Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಪ್ರಜಾಪ್ರಭುತ್ವ ಉಳಿವಿಗಾಗಿ ಮತ ಚಲಾವಣೆ...

‘ಪ್ರಜಾಪ್ರಭುತ್ವ ಉಳಿವಿಗಾಗಿ ಮತ ಚಲಾವಣೆ ಎಲ್ಲರ ಕರ್ತವ್ಯ’

ಯುವ ಮತದಾರರ ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ18 April 2019 11:48 PM IST
share
‘ಪ್ರಜಾಪ್ರಭುತ್ವ ಉಳಿವಿಗಾಗಿ ಮತ ಚಲಾವಣೆ ಎಲ್ಲರ ಕರ್ತವ್ಯ’

ಬೆಂಗಳೂರು, ಎ.18: ಸಂವಿಧಾನದತ್ತವಾಗಿ ಪ್ರತಿಯೊಬ್ಬರಿಗೂ ದೊರಕಿರುವ ಮತದಾನದ ಹಕ್ಕನ್ನು ಪ್ರಜಾಪ್ರಭುತ್ವದ ಉಳಿವಿಗಾಗಿ, ಸಮರ್ಥ ಹಾಗೂ ಸುಭದ್ರವಾದ ಸರಕಾರ ರಚನೆಗಾಗಿ ಕಡ್ಡಾಯವಾಗಿ ಮತಹಾಕಬೇಕಾಗಿದೆ ಎಂದು ಯುವ ಮತದಾರರು ಅಭಿಪ್ರಾಯಪಟ್ಟಿದ್ದಾರೆ.

ಮೊದಲನೆ ಬಾರಿಗೆ ಮತ ಚಲಾವಣೆ ಮಾಡಿದ ಯುವ ಮತದಾರರು ಪತ್ರಿಕೆಯೊಂದಿಗೆ ಮಾತನಾಡುತ್ತಾ, ಮತದಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಧ್ಯವಾಗುತ್ತದೆ. ಆದುದರಿಂದಲೇ ಲೋಕಸಭಾ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂದು ಕರೆಯಲಾಗಿದೆ. ಇಂದು ನಾವು ಚಲಾವಣೆ ಮಾಡುವ ಒಂದೊಂದು ಮತವೂ ಮುಂದಿನ ಐದು ವರ್ಷಗಳ ಭದ್ರಬುನಾದಿಯಾಗುತ್ತದೆ ಎಂದು ತಮ್ಮ ಮನದಾಳದ ಮಾತುಗಳು ಹಂಚಿಕೊಂಡರು.

ಜಯನಗರದ ವಿವೇಕ್ ಮಾತನಾಡುತ್ತಾ, ಮೊದಲನೇ ಬಾರಿಗೆ ಮತ ಚಲಾವಣೆ ಮಾಡಿದ್ದೇನೆ. ದೇಶಕ್ಕಾಗಿ ಅಲ್ಲ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ ಹಾಕಿದ್ದೇನೆ. ಮತ ಎಲ್ಲರ ಹಕ್ಕು, ಅದನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಂಡಾಗಲೇ ನಾವು ನಿರೀಕ್ಷಿಸಿದ ಹಾಗೂ ಎಲ್ಲರಿಗೂ ಅಗತ್ಯವಿರುವ ಸರಕಾರವನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜೆಪಿ ನಗರದ ಮೂರನೆ ಬ್ಲಾಕ್‌ನಲ್ಲಿನ ಸ್ಪಂದನಾ ಮಾತನಾಡುತ್ತಾ, ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುವುದರಿಂದ ಅಭಿವೃದ್ಧಿ ಮಾಡುವಂತಹ ಸರಕಾರ ರಚನೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾನು ನನ್ನ ಮೊದಲ ಮತವನ್ನು ಅಭಿವೃದ್ಧಿ ರಹಿತರನ್ನು ಹೊರತುಪಡಿಸಿ, ಅಭಿವೃದ್ಧಿ ಪರವಿರುವ ಅಭ್ಯರ್ಥಿಗೆ ಹಾಕಿದೆ ಎಂಬ ಸಂತಸ ನನ್ನಲ್ಲಿದೆ. ಮುಂದೆ ಅವರದ್ಧೇ ಸರಕಾರ ರಚನೆಯಾಗಿ, ಜನಪರ ಕೆಲಸಗಳು ನಡೆದರೆ ನಾನು ಹಾಕಿದ ಮತಕ್ಕೆ ಸಾರ್ಥಕವಾಯಿತು ಎನ್ನಿಸುತ್ತದೆ ಎಂದು ತಿಳಿಸಿದರು.

ರಾಜಾಜಿನಗರದ ಮತಗಟ್ಟೆಯ ಬಳಿ ಮಾತನಾಡಿದ ಪದವಿ ವಿದ್ಯಾರ್ಥಿನಿ ಸೌಮ್ಯ, ನಾನು ಮೊದಲ ಬಾರಿಗೆ ಮತ ಚಲಾವಣೆ ಮಾಡುತ್ತಿದ್ದೇನೆ. ಪ್ರಜಾಪ್ರಭುತ್ವ ದೇಶದಲ್ಲಿ ನಡೆಯುತ್ತಿರುವ ಅತಿದೊಡ್ಡ ಮತದಾನದಲ್ಲಿ ನಾನು ಭಾಗಿದಾರಿಯಾಗಿದ್ದೇನೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ. ನನ್ನ ಮತವನ್ನು ಭ್ರಷ್ಟಾಚಾರ ರಹಿತ, ದೇಶಸೇವೆಗೆ ಆದ್ಯತೆ ನೀಡುವವರಿಗೆ ಹಾಕಿದ್ದೇನೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಹಲವಾರು ಹಿರಿಯರು ಮತದಾನದ ಕುರಿತು ಮಾತನಾಡಿದ್ದು, ನಮಗೆ ಸಿಕ್ಕಿರುವ ಹಕ್ಕನ್ನು ಬಳಸಿಕೊಂಡು ನಮ್ಮವರನ್ನು ಆಯ್ಕೆ ಮಾಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಎಷ್ಟೇ ಕಷ್ಟವಾದರೂ ಬಂದು ಮತ ಹಾಕಿದ್ದೇವೆ. ಹಲವಾರು ವರ್ಷಗಳಿಂದಲೂ ಮತ ಚಲಾವಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಚಾಮರಾಜಪೇಟೆಯ ಮತಗಟ್ಟೆಯೊಂದರ ಬಳಿ 90 ವರ್ಷದ ಮತದಾರೊಬ್ಬರು ಪ್ರತಿಕ್ರಿಯಿಸಿ, ನಾನು ಕಳೆದ 65 ವರ್ಷಗಳಿಂದಲೂ ನಿರಂತರವಾಗಿ ಮತದಾನ ಮಾಡುತ್ತಲೇ ಬಂದಿದ್ದೇನೆ. ಈ ಬಾರಿಯೂ ಮತದಾನ ಮಾಡಿದ್ದೇನೆ. ದೇಶ ಉಳಿಯಬೇಕು ಎಂದರೆ ನಾವು ಮತ ಹಾಕಿ, ಸರಿಯಾದ ಸಂಸದರ ಆಯ್ಕೆ ಮಾಡಿದರೆ, ಉತ್ತಮ ಸರಕಾರ ರಚನೆಯಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X