Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಲ್ ಅಮೀನ್ ಸಂಸ್ಥೆಯ ಸಾರ್ಥಕ ಸೇವೆ: 24...

ಅಲ್ ಅಮೀನ್ ಸಂಸ್ಥೆಯ ಸಾರ್ಥಕ ಸೇವೆ: 24 ಬಡ ಕನ್ಯೆಯರ ಸಾಮೂಹಿಕ ವಿವಾಹ

ಮಡಿಕೇರಿಯಲ್ಲಿ ಸಂಭ್ರಮದಿಂದ ಜರುಗಿದ ಮದುವೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ21 April 2019 5:35 PM IST
share
ಅಲ್ ಅಮೀನ್ ಸಂಸ್ಥೆಯ ಸಾರ್ಥಕ ಸೇವೆ: 24 ಬಡ ಕನ್ಯೆಯರ ಸಾಮೂಹಿಕ ವಿವಾಹ

ಮಡಿಕೇರಿ, ಎ.21: ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿನ 24 ಬಡ ಕನ್ಯೆಯರ ಸಾಮೂಹಿಕ ವಿವಾಹ ಸಮಾರಂಭ ನಗರದ ಕಾವೇರಿ ಹಾಲ್‍ನಲ್ಲಿ ಸಂಭ್ರಮದಿಂದ ನೆರವೇರಿತು.

ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರಾದ ಎಫ್.ಎ.ಮೊಹಮ್ಮದ್ ಹಾಜಿ, ಸಮಿತಿಯ ಮಹಾ ಪೋಷಕರು ಹಾಗೂ ಮಾಜಿ ಶಾಸಕರಾದ ಕೆ.ಎಂ. ಇಬ್ರಾಹಿಂ ಮತ್ತು ಗಣ್ಯರ ಸಮ್ಮುಖದಲ್ಲಿ ಕೇರಳದ ವಡಗರದ ಅಬ್ದುಲ್ ಸಲಾಂ ಖಾಸಿಮಿ ತಂಙಳ್ ಮತ್ತು ಮೊಹಮ್ಮದ್ ಫೈಝಿ ಅವರ ನೇತೃತ್ವದಲ್ಲಿ ‘ನಿಖಾ’ ಕಾರ್ಯಕ್ರಮ ನಡೆಯಿತು. 

ಸಾಮೂಹಿಕ ವಿವಾಹದಲ್ಲಿ ಮಡಿಕೇರಿ, ಕುಶಾಲನಗರ, ಕೊಪ್ಪ, ಗೊಂದಿ ಬಸವನಹಳ್ಳಿ, ಕರ್ಣಂಗೇರಿ, ರಂಗಸಮುದ್ರ, ಕಾನ್‍ಬೈಲ್, ಬೆಂಬಳೂರು, ಹೊಸಕೋಟೆ, ಕಂಡಕೆರೆ, ಕಡಗದಾಳು, ಶನಿವಾರಸಂತೆ, ಕೊಡ್ಲಿಪೇಟೆ, ನಾಪೋಕ್ಲು, ಅಭ್ಯತ್‍ಮಂಗಲ, ಗರಗಂದೂರು, ಗೋಣಿಕೊಪ್ಪ, ತಿತಿಮತಿ ಮತ್ತು ಪಿರಿಯಾಪಟ್ಟಣದ 24 ಬಡ ಮತ್ತು ಅನಾಥ ಹೆಣ್ಣು ಮಕ್ಕಳು ನವಜೀವನಕ್ಕೆ ಕಾಲಿರಿಸಿದರು. ವಿವಾಹದ ಹಿನ್ನೆಲೆಯಲ್ಲಿ ಪ್ರತಿ ವಧುವಿಗೆ ಸಮಿತಿಯಿಂದ 5 ಪವನ್ ಚಿನ್ನಾಭರಣ, ಉಡುಪು ಮತ್ತು ವರನಿಗೆ ವಸ್ತ್ರಗಳನ್ನು ಉಚಿತವಾಗಿ ಒದಗಿಸಿರುವುದು ವಿಶೇಷ. 

