Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಹಲ್ಲೆ, ದರೋಡೆ ಪ್ರಕರಣ;...

ಮಂಗಳೂರು: ಹಲ್ಲೆ, ದರೋಡೆ ಪ್ರಕರಣ; ಆರೋಗಳಿಗೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ20 April 2019 8:22 PM IST
share

ಮಂಗಳೂರು, ಎ.20: ನಗರದ ಹಂಪನಕಟ್ಟೆಯ ರೆಡಿಮೇಡ್ ಬಟ್ಟೆ ಮಳಿಗೆ ಮಾಲಕ ಕನ್ನಯಲಾಲ್ ಗುಪ್ತ ಅವರ ಮೇಲೆ ಹಲ್ಲೆಗೈದು ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳಿಗೆ ತಲಾ 7 ವರ್ಷಗಳ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಫರಂಗಿಪೇಟೆಯ ಇರ್ಫಾನ್ (39) ಮತ್ತು ಮುಹಮದ್ ಮುಶ್ತಾಕ್ (30), ಬಿ.ಸಿ.ರೋಡ್ ಶಾಂತಿ ಅಂಗಡಿಯ ಸಮೀರ್ ಕೆ. ಎಂ. (27), ಪುದು ಗ್ರಾಮದ ಮುಹಮದ್ ಇರ್ಫಾನ್ (35) ಮತ್ತು ಮೇರೆಮಜಲಿನ ದಿಲನ್ ಅವಿನಾಶ್ ಕಾರ್ಡೋಜಾ (29) ಶಿಕ್ಷೆಗೊಳಗಾದವರು.

2015ರ ಮಾರ್ಚ್ 13ರಂದು ಸಂಜೆ ಕಾರಿನಲ್ಲಿ ಬಟ್ಟೆ ಮಳಿಗೆಗೆ ನುಗ್ಗಿದ ಈ ಆರೋಪಿಗಳು ಅಲ್ಲಿದ್ದ ಕನ್ನಯಲಾಲ್ ಗುಪ್ತ ಅವರ ಮೇಲೆ ಕಬ್ಬಿಣದ ಪೈಪ್‌ನಿಂದ ಮತ್ತು ಕೈಯಿಂದ ಹಲ್ಲೆ ನಡೆಸಿ ಲ್ಯಾಪ್‌ಟಾಪ್‌ನ್ನು ಎಳೆದು ಫುಟ್‌ಪಾತ್‌ಗೆ ಎಸೆದು ಹಾನಿಗೊಳಿಸಿದ್ದಲ್ಲದೆ ಅವರ ಕಿಸೆಯಲ್ಲಿದ್ದ 2,700 ರೂ. ಮತ್ತು ಡ್ರಾಯರ್‌ನಲ್ಲಿದ್ದ 25,800 ರೂ.ವನ್ನು ದರೋಡೆ ಮಾಡಿಕೊಂಡು ಹೋಗಿದ್ದರು ಎಂದು ಆರೋಪಿಸಲಾಗಿತ್ತು.

ವ್ಯವಹಾರಕ್ಕೆ ಸಂಬಂಧಿಸಿದ ದ್ವೇಷ ಇದಕ್ಕೆ ಕಾರಣ ಎನ್ನಲಾಗಿತ್ತು. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ಶಾಂತಾರಾಂ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲನ ಗೌಡ ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದು ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಶಿಕ್ಷೆಯ ವಿವರ: ಐಪಿಸಿ ಸೆ.143 (ಅಕ್ರಮ ಪ್ರವೇಶ) ಅನ್ವಯ 7 ದಿನಗಳ ಶಿಕ್ಷೆ ಮತ್ತು ತಲಾ 1,000 ರೂ. ದಂಡ. ಐಪಿಸಿ 147 ಮತ್ತು 148 (ದೊಂಬಿ) ಅನ್ವಯ ತಲಾ 1 ತಿಂಗಳ ಸಜೆ ಮತ್ತು 5,000 ರೂ. ದಂಡ, ,ಐಪಿಸಿ 448 (ಅಕ್ರಮ ಕೂಟ) ಅನ್ವಯ 15 ದಿನಗಳ ಶಿಕ್ಷೆ ಮತ್ತು ತಲಾ 1,000 ರೂ.ದಂಡ, ಐಪಿಸಿ 323 (ಕೈಯಿಂದ ಹಲ್ಲೆ) ಅನ್ವಯ 15 ದಿನಗಳ ಸಜೆ ಮತ್ತು ತಲಾ 1,000 ರೂ. ದಂಡ, ಐಪಿಸಿ 324 (ಕಬ್ಬಿಣದ ಪೈಪ್‌ನಿಂದ ಹಲ್ಲೆ) ಅನ್ವಯ 1 ತಿಂಗಳ ಸಜೆ ಮತ್ತು 5,000 ರೂ. ದಂಡ, ಐಪಿಸಿ 427 (ಸೊತ್ತು ನಾಶ) ಅನ್ವಯ 1 ತಿಂಗಳ ಸಜೆ ಮತ್ತು ತಲಾ 1,000 ರೂ. ದಂಡ, ಐಪಿಸಿ 395 (ದರೋಡೆ) ಮತ್ತು ಐಪಿಸಿ 397 (ದರೋಡೆ ವೇಳೆ ಹಲ್ಲೆ) ಅನ್ವಯ 7 ವರ್ಷ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಲಾಗಿದೆ.

ಒಟ್ಟು ದಂಡ ಮೊತ್ತದಲ್ಲಿ 1 ಲಕ್ಷ ರೂ.ಗಳನ್ನು ಸಂತ್ರಸ್ತ, ದೂರುದಾರ ಕನ್ನಯ ಲಾಲ್ ಅವರಿಗೆ ನಷ್ಟ ಪರಿಹಾರವಾಗಿ ಪಾವತಿಸಬೇಕು ಮತ್ತು ಉಳಿದ ಹಣವನ್ನು ಸರಕಾರಕ್ಕೆ ನೀಡಬೇಕೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಹರಿಶ್ಚಂದ್ರ ಉದ್ಯಾವರ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X