Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏಕಭಾಷೆಯ ಹೇರಿಕೆಯಿಂದ ಹಲವು ನುಡಿಗಳ...

ಏಕಭಾಷೆಯ ಹೇರಿಕೆಯಿಂದ ಹಲವು ನುಡಿಗಳ ಹತ್ಯೆ: ಲೇಖಕ ಡಾ. ಚಲಪತಿ

ವಾರ್ತಾಭಾರತಿವಾರ್ತಾಭಾರತಿ20 April 2019 11:07 PM IST
share

ಬೆಂಗಳೂರು, ಎ.20: ಪ್ರಭುತ್ವವು ಒಂದು ದೇಶ, ಒಂದು ಸಂಸ್ಕೃತಿ ಹಾಗೂ ಒಂದು ಭಾಷೆಯ ಬಲವಂತದ ಹೇರಿಕೆಯಿಂದಾಗಿ ಹಲವು ನುಡಿಗಳ ಹತ್ಯೆಗೆ ಕಾರಣವಾಗುತ್ತಿದೆ ಎಂದು ಲೇಖಕ ಡಾ.ಆರ್.ಚಲಪತಿ ಅಭಿಪ್ರಾಯಿಸಿದರು.

ಶನಿವಾರ ಬಯಲು ಬಳಗ ನಗರದ ಸರಕಾರಿ ಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ಹಿರಿಯ ಸಂಸ್ಕೃತಿ ಚಿಂತಕ ಕೆ.ವಿ.ನಾರಾಯಣ ಅವರ ‘ನುಡಿಗಳ ಅಳಿವು’ ಕೃತಿಯ ಕುರಿತು ಮಾತನಾಡಿದ ಅವರು, ನುಡಿಗಳ ವೈವಿಧ್ಯತೆ ಪ್ರಗತಿಗೆ ಕಾರಣವಾಗಬಹುದು, ಸಂವಹನಕ್ಕೆ ಮಾರಕವಾಗಬಹುದು ಎಂಬ ನೆಪಗಳಿಂದ ಹಲವು ನುಡಿಗಳನ್ನು ಇಲ್ಲವಾಗಿಸಿ, ಏಕ ಭಾಷೆಯನ್ನು ಜಾರಿಗೆ ತರುವ ಬಲವಂತದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯುನೆಸ್ಕೋ ಅಧ್ಯಯನದ ಪ್ರಕಾರ ಜಗತ್ತಿನಲ್ಲಿ ಸುಮಾರು 7 ಸಾವಿರಕ್ಕೂ ಹೆಚ್ಚು ಭಾಷೆಗಳಿವೆ. ಈ ಶತಮಾನ ಕಳೆಯುವಷ್ಟರಲ್ಲಿ ಇದರಲ್ಲಿ ಶೇ.50ರಷ್ಟು ಭಾಷೆಗಳು ಇಲ್ಲವಾಗಬಹುದು. ಇಲ್ಲವೆ ಬಳಕೆಯ ವಲಯಗಳು ಕುಗ್ಗಬಹುದು ಹಾಗೂ ಈ ಸಮುದಾಯಗಳ ಸಂಖ್ಯೆಯು ಕಡಿಮೆ ಆಗುತ್ತಾ ಹೋಗಬಹುದು ಎಂದು ಅವರು ಹೇಳಿದರು.

ದೇಶದ ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಕಾರಣಗಳು ಹಲವು ನುಡಿಗಳ ಹತ್ಯೆಗೆ ಕಾರಣವಾಗಬಹುದು. ಹಾಗೂ ಬುಡಕಟ್ಟು ಸಮುದಾಯಗಳ ಭಾಷೆಗಳು ಸಂಪರ್ಕದ ಕೊರತೆಯಿಂದಾಗಿ ನಶಿಸುವ ಅಪಾಯವಿದೆ. ಆದರೆ, ಪ್ರಭುತ್ವಗಳು ಇಚ್ಛಾಶಕ್ತಿ ಪ್ರದರ್ಶಿಸಿದರೆ ನುಡಿಗಳನ್ನು ಉಳಿಸಿಕೊಳ್ಳುವಂತಹ ವಾತಾವರಣವನ್ನು ನಿರ್ಮಿಸಬಹುದಾಗಿದೆ ಎಂದು ಅವರು ಹೇಳಿದರು.

ಯುನೆಸ್ಕೋ ಪ್ರಪಂಚದಾದ್ಯಂತ ಹಲವು ನುಡಿಗಳು ನಶಿಸುತ್ತಿವೆ ಎಂದು ಹೇಳುತ್ತಿದೆಯೇ ವಿನಃ ಅದಕ್ಕೆ ಕಾರಣಗಳೇನು ಎಂದು ಸಂಶೋಧಿಸುತ್ತಿಲ್ಲ. ಕೇವಲ ಅಧಿಕಾರ ಕೇಂದ್ರಗಳ ಹಿತಾಸಕ್ತಿಗಳ ಆಧಾರದಲ್ಲಿ ಅಧ್ಯಯನಗಳು ನಡೆಯುತ್ತಿವೆಯೇ ಹೊರತು ತಳಸ್ಪರ್ಶಿಯಾದ, ಸಮುದಾಯದ ಹಿತಾಸಕ್ತಿಯನ್ನು ಒಳಗೊಂಡ ಅಧ್ಯಯನಗಳು ನಡೆಯುತ್ತಿಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದರು.

ಸಂವಾದದಲ್ಲಿ ನಾಟಕಕಾರ ಕೆ.ವೈ.ನಾರಾಯಣಸ್ವಾಮಿ, ಪತ್ರಕರ್ತ ಮಂಜುನಾಥ ಅದ್ದೆ, ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಬಯಲು ಬಳಗದ ಹುಲಿಕುಂಟೆ ಮೂರ್ತಿ, ಪ್ರಕಾಶ್ ಮಂಟೇದ, ಮಂಜುನಾರಾಯಣ್ ಮತ್ತಿತರರಿದ್ದರು.

ನುಡಿಗಳು ಸಮುದಾಯದೊಂದಿಗೆ ತಳಕು ಹಾಕಿಕೊಂಡಿರುತ್ತವೆ. ಹೀಗಾಗಿ ಕೇವಲ ನುಡಿಗಳನ್ನು ಮಾತ್ರ ಅಧ್ಯಯನ ಮಾಡುವುದರಿಂದ ಯಾವುದೆ ಪ್ರಯೋಜನವಿಲ್ಲ. ಆ ನುಡಿಯನ್ನು ಮಾತನಾಡುತ್ತಿರುವ ಜನಸಮುದಾಯ ಎದುರಿಸುತ್ತಿರುವ ರಾಜಕೀಯ, ಸಾಂಸ್ಕೃತಿಕ ಬಿಕ್ಕಟ್ಟುಗಳನ್ನು ಪರಿಹರಿಸುವುದರ ಮೂಲಕವೆ ಆಯಾ ಸಮುದಾಯದ ನುಡಿಗಳನ್ನು ಉಳಿಸಿಕೊಳ್ಳಲು ಸಾಧ್ಯವಿದೆ.

-ಡಾ.ಆರ್.ಚಲಪತಿ, ಲೇಖಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X