Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ ಮಾಡಿದ...

ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ ಮಾಡಿದ ನಾಟ್ಯ ಮಯೂರಿ ತನುಶ್ರೀ ಪಿತ್ರೋಡಿ

ಚೇತನ ನಾಯಕ್ ಕೆ.ಚೇತನ ನಾಯಕ್ ಕೆ.20 April 2019 10:37 PM IST
share
ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ ಮಾಡಿದ ನಾಟ್ಯ ಮಯೂರಿ ತನುಶ್ರೀ ಪಿತ್ರೋಡಿ

ಮಂಗಳೂರು, ಎ.20: ಹತ್ತು ವರ್ಷಗಳ ಎಳೆಯ ಪ್ರತಿಭೆ ನಾಟ್ಯ ಮಯೂರಿ ತನುಶ್ರೀ ಪಿತ್ರೋಡಿಯು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಹಾಗೂ ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ಸೇರಿಸುಂತಹ ಸಾಧನೆ ಮಾಡಿದ್ದಾಳೆ.

ತನ್ನ ಎಂಟನೇ ವಯಸ್ಸಿಗೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮಾಡಿ ತನ್ನ ಸಾಧನೆಯ ಮೆಟ್ಟಿಲುಗಳನ್ನು ಹತ್ತಲು ಆರಂಭಿಸಿದ ತನುಶ್ರೀ, ಪ್ರಸಕ್ತ ಉಡುಪಿಯ ಸೈಂಟ್ ಸಿಸಿಅಸ್ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ.

ಮೂರರ ಹರೆಯದಲ್ಲಿ ಮಾಸ್ಟರ್ ಡ್ಯಾನ್ಸ್ ಗ್ರೂಪ್‌ನಲ್ಲಿ ನೃತ್ಯ ತರಭೇತಿ ಆರಂಭಿಸಿ ಮುದ್ದುಕೃಷ್ಣ ಸ್ಪರ್ಧೆ, ನೃತ್ಯ ಕಾರ್ಯಕ್ರಮವನ್ನು ನೀಡುವುದರ ಮೂಲಕ ಮನೆ ಮಾತಾಗಿದ್ದಳು. ಸ್ಪಂದನ ಟಿವಿ ವಾಹಿನಿ ನಡೆಸಿದ ರಿಯಾಲಿಟಿ ಶೋನಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ತನುಶ್ರೀ. ಕಲರ್ಸ್‌ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮ ಮಜಾ ಟಾಕೀಸ್‌ನ 150ನೇ ವಿಶೇಷ ಸಂಚಿಕೆಯಲ್ಲಿ ಮತ್ತು 2ನೇ ಸೂಪರ್ ಸಂಚಿಕೆಯಲ್ಲಿ ನೃತ್ಯ ಕಾರ್ಯಕ್ರಮ ನೀಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಳು. ಪ್ರಸಕ್ತ ಅಕಾಡಮಿ ಆಫ್ ಮೂಸ್ಯಿಕ್ ಮತ್ತು ಫೈನ್ ಆರ್ಟ್ಸ್ ಮುಕುಂದಕೃಪಾದ ನೃತ್ಯ ಗುರು ರಾಮಕೃಷ್ಣ ಕೊಡಂಚರಿಂದ ಭರತನಾಟ್ಯ ತರಭೇತಿ ಪಡೆಯುತ್ತಿದ್ದಾಳೆ. ಮೂರನೇ ವಯಸ್ಸಿನಲ್ಲೇ ನೃತ್ಯ ಹಾಗೂ ಸ್ಟಂಟ್ ಮಾಡುವುದರಲ್ಲಿ ನಿಪುಣಳಾಗಿದ್ದ ತನುಶ್ರೀ, ಯೋಗಾಸನದಲ್ಲಿಯೂ ಆಸಕ್ತಿ ಬೆಳೆಸಿಕೊಂಡಳು.

ತನ್ನ ಎಂಟನೇ ವಯಸ್ಸಿಗೆ ನೀರಾಲಂಭ ಪೂರ್ಣ ಚಕ್ರಾಸನ ಎಂಬ ಕಠಿಣ ಯೋಗವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಪ್ರಥಮ ವಿಶ್ವ ದಾಖಲೆ ಮಾಡಿರುವ ಆಕೆ, 9ನೇ ಹರೆಯದಲ್ಲಿ ಪಿತ್ರೋಡಿ ವೆಂಕಟರಮಣ ಸ್ಪೋರ್ಟ್ಸ್ ಮತ್ತು ಕಲ್ಚರಲ್ಸ್‌ನ ನೇತೃತ್ವದಲ್ಲಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ ‘ಮೋಸ್ಟ್ ಬಾಡಿ ರೆವಲ್ಯೂಷನ್ ಮೈಂಟೇನಿಂಗ್ ಅ ಚೆಸ್ಟ್ ಸ್ಟಾಂಡ್ ಪೊಸಿಷನ್’ ಯೋಗಾಸನ ಭಂಗಿಯನ್ನು ಒಂದು ನಿಮಿಷದಲ್ಲಿ 42 ಬಾರಿ ಮಾಡುವ ಮೂಲಕ ದ್ವತೀಯ ವಿಶ್ವ ದಾಖಲೆ ಮಾಡಿರುವ ತನುಶ್ರೀ, 2019ರ ಫೆ.23ರಂದು ಧನುರಾಸನ ಎಂಬ ಯೋಗಾಸನದ ಭಂಗಿಯನ್ನು 61 ಬಾರಿ ರೋಲ್ ಮಾಡುವುರ ಮೂಲಕ 3ನೇ ವಿಶ್ವ ಧಾಖಲೆ ಮಾಡಿದ್ದಾಳೆ. ಇದೇ ಸಂದರ್ಭ ಮತ್ತೊಂದು ಸವಾಲು ಸ್ವೀಕರಿಸಿ ಧನುರಾಸನ ಭಂಗಿಯನ್ನು 96 ಬಾರಿ ಒಂದು ನಿಮಿಷ ಮತ್ತು 40 ಸೆಕೆಂಡುಗಳಲ್ಲಿ ಮಾಡಿ ಮುಗಿಸಿ, ದಾಖಲೆ ನಿರ್ಮಿಸಿರುವ ತನುಶ್ರೀ, ಉದಯಕುಮಾರ್ ಮತ್ತು ಸಂಧ್ಯಾ ದಂಪತಿ ಪುತ್ರಿಯಾಗಿದ್ದು, ರೀತುಶ್ರೀ ಸಹೋದರಿಯಾಗಿದ್ದಾಳೆ.

