Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈಸ್ಟರ್ ಹಬ್ಬವನ್ನು ಧರ್ಮ ಬೇಧವಿಲ್ಲದೆ...

ಈಸ್ಟರ್ ಹಬ್ಬವನ್ನು ಧರ್ಮ ಬೇಧವಿಲ್ಲದೆ ಆಚರಿಸೋಣ: ಉಡುಪಿ ಬಿಷಪ್

ವಾರ್ತಾಭಾರತಿವಾರ್ತಾಭಾರತಿ20 April 2019 7:39 PM IST
share
ಈಸ್ಟರ್ ಹಬ್ಬವನ್ನು ಧರ್ಮ ಬೇಧವಿಲ್ಲದೆ ಆಚರಿಸೋಣ: ಉಡುಪಿ ಬಿಷಪ್

ಉಡುಪಿ, ಎ.20: ದ್ವೇಷಕ್ಕಿಂತ ಪ್ರೀತಿ ಹೆಚ್ಚು ಶಕ್ತಿಯುತವಾಗಿರುತ್ತದೆ. ಮಾನವ ಜನಾಂಗದ ಮೇಲೆ ದಯೆ ತೋರುವ ಈಸ್ಟರ್ ಹಬ್ಬವನ್ನು ಜಾತಿ, ಧರ್ಮ ಬೇಧವಿಲ್ಲದೆ ಆಚರಿಸೋಣ. ಈ ಪುನರುತ್ಥಾನ ಹಬ್ಬ ನಮ್ಮೆಲ್ಲರನ್ನು ಕತ್ತಲೆಯಿಂದ ಬೆಳಕಿಗೆ, ಅಸತ್ಯದಿಂದ ಸತ್ಯದೆಡೆಗೆ ದಾಟಿಸಿ ನಮ್ಮನ್ನು ಮರಣ ಭಯದಿಂದ ಮುಕ್ತಗೊಳಿಸಿ ಚಿರಂಜೀವಿಯಾಗಿಸಲಿ. ಎಲ್ಲಾ ಸಹೋದರ, ಸಹೋದರಿಯರಿಗೂ ಪಾಸ್ಖ ಹಬ್ಬದ ಶುಭಾಶಯಗಳು. ಯೇಸುಸ್ವಾಮಿ ಎಲ್ಲರನ್ನು ಸದಾ ಆಶೀರ್ವದಿಸಿ ಕಾಪಾಡಲಿ ಎಂದು ಉಡುಪಿಯ ಧರ್ಮಾಧ್ಯಕ್ಷ ಅತಿ ವಂದನೀಯ ಡಾ.ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಈಸ್ಟರ್ ಹಬ್ಬದ ಸಂದೇಶದಲ್ಲಿ ಹೇಳಿದ್ದಾರೆ.

ನಲ್ವತ್ತು ದಿನಗಳ ತಪಸ್ಸು ಕಾಲದ ವ್ರತದ ಬಳಿಕ ಪವಿತ್ರ ವಾರದ ಕೊನೆಯಲ್ಲಿ ಯೇಸುಕ್ರಿಸ್ತರ ಪಾಡು ಹಾಗೂ ಮರಣಗಳ ಸ್ಮರಣೆಯ ನಂತರ ಆಚರಿಸ ಲಾಗುವ ಮಹೋತ್ಸವವೇ ಈಸ್ಟರ್ ಅಥವಾ ಪುನರುತ್ಥಾನದ ಹಬ್ಬ. ಯೇಸು ಸ್ವಾಮಿಯ ಪುನರುತ್ಥಾನವು ಈ ವಿಶ್ವದ ಚರಿತ್ರೆಯಲ್ಲೇ ನಡೆದ ಅತ್ಯದ್ಭುತ ಘಟನೆ. ಯೇಸುಕ್ರಿಸ್ತರು ಸತ್ತವರೊಳಗಿಂದ ಪುನರುತ್ಥಾನರಾಗಿ ಎದ್ದು ಬಂದು ಲೋಕ ರಕ್ಷಕರೂ, ನಮ್ಮೆಲ್ಲರ ಭರವಸೆಯೂ ಆದರು. ಅವರ ಪುನರುತ್ಥಾನದ ಮೂಲಕ, ಪ್ರತಿ ಮಾನವನಿಗೂ ಅನಂತ ಜೀವದ ನಿರೀಕ್ಷೆ ದೊರಕಿದೆ ಎಂದು ಅವರು ತಿಳಿಸಿದ್ದಾರೆ.

