Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಟ್ ಏರ್‌ವೇಸ್ ಸಮಸ್ಯೆ: ಕಾನೂನು...

ಜೆಟ್ ಏರ್‌ವೇಸ್ ಸಮಸ್ಯೆ: ಕಾನೂನು ಚೌಕಟ್ಟಿನ ಹೊರಗೆ ಇರ್ತ್ಯಥಕ್ಕೆ ಬ್ಯಾಂಕ್‌ಗಳ ಯೋಜನೆ

ವಾರ್ತಾಭಾರತಿವಾರ್ತಾಭಾರತಿ21 April 2019 10:00 PM IST
share
ಜೆಟ್ ಏರ್‌ವೇಸ್ ಸಮಸ್ಯೆ: ಕಾನೂನು ಚೌಕಟ್ಟಿನ ಹೊರಗೆ ಇರ್ತ್ಯಥಕ್ಕೆ ಬ್ಯಾಂಕ್‌ಗಳ ಯೋಜನೆ

ಹೊಸದಿಲ್ಲಿ, ಎ.21: ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ‌ಏರ್‌ವೇಸ್‌ನಿಂದ ಬರಬೇಕಿರುವ ಸಾಲವನ್ನು ವಸೂಲಿ ಮಾಡುವ ವಿಧಾನಗಳ ಬಗ್ಗೆ ಚಿಂತನೆ ನಡೆಸಿರುವ ಸಾಲದಾತರು, ಇದೀಗ ಚಾಲನೆ ದೊರೆತಿರುವ ಬಿಡ್ಡಿಂಗ್ ಪ್ರಕ್ರಿಯೆ ವಿಫಲವಾದರೆ ದಿವಾಳಿತನ ಕಾನೂನಿನ ಚೌಕಟ್ಟಿನಿಂದ ಹೊರಗಡೆ ಒಂದು ಸೂಕ್ತ ತೀರ್ಮಾನ ಕೈಗೊಳ್ಳಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 8,500 ಕೋಟಿ ರೂ.ಗೂ ಅಧಿಕ ಸಾಲದ ಹೊರೆಯಲ್ಲಿರುವ ಜೆಟ್‌ಏರ್‌ವೇಸ್‌ಗೆ ಹೆಚ್ಚುವರಿ ತುರ್ತು ಹಣ ಒದಗಿಸಲು ಸಾಲದಾತರು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಾಲ ನೀಡಿರುವ ಏಳು ಸ್ಥಳೀಯ ಬ್ಯಾಂಕ್‌ಗಳಲ್ಲಿ ಪ್ರಮುಖ ಸಾಲದಾತನಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಜೆಟ್‌ಏರ್‌ವೇಸ್‌ನ ಶೇರುಗಳ ಮಾರಾಟಕ್ಕೆ ಬಿಡ್ಡಿಂಗ್ ಪ್ರಕ್ರಿಯೆ ಆರಂಭಿಸಿದ್ದು ಮುಂದಿನ ತಿಂಗಳು ಸಂಭಾವ್ಯ ಬಿಡ್ಡರ್‌ಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ತಿಳಿಸಿದೆ.

 ಸಾಲ ನೀಡಿರುವ ಬ್ಯಾಂಕ್‌ಗಳು ಬಿಡ್ಡಿಂಗ್ ಪ್ರಕ್ರಿಯೆ ಯಶಸ್ವಿಯಾಗುವ ಬಗ್ಗೆ ಭರವಸೆ ಹೊಂದಿವೆ. ಒಂದು ವೇಳೆ ಯಶಸ್ವಿಯಾಗದಿದ್ದರೆ ಆಗ ಅನುಸರಿಸಬೇಕಾದ ‘ಬಿ’ ಯೋಜನೆಯನ್ನು ರೂಪಿಸಲಾಗುತ್ತಿದೆ. ಎಂದು ಮೂಲಗಳು ತಿಳಿಸಿವೆ. ಅಸ್ತಿತ್ವದಲ್ಲಿರುವ ಸೆಕ್ಯುರಿಟಿ (ಶೇರು, ಡಿಬೆಂಚರ್, ಬಾಂಡ್‌ಗಳು ಇತ್ಯಾದಿ) ಮತ್ತು ಭೌತಿಕ ಆಸ್ತಿಗಳನ್ನು ಆಧಾರವಾಗಿಟ್ಟುಕೊಂಡು ವಸೂಲಿ ಮಾಡುವುದಕ್ಕೆ ಹೆಚ್ಚಿನ ಒಲವು ವ್ಯಕ್ತವಾಗಿದೆ.