 ಬೆಂಗಳೂರಿಗೆ ಹೋಗಿದ್ದಾಗ ಕಂಡ ಪತ್ರಿಕಾ ವರದಿಯೊಂದರಲ್ಲಿ ಮೈಸೂರಿನ ಖುಷಿ ಎಂಬವರು ಯೋಗಾಸನದ ಒಂದು ಭಂಗಿಯನ್ನು ಒಂದು ನಿಮಿಷದಲ್ಲಿ 18 ಬಾರಿ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದ ಬಗ್ಗೆ ವರದಿಯಾಗಿತ್ತು. ನಾನು ಮನೆಗೆ ಹಿಂತಿರುಗಿದ ನಂತರ ಪ್ರಯತ್ನಸಿದೆ ನನಗೆ 9 ಬಾರಿ ಮಾತ್ರ ಸಾಧ್ಯವಾಯಿತು. ಸತತ ಪ್ರಯತ್ನದ ಫಲವಾಗಿ ನನಗೆ 19 ಬಾರಿ ಒಂದು ನಿಮಿಷದಲ್ಲಿ ಮಾಡಿ ಅವರ ರೆಕಾರ್ಡ್ ಬ್ರೇಕ್ ಮಾಡಲು ಸಾಧ್ಯವಾಯಿತು. ಇದೇ ನನ್ನ ಮೊದಲನೇ ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ಗೆ ಸಹಾಯವಾಯಿತು.

13ನೇ ವಯಸ್ಸಿನ ಫ್ಯಾಲಸ್ತೀನ್‌ನ ಮುಹಮ್ಮದ್ ಅಲಿ ಶೇಕ್ ಯೋಗಾಸನ ಭಂಗಿಯನ್ನು ಒಂದು ನಿಮಿಷದಲ್ಲಿ 38 ಬಾರಿ ಮಾಡುವುದರ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದ್ದರು. ನಾನು 42 ಬಾರಿ ಮಾಡುವ ಮೂಲಕ ಈ ರೆಕಾರ್ಡ್ ಬ್ರೇಕ್ ಮಾಡಿದೆ. ಮತ್ತೊಂದು ಖುಷಿಯ ಸಂಗತಿಯೆಂದರೆ 3ನೇ ನನ್ನ ರೆಕಾರ್ಡ್‌ನ್ನು ಇಲ್ಲಿಯವರೆಗೆ ಯಾರೂ ಮುರಿಯಲು ಸಾಧ್ಯವಾಗಿಲ್ಲ.

''ತನುಶ್ರೀಯ ಸಾಧನೆಯನ್ನ ಯಾವ ಸಂದರ್ಭದಲ್ಲಿಯೂ ನಿಲ್ಲಿಸದೆ ಹೆಮ್ಮರವಾಗುವಂತೆ ಬೆಳೆಸುವುದು ನನ್ನ ಉದ್ದೇಶವಾಗಿದೆ. ಈ ಗಿನ್ನಸ್ ವಿಶ್ವ ದಾಖಲೆ ಮಾಡಲು ನಾನು ಸುಮಾರು 6.30ರಿಂದ 7 ಲಕ್ಷ ರೂ. ವರಗೆ ಸ್ವಂತ ಖರ್ಚು ಮಾಡಿದ್ದು, ಸರಕಾರದಿಂದ ಯಾವುದೇ ಸಹಕಾರ ದೊರಕದಿರುವುದು ಬಹಳ ಬೇಸರ ತಂದಿದೆ. ಯಾರಾದರೂ ಅಧಿಕಾರಿಗಳನ್ನು ಭೇಟಿಯಾಗಿ ಈ ಬಗ್ಗೆ ವಿವರಿಸಿದರೆ ಭಾರತದಲ್ಲಿ ಯೋಗಕ್ಕೆ ಅಷ್ಟು ಮಾನ್ಯತೆಯಿಲ್ಲ ಎಂದು ಹೇಳಿ ಸುಮ್ಮನಾಗುತ್ತಾರೆ''
-ಉದಯ್ ಕುಮಾರ್, ತನುಶ್ರೀ ತಂದೆ

share
ಚೇತನ ನಾಯಕ್ ಕೆ.
ಚೇತನ ನಾಯಕ್ ಕೆ.
Next Story
X