ಯೇಸುವಿನ ಸಾವಿನಿಂದ ಭಯಪಟ್ಟು, ಅಧಿಕಾರಸ್ಥರ ದರ್ಪದಡಿ ಎಲ್ಲಾ ಭರವಸೆಯನ್ನು ಕಳೆದುಕೊಂಡ ಶಿಷ್ಯರು ಹಾಗೂ ಹಿಂಬಾಲಕರಲ್ಲಿ ಸ್ವಾಮಿಯ ಈ ಪುನರುತ್ಥಾನ ಹೊಸ ಚೈತನ್ಯ, ಅಭಯವನ್ನು ನೀಡಿತು. ಅಲ್ಲದೆ ಕ್ರಿಸ್ತನ ಪ್ರೀತಿ ಶಾಂತಿಯ ಸಂದೇಶವನ್ನು ಎಲ್ಲೆಡೆ ಸಾರುವ ಸ್ಪೂರ್ತಿ ತುಂಬಿತ್ತು ಎನ್ನುವ ಸಂದೇಶ ಈ ಹಬ್ಬದ ಮೂಲಕ ಹೊರ ಜಗತ್ತಿಗೆ ರವಾನೆಯಾಗುತ್ತದೆ. ದಾಸ್ಯತ್ವದಿಂದ ಬಳಲುತ್ತಿದ್ದ ತನ್ನ ಜನರನ್ನು ದೇವರು ಬಿಡಿಸಿ ಅವರನ್ನು ಹೊಸ ನಾಡಿಗೆ ಹೊಸ ಬದುಕಿನೆಡೆಗೆ ಕರೆದೊಯ್ದ ನೆನಪಿನ ಅಚರಣೆಯೂ ಈ ಹಬ್ಬವಾಗಿದೆ. ಹೀಗಾಗಿ ಈಸ್ಟರ್ ದೈವತ್ವದ ಪ್ರತಿಪಾದನೆ ಮಾತ್ರವಲ್ಲದೆ, ಹೊಸ ಜೀವನ, ಹೊಸ ಸೃಷ್ಟಿ, ನಮ್ಮಿಳಗಿನ ಹೊಸ ಅನ್ವೇಷಣೆ ಹಾಗೂ ಸಾವೇ ಅಂತಿಮ ಅಲ್ಲ ಎಂಬುದರ ಸಂಕೇತೂ ಹೌದು ಎಂದು ಬಿಷಪ್ ನುಡಿದರು.

ಶಿಲುಬೆಯ ಮೇಲೆ ಮೃತಪಟ್ಟ ಯೇಸುಸ್ವಾಮಿ ಮೂರನೇ ದಿನ ಪುನರುತ್ಥಾನ ರಾದರು. ಮರಣವು ಅವರನ್ನು ಸೋಲಿಸಲು ಅಶಕ್ತವಾಯಿತು. ಅವರು ಮರಣದ ಮೇಲೆ ದಿಗ್ವಿಜಯವನ್ನು ಸಾಧಿಸಿದರು. ನಮ್ಮ ಜೀವನದ ಕಷ್ಟ, ಸಾವು, ನೋವುಗಳು ಅರ್ಥರಹಿತವಲ್ಲ, ಬದಲಾಗಿ ದೇವರು ತಮ್ಮ ಯೋಜನೆಗಳನ್ನು ನಮ್ಮಲ್ಲಿ ಕಾರ್ಯಗತಗೊಳಿಸುವ ಗಾಢ ಅರ್ಥವನ್ನು ಒಳಗೊಂಡಿವೆ. ಕಷ್ಟಗಳಿಂದ ಕ್ಷಣಕಾಲ ನಾವು ವಿಚಲಿತರಾದರೂ, ದೇವರಲ್ಲಿ ಅಚಲ ವಿಶ್ವಾಸವಿಟ್ಟು ಅವರ ಚಿತ್ತಕ್ಕೆ ಮಣಿದರೆ, ನಮ್ಮ ಜೀವನದಲ್ಲೂ ಕಷ್ಟಗಳ ಕತ್ತಲೆ ಕಳೆದು, ಬೆಳಕು ಮೂಡುವುದು ನಿಶ್ಚಿತ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X