ಸರಳ ವಿವಾಹಕ್ಕೆ ಒತ್ತು ನೀಡಿ- ಸಾಮೂಹಿಕ ವಿವಾಹ ಸಮಾರಂಭವನ್ನು ಉದ್ಘಾಟಿಸಿದ ಸಮಿತಿಯ ಮಹಾಪೋಷಕರು ಹಾಗೂ ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾತನಾಡಿ, ಲಕ್ಷಾಂತರ ಹಣವನ್ನು ವಿವಾಹ ಸಮಾರಂಭಕ್ಕೆ ವ್ಯಯಿಸುವುದಕ್ಕೆ ಬದಲಾಗಿ, ಸರಳ ವಿವಾಹಕ್ಕೆ ಒತ್ತು ನೀಡುವ ಅಗತ್ಯವಿದೆಯೆಂದು ಅಭಿಪ್ರಾಯಿಸಿದರು.

ದಶಕಗಳ ಹಿಂದೆ ಲತೀಫ್ ಹಾಜಿ ಅವರಿಂದ ಸ್ಥಾಪಿಸಲ್ಪಟ್ಟ ಅಲ್ ಅಮೀನ್ ಸಂಘಟನೆ ವರ್ಷಂಪ್ರತಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಆಯೋಜನೆಗೆ ಒಂದೆರಡು ತಿಂಗಳ ಕಾಲ ಅವಿಶ್ರಾಂತವಾಗಿ ಶ್ರಮಿಸುವ ಬಗ್ಗೆ ಮೆಚ್ಚುಗೆ ವ್ಯಕಪಡಿಸಿ, ಸಮಾಜದ ಬಡ ವರ್ಗದ ಮತ್ತು ಅನಾಥ ಹೆಣ್ಣು ಮಕ್ಕಳಿಗೆ ನೂತನ ಬದುಕನ್ನು ಕಟ್ಟಿಕೊಡುವ ಸಮಿತಿಯ ಪ್ರ್ರಯತ್ನಕ್ಕೆ ಸಾಕಷ್ಟು ಮಂದಿ ದಾನಿಗಳು ನೆರವನ್ನು ನೀಡುತ್ತಾ ಬರುತ್ತಿದ್ದಾರೆ. ಮತ್ತಷ್ಟು ಮಂದಿ ಇಂತಹ ವಿವಾಹ ಕಾರ್ಯಗಳ ಆಯೋಜನೆಗೆ ನೆರವಿನ ಹಸ್ತವನ್ನು ನೀಡುವ ಅಗತ್ಯವಿದೆಯೆಂದು ಅನಿಸಿಕೆ ವ್ಯಕ್ತಪಡಿಸಿದರು.