 ಹಾಲಿ ಕಾನೂನಿನಂತೆ ಯಾವುದೇ ಪ್ರಕ್ರಿಯೆ ಆರಂಭಿಸಲು ನ್ಯಾಷನಲ್ ಕಂಪೆನಿ ಲಾ ಟ್ರಿಬ್ಯುನಲ್(ಎನ್‌ಸಿಎಲ್‌ಟಿ)ನ ಅನುಮೋದನೆ ಪಡೆಯಬೇಕಿದೆ. ಆದರೆ ಬಿ ಯೋಜನೆ ಎನ್‌ಸಿಎಲ್‌ಟಿಯ ವ್ಯಾಪ್ತಿಗಿಂತ ಹೊರತಾಗಿದೆ. ಬಿ ಯೋಜನೆಯಿಂದ ಜೆಟ್‌ಏರ್‌ವೇಸ್‌ನ ವಿಮಾನಗಳು ಹಾಗೂ ಇತರ ಭೌತಿಕ ಆಸ್ತಿಗಳಿಗೆ ಅಧಿಕ ವೌಲ್ಯ ದೊರಕಬಹುದು ಎಂದು ನಿರೀಕ್ಷಿಸಲಾಗಿದೆ. ಎತಿಹಾದ್ ಏರ್‌ವೇಸ್, ಟಿಪಿಜಿ ಕ್ಯಾಪಿಟಲ್, ಇಂಡಿಗೊ ಪಾಟ್ನರ್ಸ್ ಹಾಗೂ ನ್ಯಾಷನಲ್ ಇನ್‌ವೆಸ್ಟ್‌ಮೆಂಟ್ ಆ್ಯಂಡ್ ಇನ್‌ಫ್ರಾಸ್ಟ್ರಕ್ಚರ್ ಫಂಡ್(ಎನ್‌ಐಐಎಫ್) ಜೆಟ್ ಏರ್‌ವೇಸ್‌ನ ಮೇಲೆ ಹಕ್ಕು ಸಾಧಿಸಲು ಆಸಕ್ತಿ ಹೊಂದಿವೆ ಎನ್ನಲಾಗಿದೆ. ಮೇ 10ರಂದು ಬಿಡ್ಡಿಂಗ್ ಪ್ರಕ್ರಿಯೆಯ ಫಲಿತಾಂಶ ದೊರಕಲಿದ್ದು, ಈ ಮಧ್ಯೆ ಜೆಟ್ ಏರ್‌ವೇಸ್‌ನ 16 ಸ್ವಂತ ವಿಮಾನಗಳನ್ನು ಬಳಸಿಕೊಳ್ಳುವುದೂ ಸೇರಿದಂತೆ ಇತರ ವಿಧಾನಗಳಿಂದ ಆರ್ಥಿಕ ಸಂಪನ್ಮೂಲ ಗಳಿಸಿಕೊಳ್ಳಲು ಸಾಲದಾತ ಬ್ಯಾಂಕ್‌ಗಳು ನಿರ್ಧರಿಸಿವೆ.

ಜೆಟ್ ಏರ್‌ವೇಸ್ ನಷ್ಟದತ್ತ ಜಾರುವಾಗಲೇ ಸಾಲದಾತ ಬ್ಯಾಂಕ್‌ಗಳು ಸಂಸ್ಥೆಯ ಜೊತೆ ಸಂಪರ್ಕದಲ್ಲಿದ್ದು, ನಿರ್ದಿಷ್ಟ ಯೋಜನೆಯನ್ನು ರೂಪಿಸಿ ನಿರ್ಣಯ ಕೈಗೊಳ್ಳುವಂತೆ ಕಳೆದ 9 ತಿಂಗಳಿಂದ ಜೆಟ್ ಏರ್‌ವೇಸ್‌ನ ಆಡಳಿತ ಮಂಡಳಿಯನ್ನು ಆಗ್ರಹಿಸುತ್ತಿದ್ದವು. ದುರದೃಷ್ಟವಶಾತ್ ಸಂಸ್ಥೆಯ ನಿರ್ದೇಶಕರು ಹಾಗೂ ಆಡಳಿತ ಮಂಡಳಿ ನಿರ್ಣಯ ರೂಪಿಸಲು ವಿಳಂಬಿಸಿರುವುದು ಈಗಿನ ದುಸ್ಥಿತಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X