Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೊದಲ ಹಂತದ ಲೋಕಸಭಾ ಚುನಾವಣೆ:...

ಮೊದಲ ಹಂತದ ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಶೇ.67.79 ಮತ ಚಲಾವಣೆ

ಮಂಡ್ಯದಲ್ಲಿ ಅಧಿಕ, ಬೆಂಗಳೂರಿನಲ್ಲಿ ಕಡಿಮೆ ಮತದಾನ

ವಾರ್ತಾಭಾರತಿವಾರ್ತಾಭಾರತಿ18 April 2019 9:39 PM IST
share
ಮೊದಲ ಹಂತದ ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಶೇ.67.79 ಮತ ಚಲಾವಣೆ

ಬೆಂಗಳೂರು, ಎ.18: ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಪೂರ್ತಿಯಾಗಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ. 67.67 ರಷ್ಟು ಮತದಾನವಾಗಿದ್ದು, ಮಂಡ್ಯ(80.23) ಹಾಗೂ ಕರಾವಳಿ(77.70)ಯಲ್ಲಿ ಅತ್ಯಧಿಕ, ಬೆಂಗಳೂರು ನಗರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಚುನಾವಣೆ ಆರಂಭವಾದ ದಿನದಿಂದ ಇದುವರೆಗೂ ಶೇ.60 ರಷ್ಟು ಮತದಾನವಾದ ದಾಖಲೆಯಿಲ್ಲ ಎಂಬ ಟೀಕೆಗೆ ಗುರಿಯಾಗುವ ಬೆಂಗಳೂರು ಈ ಬಾರಿಯೂ ಕಡಿಮೆ ಮತದಾನವಾಗಿದೆ. 

ಮಂಗಳೂರು ಒಳಗೊಂಡ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಶೇ.77.70, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ.75.26 ಹಾಗೂ ತುಮಕೂರು ಕ್ಷೇತ್ರದಲ್ಲಿ ಶೇ.77.01 ಇದ್ದರೆ, ಹಾಸನದಲ್ಲಿ ಶೇ.77.28 ರಷ್ಟು ಮತದಾನವಾಗಿದೆ.

ಬೆಳಗ್ಗೆ 7 ರಿಂದ ಆರಂಭವಾದ ಮತದಾನ 9 ಗಂಟೆ ವೇಳೆ ಶೇ.7.60 ರಷ್ಟು ಮತದಾನ ದಾಖಲಾಗಿತ್ತು. ದಕ್ಷಿಣ ಕನ್ನಡ ಶೇ.14.94 ಹಾಗೂ ಉಡುಪಿ-ಚಿಕ್ಕಮಗಳೂರು ಶೇ.13 ರಷ್ಟಿದ್ದರೆ, ಬೆಂಗಳೂರು ನಗರದಲ್ಲಿ(ಮೂರು ಕ್ಷೇತ್ರಗಳು ಸೇರಿದಂತೆ) ಶೇ.14.71 ರಷ್ಟಾಗಿತ್ತು. 11 ಗಂಟೆ ವೇಳೆ ದಕ್ಷಿಣ ಕನ್ನಡ 32.10, ಉಡುಪಿ-ಚಿಕ್ಕಮಗಳೂರು ಶೇ.29.01, ತುಮಕೂರು ಶೇ.32.62 ರಷ್ಟಿದ್ದರೆ, ಬೆಂಗಳೂರಿನಲ್ಲಿ ಶೇ.50.87 ರಷ್ಟಿತ್ತು. ಮಧ್ಯಾಹ್ನದ 1 ಗಂಟೆ  ವೇಳೆಗೆ ದಕ್ಷಿಣ ಕನ್ನಡ ಶೇ.48.49 ರಷ್ಟಿದ್ದರೆ, ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳು ಸೇರಿದಂತೆ ಶೇ.72.6 ರಷ್ಟಿತ್ತು. ಮಧ್ಯಾಹ್ನ ಮೂರು ಗಂಟೆಯ ವೇಳೆ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಶೇ.60.46 ಹಾಗೂ 56.44 ಕ್ಕೆ ಏರಿಕೆ ಕಂಡಿತ್ತು. ಇನ್ನು ತುಮಕೂರು ಶೇ.54.88 ಮತದಾನವಾಗಿತ್ತು. ಸಂಜೆ ಐದು ಗಂಟೆ ವೇಳೆಗೆ ದಕ್ಷಿಣ ಕನ್ನಡ ಶೇ.72.97, ಉಡುಪಿ-ಚಿಕ್ಕಮಗಳೂರು ಶೇ.69.83, ತುಮಕೂರು ಶೇ.70.28 ರಷ್ಟು ಮತದಾನವಾಗಿದೆ. ಆದರೆ, ಬೆಂಗಳೂರು ಉತ್ತರ ಶೇ.48.19, ಬೆಂಗಳೂರು ಕೇಂದ್ರ 45.34, ಬೆಂಗಳೂರು ದಕ್ಷಿಣ ಶೇ.49.36 ರಷ್ಟು ಮತದಾನವಾಗಿದೆ.