ಬಡ, ಅನಾಥ ಹೆಣ್ಣು ಮಕ್ಕಳ ವಿವಾಹಕ್ಕೆ ನೆರವಾಗುವುದು ಬದುಕಿನ ಉತ್ತಮ ಕಾರ್ಯಗಳಲ್ಲಿ ಒಂದು ಎಂದು ಅಭಿಪ್ರಾಯಿಸಿದ ಕೆ.ಎಂ. ಇಬ್ರಾಹಿಂ, ಪ್ರಸ್ತುತ ವ್ಯವಸ್ಥೆಯಲ್ಲಿ ದೇವರ ಇಚ್ಛೆಗೆ ವಿರುದ್ಧವಾದ ಕೆಲಸ ಕಾರ್ಯಗಳನ್ನು ನಡೆಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಇಂತಹ ಸಲ್ಲದ ಕಾರ್ಯಗಳ ಹಿನ್ನೆಲೆಯಲ್ಲಿ ಪ್ರಕೃತಿ ಮುನಿದು ಅನಾಹುತಗಳು ಘಟಿಸುತ್ತಿರುವುದಾಗಿ ತಿಳಿಸಿ, ದೇವರು ಮೆಚ್ಚುವ ಒಳಿತಿನ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಬದ್ರಿಯಾ ಮಸೀದಿಯ ಖತೀಬರಾದ ಉಮರ್ ಸಖಾಫಿ ಮಾತನಾಡಿ, ಕಳೆದ 13 ವರ್ಷಗಳಲ್ಲಿ ಅಲ್ ಅಮೀನ್ ಸಂಸ್ಥೆ ನೂರಾರು ಬಡ ಮತ್ತು ಅನಾಥ ಹೆಣ್ಣು ಮಕ್ಕಳ ವಿವಾಹವನ್ನು ನೆರವೇರಿಸುವ ಮೂಲಕ ಅವರೆಲ್ಲರಿಗೂ ಹೊಸ ಬದುಕನ್ನು ಕಲ್ಪಸಿಕೊಡುವ ಉತ್ತಮ ಕಾರ್ಯ ಮಾಡಿದೆಯೆಂದು ಮೆಚ್ಚುಗೆಯ ನುಡಿಗಳನ್ನಾಡಿದರು.

ದಾನಿಗಳಾದ ಚೇರಂಬಾಣೆಯ ಮಮ್ಮು ಹಾಜಿ ಅವರು ಮಾತನಾಡಿದರು. ಸಮಿತಿಯ ಪ್ರಮುಖರಾದ ಎಂ.ಇ. ಮುಹಮ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಲ್ ಅಮೀನ್ ಸಂಸ್ಥೆ ಕಳೆದ 13 ವರ್ಷಗಳಲ್ಲಿ  ವರ್ಷಕ್ಕೆ ಅಂದಾಜು 25 ರಂತೆ 331 ಅನಾಥ ಮತ್ತು ಬಡ ಹೆಚ್ಚು ಮಕ್ಕಳ ವಿವಾಹವನ್ನು ನಡೆಸಿಕೊಡುವ ಕಾರ್ಯವನ್ನು ಮಾಡಿದೆ. ಮುಂಬರುವ ದಿನಗಳಲ್ಲಿ ಈ ಸಾಮೂಹಿಕ ವಿವಾಹದ ಮೂಲಕ ಬದುಕು ಕಟ್ಟಿಕೊಮಡಿರುವ ದಂಪತಿಗಳ ವಿಶೇಷ ಸಭೆಯನ್ನು ನಡೆಸುವ ಉದ್ದೇಶ ಇರುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಸುಬೇದಾರ್ ಮೇಜರ್(ನಿವೃತ್ತ) ಸಿ.ಎಂ.ಸೋಮಯ್ಯ, ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷರಾದ ಎಫ್.ಎಂ.ಮುಹಮ್ಮದ್ ಹಾಜಿ, ಪೆರುಂಬಾಡಿ ಯತೀಂ ಖಾನದ ಅಧ್ಯಕ್ಷ ಬಶೀರ್ ಹಾಜಿ, ದಾನಿಗಳಾದ ಚೆನ್ನೈನ ಉದ್ಯಮಿ ಸದಕ್ ಆಲಿ, ಉದ್ಯಮಿ ಎಸ್.ಎಂ.ಹುಸೈನ್ ಸೇರಿದಂತೆ ಹಲ ಗಣ್ಯರು ಉಪಸ್ಥಿತರಿದ್ದರು. ಬದ್ರಿಯಾ ಮಸೀದಿ ಖತೀಬಬ್ ಉಮರ್ ಸಖಾಫಿ ಪ್ರಾರ್ಥಿಸಿ, ಸಮಿತಿಯ ಪ್ರಚಾರ ಕಾರ್ಯದರ್ಶಿ ಎಂ.ಇ.ಮೊಯಿದ್ದೀನ್ ಸ್ವಾಗತಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X