲ ಅಂತಲ್ಲ.

-ಸುದೀಪ್, ಚಲನಚಿತ್ರ ನಟ

ನಮ್ಮ ಕರ್ತವ್ಯಗಳನ್ನು ನಾವು ಮಾಡಬೇಕು. ನಮ್ಮ ಕರ್ತವ್ಯ ಮಾಡದೇ ಬೇರೆಯವರಿಗೆ ಕೈ ತೋರಿಸಬಾರದು. ಯಾರಿಗೂ ತೊಂದರೆಯಾಗಬಾರದೆಂದು ಮಧ್ಯಾಹ್ನ ಸಮಯದಲ್ಲಿ ಮತದಾನ ಮಾಡಿದ್ದೇನೆ. ಎರಡನೇ ಹಂತದಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗಲ್ಲ. ಮುಂದಿನ ದಿನಗಳಲ್ಲಿ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳುತ್ತೇನೆ.

-ಯಶ್, ಚಲನಚಿತ್ರ ನಟ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X