ರಾತ್ರಿ 8 ಗಂಟೆಗೆ ಸಿಕ್ಕಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಶೇ.77.70, ಉಡುಪಿ-ಚಿಕ್ಕಮಗಳೂರು ಶೇ.75.13 ಇದ್ದರೆ, ತುಮಕೂರು ಶೇ.76.89 ರಷ್ಟಿದೆ. ಈ ವೇಳೆ ಬೆಂಗಳೂರು ಉತ್ತರ ಶೇ.48.64, ಬೆಂಗಳೂರು ಕೇಂದ್ರ 45.97, ಬೆಂಗಳೂರು ದಕ್ಷಿಣ 51.55 ರಷ್ಟಿದೆ. ರಾತ್ರಿ 9 ರ ಪ್ರಕಾರ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಧಿಕ ಮತದಾನ ದಾಖಲಾಗಿದ್ದು, ಶೇ.80.23 ರಷ್ಟಿದೆ. ದಕ್ಷಿಣ ಕನ್ನಡದಲ್ಲಿ ಶೇ.77.70, ಉಡುಪಿ-ಚಿಕ್ಕಮಗಳೂರು ಶೇ.75.26, ತುಮಕೂರಿನಲ್ಲಿ ಶೇ.77.01 ರಷ್ಟಿತ್ತು. ಬೆಂಗಳೂರು ಉತ್ತರ ಶೇ.50.51, ಕೇಂದ್ರ 49.75 ಹಾಗೂ ದಕ್ಷಿಣ 54.12 ರಷ್ಟಿತ್ತು.

(ರಾತ್ರಿ 9 ರ ಮಾಹಿತಿ ಪ್ರಕಾರ)
ಕ್ಷೇತ್ರವಾರು ತಾತ್ಕಾಲಿಕ ಮತದಾನ ವಿವರ:(ಶೇಖಡವಾರು)

ಉಡುಪಿ-ಚಿಕ್ಕಮಗಳೂರು- 75.26
ಹಾಸನ- 77.28
ದಕ್ಷಿಣ ಕನ್ನಡ- 77.70
ಚಿತ್ರದುರ್ಗ- 70.59
ತುಮಕೂರು- 77.01
ಮಂಡ್ಯ- 80.23
ಮೈಸೂರು- 68.85
ಚಾಮರಾಜನಗರ- 73.45
ಬೆಂಗಳೂರು ಗ್ರಾಮಾಂತರ- 64.09
ಬೆಂಗಳೂರು ಉತ್ತರ- 50.51
ಬೆಂಗಳೂರು ಕೇಂದ್ರ- 49.75
ಬೆಂಗಳೂರು ದಕ್ಷಿಣ- 54.12
ಚಿಕ್ಕಬಳ್ಳಾಪುರ- 76.14
ಕೋಲಾರ- 75.94

share
ವಾರ್ತಾಭಾರತಿ
ವಾರ್ತಾಭಾರತಿ
Next Story
X